ಉಳ್ಳಾಲ : ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ರಿಕ್ಷಾ : ಚಾಲಕ ಸಾವು
Team Udayavani, Sep 13, 2022, 9:55 AM IST
ಉಳ್ಳಾಲ: ದೇರಳಕಟ್ಟೆಗೆ ರಿಕ್ಷಾ ಬಾಡಿಗೆಗೆ ತೆರಳಿ ವಾಪಾಸ್ಸಾಗುತ್ತಿದ್ದಾಗ ಪಾನೀರು ಆಸ್ಸಿಸಿ ಶಾಲೆ ಬಳಿ ರಿಕ್ಷಾ ಕಮರಿಗೆ ಉರುಳಿ ಚಾಲಕ ಸೋಮೇಶ್ವರ ದೇವಸ್ಥಾನ ಬಳಿ ನಿವಾಸಿ ಆನಂದ ಸಪಲ್ಯ(70) ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಕೋಟೆಕಾರು ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಅವರು ನಿನ್ನೆ ರಾತ್ರಿ ದೇರಳಕಟ್ಟೆ ಕಡೆಗೆ ಬಾಡಿಗೆಗೆ ತೆರಳಿ ವಾಪಸ್ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಮರಿಗೆ ಉರಳಿ ಬಿದ್ದಾಗ ಆನಂದ್ ತಲೆಗೆ ಗಂಭೀರ ಏಟು ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಉಪ್ಪಿನಂಗಡಿ : 8,800ರೂ. ಬೆಲೆಯ ಫೋನ್ 1,785 ರೂ.ಗೆ : ಪಾರ್ಸೆಲ್ ನಂಬಿ ಹಣ ಕಳೆದುಕೊಂಡರು