ಅವ್ಯವಸ್ಥೆ ಆಗರಗಳಾದ ಬಸ್ ತಂಗುದಾಣಗಳು
Team Udayavani, Sep 14, 2022, 6:17 PM IST
ದೇವದುರ್ಗ: ತಾಲೂಕಿನ ಗ್ರಾಮೀಣ ಭಾಗದ ಪ್ರಯಾಣಿಕರಿಗೆಂದೇ ನಿರ್ಮಿಸಲಾದ ಬಸ್ ತಂಗುದಾಣಗಳು ಅವ್ಯವಸ್ಥೆಯ ಆಗರವಾಗಿವೆ. ಕೇವಲ ಆರೇಳು ಜನ ಪ್ರಯಾಣಿಕರು ಮಾತ್ರ ಕುಳಿತುಕೊಳ್ಳುವಷ್ಟು ತಂಗುದಾಣ ನಿರ್ಮಿಸಿದ್ದರಿಂದ ಒಬ್ಬರು ಕುಳಿತರೆ ಮತ್ತೂಬ್ಬರು ನಿಂತುಕೊಳ್ಳಬೇಕು. ಅದರಲ್ಲೂ ಮೇಲ್ಛಾವಣಿ ಕುಸಿದು ಬಿದ್ದು, ಕಬ್ಬಿಣದ ರಾಡುಗಳು ಕಾಣುತ್ತಿವೆ. ಮಳೆ ಬಂದಾಗಲಂತೂ ಪ್ರಯಾಣಿಕರ ಪರಿಸ್ಥಿತಿ ಹೇಳತೀರದಾಗಿದೆ.
ಇಂದಿರಾನಗರ, ಕರಿಗುಡ್ಡ, ಜಂಬಲದಿನ್ನಿ, ನಿಲವಂಜಿ, ಕರಡಿಗುಡ್ಡ, ಅಮರಾಪೂರ, ಬುಂಕಲದೊಡ್ಡಿ, ಯರಗುಡ್ಡ ಸೇರಿದಂತೆ ರಾಜ್ಯ ಹೆದ್ದಾರಿಯಲ್ಲಿ ಬರುವ ತಂಗುದಾಣಗಳ ಸ್ಥಿತಿಯಂತೂ ಹೇಳತೀರದು. ಸಿರವಾರ ಕ್ರಾಸ್ನಿಂದ ಹಿಡಿದು ಗಬ್ಬೂರು ಗ್ರಾಮದವರೆಗೆ ಬರುವ ತಂಗುದಾಣಗಳು ಅವ್ಯವಸ್ಥೆಯಲ್ಲಿವೆ. ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ್ ಅವರ ಅಧಿಕಾರವಧಿಯಲ್ಲಿ ಈ ತಂಗುದಾಣಗಳನ್ನು ನಿರ್ಮಿಸಲಾಗಿದ್ದು, ಬರೋಬ್ಬರಿ ಹತ್ತು ವರ್ಷ ಕಳೆದಿವೆ. ಇಲ್ಲಿಯವರೆಗೆ ನಿರ್ವಹಣೆ ಇಲ್ಲದೇ ನಿರ್ಲಕ್ಷ್ಯ ವಹಿಸಲಾಗಿದೆ.
ತಂಗುದಾಣ ಒಳಗೆ ಹಾಕಿರುವ ಬಂಡೆಗಳು ಕಿತ್ತು ಹೋಗಿವೆ. ಕೆಲ ಕಿಡಿಗೇಡಿಗಳು ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗುಳಿದ್ದಾರೆ. ಇನ್ನು ಕೆಲ ಕಿಡಿಗೇಡಿಗಳು ರಾತ್ರಿ ಹೊತ್ತು ಮದ್ಯ ಸೇವಿಸಿ ಎಲ್ಲೆಂದರಲ್ಲಿ ಬಾಟಲ್ಎಸೆದು ಪ್ರಯಾಣಿಕರಿಗೆ ವಿನಾಕಾರಣ ತೊಂದರೆ ನೀಡುತ್ತಿದ್ದು, ಬಹುತೇಕರು ಬೇಸತ್ತಿದ್ದಾರೆ. ಇಂತಹ ಅವ್ಯವಸ್ಥೆಯ ತಂಗುದಾಣದಲ್ಲಿ ಪ್ರಯಾಣಿಕರು ಒಳಗೆ ಕುಳಿತುಕೊಳ್ಳುವಂತಾಗಿದೆ. ಕೆಲವು ಜನರು ಮಧ್ಯಾಹ್ನ ಆದ ನಂತರ ತಂಗುದಾಣದಲ್ಲಿಯೇ ಚಕ್ಕರ್ ಕಟ್ಟಿ ಆಟವಾಡುತ್ತ ಕುಳಿತುಕೊಳ್ಳುತ್ತಾರೆ. ಪ್ರಯಾಣಿಕರಿಗೆ ಕುಳಿತುಕೊಳ್ಳಲು ಜಾಗ ನೀಡದೇ ತೊಂದರೆ ನೀಡಲಾಗುತ್ತದೆ.
-ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ
Sindhanur; ಒಂದೇ ದಿನ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
MUST WATCH
ಹೊಸ ಸೇರ್ಪಡೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ
SIT ಎದುರು ಎಚ್.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ