ಪಿಎಸ್ ಐ ನೇಮಕಾತಿ ಹಗರಣ: ವಿಧಾನಸಭೆಯಲ್ಲಿ ಚರ್ಚೆಗೆ ಸ್ಪೀಕರ್ ಅವಕಾಶ
ಸಿದ್ದರಾಮಯ್ಯ ಆಗ್ರಹಕ್ಕೆ ಬಿಜೆಪಿ ಸದಸ್ಯರಿಂದ ಭಾರಿ ವಿರೋಧ
Team Udayavani, Sep 15, 2022, 4:17 PM IST
ವಿಧಾನಸಭೆ :ಪಿಎಸ್ ಐ ನೇಮಕಾತಿ ಹಗರಣ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿದ್ದು, ನಿಯಮ 69 ರ ಅನ್ವಯ ಚರ್ಚೆ ನಡೆಸುವುದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಮಾಡಿಕೊಟ್ಟಿದ್ದಾರೆ.
ಪ್ರಶ್ನೋತ್ತರ ಕಲಾಪ ಮುಕ್ತಾಯವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ವಿಚಾರದ ಬಗ್ಗೆ ನಿಲುವಳಿ ಸೂಚನೆ ಮಂಡಿಸುವುದಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರಿಂದ ಭಾರಿ ವಿರೋಧ ವ್ಯಕ್ತವಾಯಿತು. ಪ್ರಕರಣದ ತನಿಖೆ ನಡೆಯುವಾಗ ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವುದು ಎಷ್ಟು ಸೂಕ್ತ ? ಎಂದು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶ್ನಿಸಿದರು.
ಎಡಿಜಿಪಿ ದರ್ಜೆಯ ಅಧಿಕಾರಿಗಳನ್ನು ನಾವು ಬಂಧಿಸಿದ್ದೇವೆ. ಇತಿಹಾದಲ್ಲೇ ಇಷ್ಟು ಪಾರದರ್ಶಕ ತನಿಖೆ ನಡೆದಿಲ್ಲ ಎಂದು ವಾದಿಸುತ್ತಾ, ” ದೇಶಪಾಂಡೆಯವರೇ ನಿಮಗೆ” ನಾಚಿಕೆಯಾಗಬೇಕು ಎಂದು ಪದ ಬಳಸಿದರು. ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ ಉಭಯ ಪಕ್ಷದ ಸದಸ್ಯರು ತಾಳ್ಮೆಕಳೆದುಕೊಳ್ಳುವಂತಾಯಿತು.
ವಿಪಕ್ಷ ನಾಯಕ ಸಿದ್ದರಾಮಯ್ಯನವರಂತೂ 2006 ರಿಂದ ಇಲ್ಲಿಯವರೆಗೆ ನಡೆದ ಎಲ್ಲ ಪೊಲೀಸ್ ನೇಮಕಗಳ ಬಗ್ಗೆ ತನಿಖೆ ನಡೆಸಿ. ನನ್ನ ಕಾಲದಲ್ಲಿ ಆಗಿದ್ದು ಎಂದು ಯಾರೂ ಬೆರಳು ಮಾಡುವುದು ಬೇಡ ಎಂದು ಸವಾಲು ಹಾಕಿದರು.
ಕೊನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ನಾನು ಈ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತೇನೆ. ಆದರೆ ನಿಲುವಳಿ ಸೂಚನೆಯನ್ನು ನಿಯಮ 69ಕ್ಕೆ ಪರಿವರ್ತಿಸುತ್ತೇನೆ. ನಾಳೆ ಈ ಬಗ್ಗೆ ಚರ್ಚೆ ನಡೆಸೋಣ ಎಂದು ವಿವಾದಕ್ಕೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!