ಶಾಸಕ ರೇವೂರ್‌ ವಿರುದ್ಧ ಕ್ರಮಕ್ಕೆ ಪಾಟೀಲ್‌ ಆಗ್ರಹ


Team Udayavani, Sep 13, 2022, 3:16 PM IST

7-demand

ಕಲಬುರಗಿ: ರಾಜಕೀಯ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಕುಟುಂಬದವರಿಗೆ ಬಹುಕೋಟಿ ಬೆಲೆಬಾಳುವ ಎಂಎಸ್‌ಕೆ ಮಿಲ್‌ ವಾಣಿಜ್ಯ ನಿವೇಶನಗಳು ಮಂಜೂರಾಗುವಂತೆ ನೋಡಿಕೊಂಡಿರುವ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್‌ ನೆಲೋಗಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರು.

ಕುಡಾಗೆ ನಷ್ಟ ಮಾಡಿರುವ ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಎಂ.ರಾಚಪ್ಪ ಹಾಗೂ ವಿಷಯ ನಿರ್ವಾಹಕ ಸುಬ್ಟಾರವ್‌ ಜೊತೆಗೇ ಶಾಸಕ ದತ್ತಾತ್ರೇಯ ಪಾಟೀಲರ ವಿರುದ್ಧವೂ ಸೂಕ್ತ ತನಿಖೆ ಮಾಡುವ ಮೂಕ ಪ್ರಾಧಿಕಾರಕ್ಕೆ ಆಗಿರುವ ಆರ್ಥಿಕ ನಷ್ಟದ ಮೊತ್ತವಾದಂತಹ 4.30 ಕೋಟಿ ವಸೂಲಿ ಮಾಡಬೇಕು. ವಾಣಿಜ್ಯ ನಿವೇಶನ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕಲಬುರಗಿ ದಕ್ಷಿಣ ಬ್ಲಾಕ್‌ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ದೂರು ಸಲ್ಲಿಸಲಾಯಿತು.

ನಿವೇಶನ ಸಂಖ್ಯೆ 88 ಹಾಗೂ 88/1 ಇವುಗಳನ್ನ ಕಡಿಮೆ ಲಾಭದಲ್ಲಿಯೇ ಮಂಜೂರು ಮಾಡಲಾಗಿದೆ. ಪ್ರಾಧಿಕಾರಕ್ಕೆ ಇದರಿಂದಾಗಿ 4.30 ಕೋಟಿ ರೂ. ನಷ್ಟವಾಗಿದೆ. ಪ್ರಾಧಿಕಾರದ ಸಭೆಯಲ್ಲಿ ಇನ್ನು ಪ್ರಶ್ನಿಸಿ ಮರುಹರಾಜು ಮಾಡಬೇಕಿತ್ತು. ಅಥವಾ ನಿಯಮಗಳಂತೆ ಬಡ್ಡಿ ಸಮೇತ ನಿಗದಿತ ದಿನದಲ್ಲಿ ಹಣ ವಸೂಲಿಗೂ ಅವಕಾಶಗಳಿದ್ದರೂ ಯಾವುದನ್ನೂ ಮಾಡದೆ ಶಾಸಕರ ಪ್ರಭಾವಕ್ಕೆ ಮಣಿದು ಅವ್ಯವಹಾರ ಎಸಗಲಾಗಿದೆ.

ಅಂದಿನ ಕುಡಾ ಆಯುಕ್ತ ರಾಚಪ್ಪ, ವಿಷಯ ನಿರ್ವಾಹಕರು ಸೇರಿ ಇಂತಹ ಅವ್ಯವಹಾರಕ್ಕೆ ಬೆಂಬಲ ನೀಡಿದ್ದಾರೆ. ಅಫಜಲಪುರ ತಾಲೂಕಿನ ಅಂಕಲಗಾದಲ್ಲಿ ದಿ.ಮಲ್ಲಿಕಾರ್ಜುನ ಪಾಟೀಲ್‌ ಹೆಸರಲ್ಲಿದ್ದಂತಹ 112 ಎಕರೆ ಜಮೀನನ್ನು ತಮ್ಮ ಹೆಸರಿಗೆ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ್‌ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರು ತಮ್ಮನ್ನು ದಿ. ಮಲ್ಲಿಕಾರ್ಜುನ ಇವರ ದತ್ತು ಪುತ್ರ ಎಂದು ಹೇಳಿಕೊಂಡಿದ್ದಾರೆ.

ವಿಚಿತ್ರವೆಂದರೆ ಇವರೇ ತಾವೇ ದತ್ತು ಪತ್ರ ಬರೆದಿದ್ದಾರೆ. ಒಪ್ಪಿಗೆ ಪತ್ರ ಕೂಡಾ ತಾವೇ ಬರೆಯುತ್ತಾರೆ. ತಾವೇ ವಾರ್ಸಾಕ್ಕೂ ಕೋರುತ್ತಾರೆ. ಅಫಜಲಪುರ ತಹಶೀಲ್ದಾರ್‌ ಕಚೇರಿಯ ಸಿಬ್ಬಂದಿ ಇಂತಹ ಸೂಕ್ಷ್ಮಗಳನ್ನು ಗಮನಿಸದೆ, ವಿಲ್‌ ಡೀಡ್‌ ಇಲ್ಲದ. ಸೂಕ್ತ ದತ್ತುಪತ್ರ ದಾಖಲೆಲ್ಲದ ಈ ಪ್ರಕರಣದಲ್ಲಿ ಶಾಸಕರ ಕೋರಿಕೆಯಂತೆ ಜಮೀನು ವರ್ಗಾವಣೆ ಮಾಡುತ್ತಾರೆ. ಇಲ್ಲಿ ಭೂಸುಧಾರಣೆ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಆಗಿರುವುದರಿಂದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಲಿಂಗರಾಜ ತಾರಫೈಲ್‌, ಲಿಂಗರಾಜ ಕಣ್ಣಿ, ವಾಣಿಶ್ರೀ ಸಗರಕರ್‌, ಬಾಂಬೆ ಶೇಠ್‌, ಈರಣ್ಣ ಝಳಕಿ, ಚಂದ್ರಿಕಾ ಪರಮೇಶ್ವರ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.