ಹಠಾತ್ ಹೃದಯ ಸ್ತಂಭನ: ಪಾಕಿಸ್ಥಾನದ ಮಾಜಿ ಅಂಪೈರ್ ಅಸದ್ ರವುಫ್ ನಿಧನ


Team Udayavani, Sep 15, 2022, 9:15 AM IST

Former Pakistan umpire Asad Rauf passes away

ಲಾಹೋರ್: ಹಠಾತ್ ಹೃದಯ ಸ್ತಂಭನದ ಕಾರಣದಿಂದ ಪಾಕಿಸ್ಥಾನದ ಮಾಜಿ ಅಂಪೈರ್ ಅಸದ್ ರವುಫ್ ನಿಧನ ಹೊಂದಿದ್ದಾರೆ. ಗುರುವಾರ ಬೆಳಗ್ಗೆ 66 ವರ್ಷದ ರವುಫ್ ಅವರು ಲಾಹೋರ್ ನಲ್ಲಿ ಕೊನೆಯುಸಿರೆಳೆದರು.

ಕ್ರಿಕೆಟ್ ನಿಂದ ದೂರವಾದ ಬಳಿಕ ರವುಫ್ ಅವರು ಲಾಹೋರ್ ನ ಲಾಂಡಾ ಬಜಾರ್‌ ನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಅಂಗಡಿಯನ್ನು ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಎಂದು ರವುಫ್ ಸಹೋದರ ತಾಹಿರ್ ಹೇಳಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಉಳಿಸಲು ಸಾಧ್ಯವಾಗಲಿಲ್ಲ.

ಐಸಿಸಿ ಎಲೈಟ್ ಅಂಪೈರ್ ಗಳ ಪಟ್ಟಿಯಲ್ಲಿ ಅಲೀಮ್ ದಾರ್ ಅವರೊಂದಿಗೆ ಮಿಂಚಿದ್ದ ಅಸದ್ ರವುಫ್ ಒಂದು ಕಾಲದಲ್ಲಿ ಪಾಕಿಸ್ಥಾನದ ಪ್ರಮುಖ ಅಂಪೈರ್ ಆಗಿದ್ದರು.

ರವುಫ್ ಅವರು 1998 ರಲ್ಲಿ ತಮ್ಮ ಅಂಪೈರಿಂಗ್ ಪಯಣವನ್ನು ಪ್ರಾರಂಭಿಸಿದರು. 2000 ರಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಏಕದಿನ ಪಂದ್ಯದಲ್ಲಿ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಅಂಪೈರಿಂಗ್ ಮಾಡಿದರು. ನಾಲ್ಕು ವರ್ಷಗಳ ನಂತರ, 2004 ರಲ್ಲಿ ರವುಫ್ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಅಂಪೈರ್‌ಗಳ ಸಮಿತಿಗೆ ಸೇರಿಸಲಾಯಿತು.

2006 ರಲ್ಲಿ, ರೌಫ್ ಅವರನ್ನು ಐಸಿಸಿ ಯ ಎಲೈಟ್ ಪ್ಯಾನೆಲ್ ಆಫ್ ಅಂಪೈರ್‌ ಗಳಿಗೆ ಸೇರಿಸಲಾಯಿತು. ಅಸದ್ ರವುಫ್ ಅವರು 47 ಟೆಸ್ಟ್, 98 ಏಕದಿನ ಮತ್ತು 23 ಟಿ20 ಅಂತಾರಾಷ್ಟ್ರೀಯ ಗಳಲ್ಲಿ ಅಂಪೈರ್‌ ಗಳಾಗಿ ಕಾರ್ಯನಿರ್ವಹಿಸಿದರು. ಐಪಿಎಲ್ ನಲ್ಲೂ ಅವರು ಕಾರ್ಯನಿರ್ವಹಿಸಿದ್ದರು. ಆದರೆ 2013ರಲ್ಲಿ ಅಸದ್ ರವುಫ್ ವಿರುದ್ದ ಫಿಕ್ಸಿಂಗ್ ಆರೋಪ ಕೇಳಿಬಂದ ಬಳಿಕ ಅವರು ಕ್ರಿಕೆಟ್ ನಿಂದ ದೂರಾವಾಗಿದ್ದರು.

ಉತ್ತಮ ಅಂಪೈರ್ ಆಗಿದ್ದಲ್ಲದೆ, ರವುಫ್ ಪಾಕಿಸ್ತಾನದಲ್ಲಿ ಹೆಸರಾಂತ ಪ್ರಥಮ ದರ್ಜೆ ಕ್ರಿಕೆಟಿಗರಾಗಿದ್ದರು. 71 ಪ್ರಥಮ ದರ್ಜೆ ಮತ್ತು 40 ಲಿಸ್ಟ್ ಎ ಪಂದ್ಯಗಳಲ್ಲಿ, ಮೂರು ಶತಕ ಮತ್ತು 26 ಅರ್ಧ ಶತಕಗಳ ಸಹಾಯದಿಂದ ಕ್ರಮವಾಗಿ 3423 ಮತ್ತು 611 ರನ್ ಗಳಿಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.