ಉದ್ಯೋಗ ಕೊಡಿಸುವುದಾಗಿ ವಂಚನೆ: ದಾಳಿ
Team Udayavani, Sep 13, 2022, 2:50 PM IST
ಕೋಲಾರ: ಯುವಕ ಯುವತಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚನೆ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕೋಲಾರದ ಖಾಸಗಿ ಸಂಸ್ಥೆ ಕಚೇರಿಗಳ ದಾಳಿ ಮಾಡಿ ಹಲವರನ್ನು ವಿಚಾರಣೆಗೊಳಪಡಿಸಿದರು.
ನಗರದ ಎರಡು ಮೂರು ಕಡೆಗಳಲ್ಲಿ ಕಚೇರಿ ತೆರೆದು ಚೈನ್ ಲಿಂಕ್ ಮಾರ್ಕೆಟಿಂಗ್ ತರಬೇತಿ ನೀಡಿ ಹಣ ವಸೂಲಿ ಮಾಡುತ್ತಿದ್ದ ಕಂಪನಿ, ಓರ್ವರಿಂದ 40 ಸಾವಿರ ಹಣ ಪಡೆದು ಒಬ್ಬರಿಂದ ಮೂರು ಮಂದಿ ಸೇರಿಸುವ ಚೈನ್ ಲಿಂಕ್ ರೀತಿಯ ವ್ಯವಹಾರವನ್ನು ಕಂಪನಿ ನಡೆಸುತ್ತಿತ್ತು. ಸೋಮವಾರ ಕೋಲಾರ ನಗರದ ನಗರದ ಮಹಾಲಕ್ಷ್ಮೀ ಬಡಾವಣೆ, ಚೌಡೇಶ್ವರಿ ನಗರ, ಇಟಿಸಿಎಂ ಸರ್ಕಲ್ ಬಳಿ ಮೂರು ಕಚೇರಿಗಳ ಮೇಲೆ ಪೊಲೀಸರು ದಾಳಿ ನಡೆಸಿದರು.
ಖುಷಿ ಸಂಪದ, ಮಾಡ್ರನ್ ಸೋಲ್ ಪ್ರೈವೆಟ್ ಲಿಮಿಟೆಡ್ ಕಚೇರಿಗಳು ಸಾವಿರಾರು ಯುವಕರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿರುವ ಆರೋಪ ಹೊತ್ತುಕೊಂಡಿದ್ದವು. ದಾಳಿ ವೇಳೆ ಪೊಲೀಸರು ಪ್ರಮುಖ ಕಡತಗಳ ಪರಿಶೀಲನೆ ನಡೆಸಿದರು. ಆಡಳಿತ ಮಂಡಳಿಯಿಂದ ಮಾಹಿತಿ ಪಡೆದುಕೊಂಡರು.
ಎಸ್ಪಿ ಡಿ ದೇವರಾಜ್ ಮಾರ್ಗದರ್ಶನದಲ್ಲಿ ಮೂರು ತಂಡ ಗಳಿಂದ ಕಾರ್ಯಾಚರಣೆ ನಡೆಯಿತು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ಕಂಪನಿಗಳ ಹಿಂದಿರುವ ವ್ಯಕ್ತಿಗಳ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್