ಬೆಳೆ ಪರಿಹಾರ 2435 ಕೋಟಿ ರೈತರ ಖಾತೆಗೆ: ಸಚಿವ ಆರ್ ಅಶೋಕ್


Team Udayavani, Sep 14, 2022, 8:30 PM IST

ಬೆಳೆ ಪರಿಹಾರ 2435 ಕೋಟಿ ರೈತರ ಖಾತೆಗೆ: ಸಚಿವ ಆರ್ ಅಶೋಕ್

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಹಾರ ಮಧ್ಯವರ್ತಿಗಳ ಪಾಲಾಗಬಾರದು. ಹಾಗಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣವನ್ನು ಪರಿಷ್ಕೃತ ಮಾರ್ಗಸೂಚಿಯಂತೆ ವರ್ಗಾಯಿಲಾಗಿದೆ.

ಜುಲೈನಿಂದ ಈವರೆಗೆ ಸುರಿದ ಮಳೆಯಿಂದ ಆದ ಬೆಳೆಹಾನಿಗೆ 2435.57 ಕೋಟಿ ಹಣವನ್ನು ರೈತರಿಗೆ ನೀಡಿದ್ದೇವೆ. ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಇದ್ದ 6800 ರೂಪಾಯಿಯನ್ನು ಪ್ರತಿ ಹೆಕ್ಟೇರ್‌ಗೆ 13600 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ನೀರಾವರಿ ಜಮೀನಿಗೆ 13,500 ರೂ.ಗಳಿಂದ 25 ರೂ.ಗಳಿಗೆ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ 18 ಸಾವಿರ ರೂ. ಪರಿಹಾರವನ್ನು 28 ಸಾವಿರ ರೂ ಗಳಿಗೆ ಹೆಚ್ಚಿಸಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿಧಿ ಮಾರ್ಗಸೂಚಿಯ ಎರಡರಷ್ಟು ಪರಿಹಾರ ನೀಡಲಾಗಿದೆ.ಕೃಷಿ, ತೋಟಗಾರಿಕೆ, ಕಾಫಿ ಬೆಳೆಗಳಿಗೆ ಸಂಬಂಧಿಸಿದಂತೆ ಪರಿಹಾರ ನೀಡಲಾಗಿದೆ.

ಹಾನಿಯಾದ ಮನೆಗಳ ಪೈಕಿ ಪರಿಹಾರಕ್ಕೆ ಅರ್ಹ ಇರುವ ಪ್ರಕರಣಗಳನ್ನು ರಾಜೀವ್‌ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಿ ಪರಿಹಾರ ನೀಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದ ರೈತರ ಪರವಾಗಿ ಬೊಮ್ಮಾಯಿ ಸರ್ಕಾರ ಕೆಲಸ ಮಾಡಲಿದೆ. ರೈತರ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹಿಂದೆಲ್ಲ 6 ತಿಂಗಳು, 1 ವರ್ಷ ಆದರೂ ಪರಿಹಾರ ಬರುತ್ತಿರಲಿಲ್ಲ. ಈಗ ತ್ವರಿತವಾಗಿ ನಾವು ನೀಡುತ್ತಿದ್ದೇವೆ ಎಂದು ಅಶೋಕ ಹೇಳಿದರು.

ಸಾರ್ವಜನಿಕ ಉದ್ದೇಶಕ್ಕೆ 3 ಸಾವಿರ ಎಕ್ರೆ ಜಾಗ: ಅಶೋಕ್‌
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,123 ಎಕ್ರೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1,181 ಎಕ್ರೆ ಸರಕಾರಿ ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಉದ್ದೇಶಗಳಾದ ಮನೆ, ನಿವೇಶನ, ಸಾರ್ವಜನಿಕ ಕಟ್ಟಡ, ಘನ/ದ್ರವ ತ್ಯಾಜ್ಯ ನಿರ್ವಹಣೆ, ಶ್ಮಶಾನ ಇತ್ಯಾದಿಗಳಿಗೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡುವ ಎಷ್ಟು ಪ್ರಸ್ತಾವನೆಗಳು ಕಂದಾಯ ಇಲಾಖೆ ಮುಂದಿವೆ ಎಂದು ಪ್ರಶ್ನಿಸಿದರು.

ಅದಕ್ಕೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,123 ಎಕ್ರೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1,181 ಎಕ್ರೆ ಸರಕಾರಿ ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಮಂಜೂರು ಮಾಡಲಾಗಿದೆ. ಜತೆಗೆ ಘನತ್ಯಾಜ್ಯ ಉದ್ದೇಶಕ್ಕೆ ಜಮೀನು ಕಾದಿರಿಸುವ 11 ಪ್ರಕರಣ ಉಡುಪಿಯಲ್ಲಿ ಹಾಗೂ 15 ಪ್ರಕರಣಗಳು ದಕ್ಷಿಣ ಕನ್ನಡದಲ್ಲಿ ಬಾಕಿ ಇವೆ. ಅದೇ ರೀತಿ ಮನೆ ನಿವೇಶನಕ್ಕೆ ಕ್ರಮವಾಗಿ 18 ಮತ್ತು 52, ಸಾರ್ವಜನಿಕ ಕಟ್ಟಡಕ್ಕೆ ಕ್ರಮವಾಗಿ 15 ಮತ್ತು 4 ಪ್ರಕರಣಗಳು ಬಾಕಿ ಇವೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 44 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 71 ಪ್ರಕರಣಗಳು ಬಾಕಿ ಇವೆ ಎಂದು ತಿಳಿಸಿದರು.

ಸಾರ್ವಜನಿಕ ಉದ್ದೇಶಗಳಿಗೆ ಜಮೀನು ಕಾದಿರಿಸುವ ವಿಚಾರದಲ್ಲಿ ಎರಡೂ ಜಿಲ್ಲೆಗಳಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.