ಕೆರೆಗಳು ಊರಿನಲ್ಲಿ ಆಸ್ತಿ. ಅವುಗಳ ಸಂರಕ್ಷಣೆ ಇಂದಿನ ಅಗತ್ಯ : ಹೆಗ್ಗಡೆ

ವಿವಿಧ ಜಿಲ್ಲೆಗಳ ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳ ಸಭೆ

Team Udayavani, Sep 15, 2022, 11:27 AM IST

ಕೆರೆಗಳು ಊರಿನಲ್ಲಿ ಆಸ್ತಿ. ಅವುಗಳ ಸಂರಕ್ಷಣೆ ಇಂದಿನ ಅಗತ್ಯ : ಹೆಗ್ಗಡೆ

ಬೆಳ್ತಂಗಡಿ : ಕೆರೆಗಳು ಊರಿನಲ್ಲಿ ಆಸ್ತಿ. ಅವುಗಳ ಸಂರಕ್ಷಣೆ ಇಂದಿನ ಅಗತ್ಯ. ಅಂತಹ ಕೆರೆಗಳನ್ನು ಜನರ ಸಹ‌ಭಾಗಿತ್ವ‌ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪುನಃಶ್ಚೇತನಗೊಳಿಸಲಾಗುತ್ತಿದ್ದು, ಹೂಳು ತುಂಬಿಕೊಂಡಿದ್ದ ಹಲವು ಕೆರೆಗಳು ಇದೀಗ ಶೇಖರಣೆ ಸಾಮರ್ಥ್ಯ ಹೆಚ್ಚಿಸಿಕೊಂಡು ತುಂಬಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಹಾಸನ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಯಿಂದ ಬಂದ ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿ ಗಳನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಭವಿಷ್ಯ, ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು. ಸಾಧನೆ ಮಾಡಲು ಛಲ ಬೇಕು. ಆಲಸ್ಯ ಇರುವವರಿಂದ ಸಾಧನೆ ಅಸಾಧ್ಯ. ಪ್ರತಿಯೊಂದು ಕೆಲಸವನ್ನೂ ಸರಕಾರವೇ ಮಾಡಬೇಕೆಂದು ಕಾಯಬಾರದು. ಗ್ರಾಮದ ಮೂಲಭೂತ ಅಗತ್ಯಗಳನ್ನು ಗ್ರಾಮಸ್ಥರೇ ಪರಸ್ಪರ ಸಹಕಾರದಿಂದ ಪೂರೈಸಿಕೊಳ್ಳಲು ಸಾಧ್ಯ ಎಂದು ಮಾರ್ಗದರ್ಶನ ನೀಡಿದರು.
ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ| ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು.

ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಕೆರೆ ವಿಭಾಗದ ನಿರ್ದೇಶಕ ರಾದ ಶಿವಾನಂದ ಆಚಾರ್ಯ, ಯೋಜನಾಧಿಕಾರಿ ಯುವರಾಜ್‌ ಜೈನ್‌ ಹಾಗೂ ಕೆರೆ ಅಭಿಯಂತ ಭರತ್‌ ಉಪಸ್ಥಿತರಿದ್ದರು. ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಡಾ| ಹೆಗ್ಗಡೆ ಅವರನ್ನು ಅಭಿನಂದಿಸಿದರು.

ರೈತರ ಬದುಕು ಹಸನಾದ ಕಥೆ
ಕೆರೆ ಸಮಿತಿ ಸದಸ್ಯ ಅಜ್ಜಂಪುರ ತಾಲೂಕು ಗಡೀಹಳ್ಳಿ ಗ್ರಾಮದ ಜಿ.ಐ. ಮಂಜುನಾಥ್‌ ಮಾತನಾಡಿ, ಹಿಂದೆಲ್ಲ ಪವಿತ್ರ ಕಾರ್ಯಗಳಿಗೆ ಬಳಸಲಾಗುತ್ತಿದ್ದ ನಮ್ಮೂರ ಕೆರೆ ಪಾಳು ಬಿದ್ದು ಜಾಲಿ ಗಿಡಗಳು ಬೆಳೆದು ಬಳಕೆಗೆ ಯೋಗ್ಯವಾಗಿರಲಿಲ್ಲ. ಜೂಜು, ಕುಡಿತ ಮೊದಲಾದ ಅಕ್ರಮಗಳ ತಾಣವಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಹಮ್ಮಿಕೊಂಡ ಕೆರೆ ಅಭಿವೃದ್ಧಿ ಕಾಮಗಾರಿಯಿಂದ ಈಗ ಮರುಜೀವ ಪಡೆದಿದೆ. ಅಂತರ್ಜಲ ಮಟ್ಟ ಹೆಚ್ಚಿ ರೈತರ ಬದುಕು ಹಸನಾಗಿದೆ. ಊರಿಗೂ ನೀರಿನ ಬರ ನೀಗಿದೆ ಎಂದು ತಿಳಿಸಿದರು.

469 ಕೆರೆಗಳ ಪುನಃಶ್ಚೇತನ
ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಮಾತನಾಡಿ, ರಾಜ್ಯಾದ್ಯಂತ 469 ಕೆರೆಗಳ ಪುನಃಶ್ಚೇತನ ನಡೆಸಲಾಗಿದೆ. ಈ ಕೆರೆಗಳು ಒತ್ತುವರಿ ಆಗದಂತೆ ಎಚ್ಚರಿಕೆ ವಹಿಸಿರಿ. ಕೆರೆಗಳ ಸ್ವತ್ಛತೆಗೆ ಆದ್ಯತೆ ನೀಡಿ. ಸುತ್ತ ಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸಿರಿ ಎಂದು ತಿಳಿಸಿದರು.

ಟಾಪ್ ನ್ಯೂಸ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.