ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ


Team Udayavani, Sep 12, 2022, 6:40 AM IST

ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ

ನವದೆಹಲಿ: ದೇಶದಲ್ಲಿ ಆರ್ಥಿಕ ಅಪರಾಧಗಳ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ದಾಳಿಗಳ ಪ್ರಮಾಣ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ.

ಜತೆಗೆ ಈ ದಾಳಿಗಳ ವೇಳೆ 1 ಲಕ್ಷ ಕೋಟಿ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ. 2004ರಿಂದ 2014ರ ವರೆಗೆ ಇ.ಡಿ. ಕೇವಲ 112 ದಾಳಿಗಳನ್ನು ನಡೆಸಿದ್ದರೆ, 2014ರಿಂದ 2022ರವರೆಗೆ 3,010 ದಾಳಿಗಳನ್ನು ನಡೆಸಲಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 27ರಷ್ಟು ಹೆಚ್ಚಾಗಿದೆ.

ಕೋಲ್ಕತಾದ ಮೊಬೈಲ್‌ ಗೇಮಿಂಗ್‌ ಆ್ಯಪ್‌ ವ್ಯಾಪಾರಿಯ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಶನಿವಾರ ನಡೆಸಲಾಗಿದ್ದ ದಾಳಿಯ ವೇಳೆ 17 ಕೋಟಿ ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕ ಹಗರಣಕ್ಕೆ ಸಂಬಂಧಿಸಿ ಟಿಎಂಸಿ ಶಾಸಕ ಪಾರ್ಥ ಚಟರ್ಜಿ ನಿವಾಸ-ಕಚೇರಿಗಳ ಮೇಲೆ ದಾಳಿ ನಡೆಸಿದ್ದಾಗ 27 ಕೋಟಿ ರೂ. ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿತ್ತು. ಜಾರ್ಖಂಡ್‌ನ‌ಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿದ್ದ ಹಗರಣದ ವೇಳೆ ಐಎಎಸ್‌ ಅಧಿಕಾರಿ ಪೂಜಾ ಸಿಂಘಲ್‌ ನಿವಾಸದಲ್ಲಿ 20 ಕೋಟಿ ರೂ. ಪತ್ತೆಯಾಗಿತ್ತು.

ಕಳೆದ ಮಾ.31ಕ್ಕೆ ಜಾರಿ ನಿರ್ದೇಶನಾಲಯದ ವಶದಲ್ಲಿ 1 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಇತ್ತು. ಅವುಗಳೆಲ್ಲವೂ ವಿವಿಧ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡದ್ದು. ಜಪ್ತಿ ಮಾಡಲಾಗಿರುವ ಆಸ್ತಿಯ ಪೈಕಿ 57 ಸಾವಿರ ಕೋಟಿ ರೂ. ಮೌಲ್ಯದ್ದು ಬ್ಯಾಂಕ್‌ ವಂಚನೆ ಮತ್ತು ಹಣಕಾಸು ವಂಚನೆ ಪ್ರಕರಣಗಳಿಗೆ ಸೇರಿವೆ.

ಏನಾಗಲಿದೆ ವಶಪಡಿಸಿಕೊಳ್ಳಲಾದ ಹಣ?
ವಶಪಡಿಸಿಕೊಂಡ ನಗದು, ಆಭರಣ ಸೇರಿ ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ಆಸ್ತಿಯ ಬಗ್ಗೆ ಪಂಚನಾಮೆ ನಡೆಸಲಾಗುತ್ತದೆ. ಅಂದರೆ ಅವುಗಳ ಸಂಪೂರ್ಣ ವಿವರಗಳು ಅದರಲ್ಲಿರುತ್ತವೆ. ನಗದು ಮೊತ್ತವನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ನಲ್ಲಿರುವ ತನಿಖಾ ಸಂಸ್ಥೆಯ ಖಾತೆಯಲ್ಲಿ ಇರಿಸಲಾಗುತ್ತದೆ. ಸಾಕ್ಷಿಯಾಗಿ ಪರಿಗಣಿತವಾಗಿರುವ ನಗದು ಅಥವಾ ಚಿನ್ನವನ್ನು ಕೋರ್ಟ್‌ನಲ್ಲಿ ಸಾಕ್ಷ್ಯ ರೂಪದಲ್ಲಿ ಹಾಜರುಪಡಿಸಬೇಕಾಗಿರುವುದರಿಂದ ಅದನ್ನು ಮೊಹರು ಮಾಡಿ ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗುತ್ತದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.