ಮುಲಾಜಿಲ್ಲದೆ ಅಕ್ರಮ ಕಟ್ಟಡಗಳ ತೆರವುಗೊಳಿಸಿ


Team Udayavani, Sep 13, 2022, 6:00 AM IST

ಮುಲಾಜಿಲ್ಲದೆ ಅಕ್ರಮ ಕಟ್ಟಡಗಳ ತೆರವುಗೊಳಿಸಿ

ಮಳೆಯಿಂದ ಪ್ರವಾಹ ಉಂಟಾಗಿ ಐಟಿ ಸಿಟಿ ಬೆಂಗಳೂರು ಮುಳುಗಿತು ಎಂಬಂತೆ ಬಿಂಬಿತವಾಗಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದ ಅನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ರಾಜಕಾಲುವೆ ಒತ್ತುವರಿದಾರರ ವಿರುದ್ಧ ಕಠಿನ ಕ್ರಮಕ್ಕೆ ಮುಂದಾಗಿರುವುದು ಸ್ವಾಗತಾರ್ಹ.

ಆದರೆ ಇದು ಆರಂಭ ಶೂರತ್ವಕ್ಕೆ ಮಾತ್ರ ಸೀಮಿತವಾಗಬಾರದು. ಯಾರೇ ಒತ್ತುವರಿ ಮಾಡಿದ್ದರೂ ಎಷ್ಟೇ ಪ್ರಭಾವಿಗಳಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇದೊಂದು ರೀತಿಯ ಶಾಶ್ವತ ಪರಿಹಾರದಂತಾಗ ಬೇಕು. ಇಲ್ಲದಿದ್ದರೆ ಸರಕಾರ ಪ್ರತೀ ಬಾರಿ ಮಳೆ ಬಂದು ಪ್ರವಾಹ ಉಂಟಾದಾಗ ಭರವಸೆ ನೀಡುವುದು ಮತ್ತೆ ಮರೆಯುವುದು; ಹೆಸರಿಗೆ ಎಂಬಂತೆ ಒಂದೆರಡು ಕಡೆ ಜೆಸಿಬಿ ನುಗ್ಗಿಸಿ ಕಾರ್ಯಾಚರಣೆ ಮಾಡಿ ಸುಮ್ಮನಾಗುವುದು; ಮತ್ತೊಮ್ಮೆ ಮಳೆ ಬಂದಾಗ ಘರ್ಜಿಸುವುದು ಮಾಡಿದರೆ ಜನತೆಗೆ ನಂಬಿಕೆ ಬಾರದು.

ಬೆಂಗಳೂರಿನ ಒತ್ತುವರಿ ತೆರವು ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್‌ ನುಡಿಗಳಲ್ಲಿ ಮಾತನಾಡಿ ದ್ದಾರೆ. ಅಷ್ಟೇ ಕಠಿನವಾಗಿ ಕ್ರಮ ಕೈಗೊಂಡರೆ ಸಮಸ್ಯೆ ಬಗೆಹರಿಯಲಿದೆ.

ಮುಖ್ಯಮಂತ್ರಿಯವರು ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸ್ಥಳಗಳಲ್ಲಿ ಒತ್ತುವರಿ ಕಾರ್ಯಾಚರಣೆ ಆರಂಭವಾಗಿರುವುದು ಒಳ್ಳೆಯ ಲಕ್ಷಣ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಿರುವುದು ಶ್ಲಾಘನೀಯ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮಳೆ ಬಂದಾಗ ಪ್ರವಾಹ ಉಂಟಾಗಿದ್ದ ಪ್ರದೇಶಗಳಲ್ಲಿ ಒತ್ತುವರಿ ತೆರವು ಮಾಡಿರುವುದು ಗಮನಾರ್ಹ. ಭೂಮಾಪಕರು ಗುರುತಿಸಿದಂತಹ ಒತ್ತುವರಿ ಪ್ರದೇಶವನ್ನು ಪಾಲಿಕೆಯ ಅಧಿಕಾರಿಗಳು, ಮಾರ್ಷಲ್‌ಗ‌ಳ ತಂಡವು ಪೊಲೀಸ್‌ ಸಿಬಂದಿ ಸಹಯೋಗದೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಒತ್ತುವರಿ ತೆರವುಕಾರ್ಯಚರಣೆ ನಡೆಸಿರುವ ಎಲ್ಲ ಕಡೆಗಳಲ್ಲಿಯೂ ಮತ್ತೂಮ್ಮೆ ಒತ್ತುವರಿ ಮಾಡದಂತೆ ಹಾಗೂ ಮಳೆ ನೀರುಗಾಲುವೆಯ ಮೇಲೆ ಕಾಂಪೌಂಡ್‌ ಗೋಡೆ ನಿರ್ಮಿಸದಂತೆ ಎಚ್ಚರಿಕೆ ನೀಡಿರುವುದು ಸರಿಯಾಗಿದೆ.
ಈ ಕಾರ್ಯಾಚರಣೆ ಇಲ್ಲಿಗೆ ನಿಲ್ಲಬಾರದು. ನಿರಂತರವಾಗಿ ಮುಂದುವರಿಯಬೇಕು. ಕೇವಲ ಮಹದೇವಪುರ ವಲಯವಷ್ಟೇ ಅಲ್ಲದೆ ಯಲಹಂಕ, ಬೊಮ್ಮನಹಳ್ಳಿ, ದಾಸರಹಳ್ಳಿ, ಪೂರ್ವ, ಪಶ್ಚಿಮ, ದಕ್ಷಿಣ, ಉತ್ತರ -ಹೀಗೆ ಎಲ್ಲ ವಲಯಗಳಲ್ಲಿಯೂ ಒತ್ತುವರಿ ಗುರುತಿಸಿ ತೆರವು ಮಾಡಬೇಕು. ಇಲ್ಲದಿದ್ದರೆ ಇಂದು ಮಹದೇವಪುರ ವಲಯದಲ್ಲಿ ಆದದ್ದು ಮುಂದೊಂದು ದಿನ ಮತ್ತೊಂದು ವಲಯದಲ್ಲಿ ಆಗಬಹುದು. ಹೀಗಾಗಿ ಇದೊಂದು ಸಂಕಲ್ಪದಂತೆ ಸರಕಾರ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಸರಕಾರಕ್ಕೂ ಒಳ್ಳೆಯ ಹೆಸರು ಬರಲು ಸಾಧ್ಯ.

ಒತ್ತುವರಿ ವಿಚಾರದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡು ಇರದೆ ಯಾರೇ ಆಗಲಿ, ಯಾವುದೇ ಪಕ್ಷದವರು ಇರಲಿ, ಪ್ರತಿಷ್ಠಿತ ಕಂಪೆನಿ ಇರಲಿ- ಒತ್ತುವರಿ ಕಂಡುಬಂದರೆ ತೆರವು ಮಾಡಬೇಕು. ವಿಪಕ್ಷಗಳು ಕೂಡ ಸರಕಾರದ ಈ ಕಾರ್ಯಕ್ಕೆ ಬೆಂಬಲ ನೀಡಬೇಕು. ಆರೋಪಕ್ಕೆ ಸೀಮಿತವಾಗದೆ ಸರಕಾರದ ಜತೆ ನಿಲ್ಲಬೇಕು. ಆಗ ಮಾತ್ರ ಸ್ಪಷ್ಟ ಸಂದೇಶ ರವಾನೆ ಸಾಧ್ಯ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.