ಸಾಗರ: ಪತ್ರಕರ್ತನ ಬೈಕ್ ಕಳ್ಳತನ; ಪತ್ತೆ
Team Udayavani, Sep 12, 2022, 10:38 PM IST
ಸಾಗರ: ಇಲ್ಲಿನ ಜೆಸಿ ರಸ್ತೆಯಲ್ಲಿನ ಗಾಂಧಿಮಂದಿರದ ಪಕ್ಕದ ನಗರಸಭೆ ಕಾಂಪ್ಲೆಕ್ಸ್ನ ಎದುರು ಭಾನುವಾರ ನಿಲ್ಲಿಸಿದ್ದ ದ್ವಿಚಕ್ರವಾಹನ ಕಳ್ಳತನವಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ಕಳ್ಳತನವಾಗಿದ್ದ ದ್ವಿಚಕ್ರವಾಹನ ಸೋಮವಾರ ಆರ್ಪಿ ರಸ್ತೆಯಲ್ಲಿನ ಮಲ್ನಾಡ್ ಡಯಗ್ನಾಸ್ಟಿಕ್ ಸೆಂಟರ್ ಬಳಿ ಪತ್ತೆಯಾಗಿದೆ.
ಇಲ್ಲಿನ ವಕೀಲ ಮತ್ತು ಪತ್ರಕರ್ತ ಎಂ.ರಾಘವೇಂದ್ರ ನಗರಸಭೆ ಕಾಂಪ್ಲೆಕ್ಸ್ನ ಎದುರು ಭಾನುವಾರ ಸಂಜೆ ಎಂದಿನಂತೆ ದ್ವಿಚಕ್ರವಾಹನ ನಿಲ್ಲಿಸಿ, ತಮ್ಮ ಕಚೇರಿ ಕೆಲಸಕ್ಕೆ ತೆರಳಿದ್ದರು. ಕಚೇರಿ ಕೆಲಸದ ನಂತರ ರಾತ್ರಿ ಮನೆಗೆ ತೆರಳುವ ಸಂದರ್ಭದಲ್ಲಿ ನೋಡಿದಾಗ ದ್ವಿಚಕ್ರ ವಾಹನ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಭಾನುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸೋಮವಾರ ದ್ವಿಚಕ್ರವಾಹನ ಸೋಮವಾರ ಆರ್ಪಿ ರಸ್ತೆಯ ಪಕ್ಕದಲ್ಲಿರುವುದು ಪತ್ತೆಯಾಗಿದೆ. ಹ್ಯಾಂಡಲ್ಲಾಕ್ ಹಾಕಿದ್ದರೂ ದ್ವಿಚಕ್ರವಾಹನವನ್ನು ಕಳ್ಳತನ ಮಾಡಿದ್ದ ಅಪರಿಚತರು ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ತೆರಳಿದ್ದರು ಎಂದು ಭಾವಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ – ರಾಹುಲ್ ಗಾಂಧಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!