ನೆರೆ ಬಾಧಿತ ನಾವುಂದ: ಸಿಕ್ಕಿಲ್ಲ ಸರಿಯಾದ ಪರಿಹಾರ

ಮರು ಬಿತ್ತನೆಯೂ ಕೊಳೆತು ನಾಶ; ಪರಿಹಾರವೂ ಇಲ್ಲ

Team Udayavani, Sep 15, 2022, 11:44 AM IST

3

ನಾವುಂದ: ಕಳೆದ ಜುಲೈ ಹಾಗೂ ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆಯಿಂದ ನೆರೆಗೆ ತುತ್ತಾದ ಸೌಪರ್ಣಿಕಾ ನದಿ ತೀರದ ನಾವುಂದ ಗ್ರಾಮದಲ್ಲಿ ಭಾರೀ ಪ್ರಮಾಣದ ಆಸ್ತಿ-ಪಾಸ್ತಿ ಹಾನಿ, ಕೃಷಿ ನಾಶವಾಗಿ ನಷ್ಟ ಉಂಟಾಗಿದ್ದು, ಆದರೆ ಪರಿಹಾರ ಮಾತ್ರ ಕೆಲವರಿಗೆ ಸಿಕ್ಕಿಲ್ಲ. ಬೆಳೆ ನಷ್ಟ ಪರಿಹಾರ ಈವರೆಗೆ ಯಾರಿಗೂ ಸಿಕ್ಕಿಲ್ಲ.

ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ಕಂಡಿಕೇರಿ, ಬಾಂಗಿನ್‌ಮನೆ, ಕೆಳಾಬದಿ ಪರಿಸರದಲ್ಲಿ ಭಾರೀ ಮಳೆಯಿಂದಾಗಿ ಒಂದು ವಾರವಿಡೀ ನೆರೆ ಪರಿಸ್ಥಿತಿ ಉಂಟಾಗಿ, ಜನ ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿತ್ತು. ನೆರೆಗೆ ಅಲ್ಲಿನ ನಿವಾಸಿಗರು ಅಕ್ಷರಶಃ ನಲುಗಿ ಹೋಗಿದ್ದರು. ಈ ವೇಳೆ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಹೆಕ್ಟೇರ್‌ಗಟ್ಟಲೆ ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡು, ನಾಟಿ ಮಾಡಿದ ಭತ್ತದ ಪೈರು ಕೊಳೆತು ಹೋಗಿತ್ತು.

13 ಮನೆಗಳಿಗೆ ಹಾನಿ

ಜುಲೈ ಹಾಗೂ ಆಗಸ್ಟ್‌ನ ಮಳೆಗೆ ನಾವುಂದ ಗ್ರಾಮದಲ್ಲಿ ಒಟ್ಟು 13 ಮನೆಗಳಿಗೆ ಹಾನಿಯಾಗಿತ್ತು. ಈ ಪೈಕಿ 2 ಮನೆಗಳಿಗೆ ಸಂಪೂರ್ಣ ಹಾನಿ ಹಾಗೂ ಬಾಕಿ ಮನೆಗಳಿಗೆ ಭಾಗಶಃ ಹಾನಿಯಾಗಿತ್ತು. ಈ ಪೈಕಿ ಕೆಲವರಿಗೆ ಮಾತ್ರ ಪರಿಹಾರ ಸಿಕ್ಕಿದೆ. ಅದು ಭಾಗಶಃ ಹಾನಿಯಾದ ಸಂತ್ರಸ್ತರಿಗೆ 5 ಸಾವಿರ ರೂ. ಮಾತ್ರ ಸಿಕ್ಕಿದೆ. ಅದಕ್ಕಿಂತ ಹೆಚ್ಚಿನ ನಷ್ಟ ಉಂಟಾಗಿದೆ. ಆದರೆ ಪರಿಹಾರ ಮಾತ್ರ ಅರೆಕಾಸಿನಷ್ಟು ಕೊಟ್ಟಿದ್ದಾರೆ. ಇದರಿಂದ ದುರಸ್ತಿ ಹೇಗೆ ಸಾಧ್ಯ ಎನ್ನುವುದು ಸಂತ್ರಸ್ತರ ಅಳಲು.

ಮರು ಬಿತ್ತನೆಯೂ ನಾಶ

ನಾವುಂದ ಒಂದೇ ಗ್ರಾಮದಲ್ಲಿ ಸಾಲ್ಬುಡ, ಅರೆಹೊಳೆ ಸುತ್ತಮುತ್ತಲಿನ ಪರಿಸರದಲ್ಲಿ ಸುಮಾರು 30 ಹೆಕ್ಟೇರ್‌ ಗದ್ದೆಯು ಮುಳುಗಡೆಯಾಗಿ, ನಾಟಿ ಮಾಡಿದ ಭತ್ತ ಕೊಳೆತು ಹೋಗಿತ್ತು. ಅದಾಗಿ ಇಲ್ಲಿನ ರೈತರು ದುಬಾರಿ ಬೆಲೆ ಅಂದರೆ 25 ಕೆಜಿ ಬಿತ್ತನೆ ಬೀಜಕ್ಕೆ 900 ರೂ. ತೆತ್ತು ಮರು ಬಿತ್ತನೆ ಮಾಡಿದ್ದು, ಆ ಬಳಿಕದ ಮಳೆಗೆ ಇದರಲ್ಲಿ ಬಹುಪಾಲು ಕೊಳೆತು ನಾಶವಾಗಿದೆ. ಒಟ್ಟಿನಲ್ಲಿ ಇದನ್ನೇ ನಂಬಿಕೊಂಡಿರುವ ಅನ್ನದಾತರಿಗೆ ಈ ಹಂಗಾಮಿನಲ್ಲಿ ಕಿಂಚಿತ್ತೂ ಕೈಗೆ ಸಿಗದಂತಾಗಿದೆ.

ಇನ್ನು ಅಧಿಕಾರಿಗಳ ಮಾಹಿತಿ ಪ್ರಕಾರ ಸುಮಾರು 90 ಎಕರೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಈ ಭಾಗದ 100ಕ್ಕೂ ಮಿಕ್ಕಿ ಮಂದಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈವರೆಗೆ ಒಂದು ರೂ. ಪರಿಹಾರವೂ ಯಾರಿಗೂ ಸಿಕ್ಕಿಲ್ಲ. ಇನ್ನು ಒಂದು ಜಾನುವಾರು ಸಾವನ್ನಪ್ಪಿದ್ದು, ಆ ಮನೆಯವರಿಗೂ ಯಾವುದೇ ಪರಿಹಾರ ಸಿಕ್ಕಿಲ್ಲ.

ರಸ್ತೆಗೂ ಹಾನಿ: ದುರಸ್ತಿಗೆ ಆಗ್ರಹ

ನೆರೆಯಿಂದಾಗಿ ನಾವುಂದ – ಅರೆಹೊಳೆ ಮುಖ್ಯ ರಸ್ತೆಯು ವಾರಗಟ್ಟಲೆ ಮುಳುಗಡೆಯಾಗಿದ್ದು, ಇದರಿಂದಾಗಿ ಹಲವು ಕಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡ ಬಿದ್ದಿದೆ. ಪ್ರಾಕೃತಿಕ ವಿಕೋಪ ನಿಧಿಯಡಿ ಇದನ್ನು ದುರಸ್ತಿಪಡಿಸಬೇಕು ಮಾತ್ರವಲ್ಲದೆ ಪದೇ ಪದೆ ಮುಳುಗಡೆಯಾಗುವ ಈ ರಸ್ತೆಯನ್ನು 2-3 ಅಡಿ ಎತ್ತರಕ್ಕೇರಿಸಿದರೆ ಅನುಕೂಲವಾಗಬಹುದು ಎನ್ನುವುದು ಇಲ್ಲಿನ ಜನರ ಬೇಡಿಕೆಯಾಗಿದೆ.

ಶಾಶ್ವತ ಪರಿಹಾರಕ್ಕೆ ಸಕಾಲ

ಕಳೆದ ಹಲವಾರು ವರ್ಷಗಳಿಂದ ಈ ಸಾಲ್ಬುಡ, ಅರೆಹೊಳೆ ಪ್ರದೇಶವು ನೆರೆಗೆ ತುತ್ತಾಗುತ್ತಿದೆ. ಸೌಪರ್ಣಿಕಾ ನದಿ ತೀರದ ಸಾಲ್ಬುಡ, ಕಂಡಿಕೇರಿ, ಕೆಳಾಬದಿ, ಅರೆಹೊಳೆ, ಬಾಂಗಿನ್‌ಮನೆಯುದ್ದಕ್ಕೂ ನದಿ ದಂಡೆ ನಿರ್ಮಿಸಬೇಕಿದೆ. ಅದಲ್ಲದೆ ಅರೆಹೊಳೆಯ ರೈಲ್ವೇ ಕೆಳ ಸೇತುವೆ ಬಳಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡಿಕೊಡಬೇಕಿದೆ. ನೆರೆಗೆ ತುತ್ತಾಗುವ 30-40 ಮನೆಗಳಿಗೆ ಅಲ್ಲಿಂದ ಬೇರೆ ಕಡ ತಲಾ 2 ಸೆನ್ಸ್‌ ನಿವೇಶನ ನೀಡಿದರೆ ಸುರಕ್ಷತಾ ಸ್ಥಳದಲ್ಲಿ ಮನೆ ನಿರ್ಮಿಸಿಕೊಳ್ಳಬಹುದು. ನಾವುಂದ ಗ್ರಾಮದಲ್ಲೊಂದು ಶಾಶ್ವತ ಜಾನುವಾರು ಶೆಡ್‌ ಅಗತ್ಯವಿದೆ. ಈಗ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಕಾಲವಾಗಿದೆ.

ಬೆಳೆ ಪರಿಹಾರ ಸಿಗಲಿ: ಮಳೆಯಿಂದಾಗಿ ದುಬಾರಿ ಬೆಲೆ ಕೊಟ್ಟು ಖರೀದಿಸಿದ ಮರು ಬಿತ್ತನೆ ಬೀಜವು ನಾಶವಾಗಿದೆ. ಮೊದಲ ಬಾರಿಗೆ ನಾಶವಾಗಿದ್ದರಿಂದ ಪರಿಹಾರವೂ ಸಿಕ್ಕಿಲ್ಲ. ಆದಷ್ಟು ಬೇಗ ಕೊಡುವಂತಹ ವ್ಯವಸ್ಥೆ ಮಾಡಲಿ. ಮಳೆಯಿಂದಾಗಿ ರಸ್ತೆಗೆ ಹಾನಿಯಾಗಿದ್ದು, ಅದನ್ನು ದುರಸ್ತಿ ಮಾಡಲಿ. ಇದರೊಂದಿಗೆ ಈಗಿನಿಂದಲೇ ಶಾಶ್ವತ ಪರಿಹಾರ ಕೈಗೊಳ್ಳುವ ಪ್ರಯತ್ನ ಮಾಡಲಿ. – ರಾಜೇಶ್‌ ಸಾಲ್ಬುಡ, ಸ್ಥಳೀಯ ಗ್ರಾ.ಪಂ. ಸದಸ್ಯ

ಪರಿಶೀಲಿಸಿ ಕ್ರಮ: ಮನೆಗಳಿಗೆ ಹಾನಿಯಾದ ಬಗ್ಗೆ ಬಹುತೇಕ ಎಲ್ಲರಿಗೂ ಪರಿಹಾರ ನೀಡಲಾಗಿದೆ. ಇನ್ನೂ ಬಾಕಿ ಇದ್ದರೆ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ರಸ್ತೆ ದುರಸ್ತಿ, ಕೃಷಿ ಹಾನಿ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಬಳಿ ಮಾತನಾಡಲಾಗುವುದು. – ಶ್ರೀಕಾಂತ್‌ ಎಸ್‌. ಹೆಗ್ಡೆ, ಬೈಂದೂರು ತಹಶೀಲ್ದಾರ್‌   

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.