ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಸೋನಿಯಾ ಭೇಟಿ ಮಾಡಲಿರುವ ಲಾಲು, ನಿತೀಶ್
Team Udayavani, Sep 12, 2022, 9:41 PM IST
ಪಾಟ್ನಾ : 2024 ರ ಲೋಕಸಭಾ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶೀಘ್ರದಲ್ಲೇ ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.
”2024 ರ ಲೋಕಸಭೆ ಚುನಾವಣೆಯಲ್ಲಿ ಜನರ ಮತವನ್ನು ಕೇಳಲು “ವಿಶ್ವಾಸಾರ್ಹ ಮುಖ” ಮತ್ತು ಸಾಮೂಹಿಕ ಆಂದೋಲನದ ಅವಶ್ಯಕತೆಯಿದೆ” ಎಂದು ಹೆಸರಾಂತ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ ಒಂದು ದಿನದ ನಂತರ ತೇಜಸ್ವಿ ಈ ಹೇಳಿಕೆ ನೀಡಿದ್ದಾರೆ.
ಇಂತಹ ಸಭೆಗಳಿಂದ ಪ್ರತಿಪಕ್ಷಗಳ ಏಕತೆ ಅಥವಾ ರಾಜಕೀಯ ಬೆಳವಣಿಗೆ ಎಂದು ನೋಡಲಾಗುವುದಿಲ್ಲ ಎಂದು ಕಿಶೋರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ “ಅದನ್ನು ನಂಬದವರು ಕಾದು ನೋಡಬೇಕು. ಖಂಡಿತವಾಗಿಯೂ ಸಂಭವಿಸುತ್ತದೆ. ಯಾರಾದರೂ ಏನು ಹೇಳಿದರೂ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದರು.
ರಾಜ್ಯದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ನಿತೀಶ್ ಕುಮಾರ್ ಅವರು ನೀಡಿದ ಭರವಸೆಯ ಬಗ್ಗೆ ಕೇಳಿದಾಗ, ತೇಜಸ್ವಿ ಅವರು, “ನಾವು 20 ಲಕ್ಷ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಖಂಡಿತವಾಗಿ ಈಡೇರಿಸುತ್ತೇವೆ, ನಾವು ಸರ್ಕಾರದಲ್ಲಿದ್ದೇವೆ ಮತ್ತು ಇದು ಸಾಧ್ಯವಾಗುತ್ತದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ