ಕೇರಳದಲ್ಲಿ ಕಾಂಗ್ರೆಸ್ನ ಭಾರತ್ ಜೋಡೋ ಆರಂಭ
Team Udayavani, Sep 12, 2022, 12:07 AM IST
ತಿರುವನಂತಪುರ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾಗಿದ್ದ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಶನಿವಾರ ರಾತ್ರಿ ಕೇರಳಕ್ಕೆ ತಲುಪಿದ್ದು, ರವಿವಾರ ಬೆಳಗ್ಗೆ ಕೇರಳದಲ್ಲಿ ಸಂಚಾರ ಆರಂಭಿಸಿದೆ.
ಒಟ್ಟು 19 ದಿನಗಳ ಕಾಲ ಭಾರತ್ ಯಾತ್ರಿಗಳು ದೇವರ ನಾಡಿನಲ್ಲಿ ಸಂಚರಿಸಲಿದ್ದಾರೆ.
ಕೇರಳಕ್ಕೆ ಆಗಮಿಸಿದ ಯಾತ್ರಿಗಳನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಸುಧಾಕರನ್ ಸೇರಿದಂತೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಬರಮಾಡಿಕೊಂಡರು.
ಪರಶಾಲಾ ಜಂಕ್ಷನ್ನಲ್ಲಿ ಯಾತ್ರೆ ಆರಂಭವಾಗಿದ್ದು, ಸಾವಿರಾರು ಮಂದಿ ಪಾಲ್ಗೊಂಡು ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದರು. 19 ದಿನಗಳ ಅವಧಿಯಲ್ಲಿ ರಾಹುಲ್ 450 ಕಿ.ಮೀ. ಪಾದಯಾತ್ರೆ ನಡೆಸಲಿದ್ದಾರೆ.
ಮದುವೆ ಮಾತು!: ಶನಿವಾರ ತಮಿಳು ನಾಡಿನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ಮಹಿಳಾ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದ್ದರು. ಈ ವೇಳೆ, ಮಹಿಳೆಯರು, “ನೀವು ತಮಿ ಳುನಾಡನ್ನು ಇಷ್ಟೊಂದು ಇಷ್ಟಪಡುತ್ತೀರಿ. ಹಾಗಾಗಿ ನೀವು ಒಪ್ಪಿದರೆ ಇಲ್ಲಿನ ಯುವತಿಯನ್ನೇ ನಿಮಗೆ ಮದುವೆ ಮಾಡಿಕೊಡುತ್ತೇವೆ’ ಎಂದರು. ಇದಕ್ಕೆ ರಾಹುಲ್ ಜೋರಾಗಿ ನಕ್ಕು, ಆ ಮಹಿಳೆ ಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ