ಮಳೆಯಲಿ ಡಾಲಿ ಜೊತೆಯಲಿ: ಮಾನ್ಸೂನ್‌ ನಲ್ಲಿ ಧನಂಜಯ್‌ ಕನಸು


Team Udayavani, Sep 16, 2022, 9:40 AM IST

mansoon-raga

ಸದ್ಯದ ಮಟ್ಟಿಗೆ ಕನ್ನಡ ಚಿತ್ರರಂಗದ ಬಿಝಿ ನಾಯಕ ನಟರ ಪೈಕಿ ಡಾಲಿ ಧನಂಜಯ್‌ ಕೂಡ ಒಬ್ಬರು. ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟ ಡಾಲಿ ಧನಂಜಯ್‌ ಅವರ “ಮಾನ್ಸೂನ್‌ ರಾಗ’ ಚಿತ್ರ ಇಂದು ತೆರೆಕಾಣುತ್ತಿದೆ.

ಹೌದು, ಧನಂಜಯ್‌ ಮತ್ತು ರಚಿತಾ ರಾಮ್‌ ಜೋಡಿಯಾಗಿ ಅಭಿನಯಿಸಿರುವ “ಮಾನ್ಸೂನ್‌ ರಾಗ’ ಚಿತ್ರ ಇಂದು ತೆರೆಕಾಣುತ್ತಿದ್ದು, ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್‌ ಹಿಟ್‌ಲಿಸ್ಟ್‌ ಸೇರುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಬಿಡುಗಡೆಯಾಗಿರುವ “ರಾಗ ಸುಧಾ’ ಹಾಗೂ “ಮುದ್ದಾದ ಮೂತಿ’ ಎಂಬ ಹಾಡುಗಳು ಹಿಟ್‌ಲಿಸ್ಟ್‌ ಸೇರಿದೆ. “ಮುದ್ದಾದ ಮೂತಿ’ ಹಾಡನ್ನು ಅಚ್ಯುತ್‌ ಕುಮಾರ್‌ ಮೇಲೆ ಮಾಡಲಾಗಿದ್ದು, ಸಖತ್‌ ಕಲರ್‌ಫ‌ುಲ್‌ ಆಗಿ ಚಿತೀಕರಿಸಲಾಗಿದೆ. ಪ್ರಮೋದ್‌ ಮರವಂತೆ ಬರೆದಿರುವ ಈ ಹಾಡಿಗೆ ವಾಸುಕಿ ವೈಭವ್‌ ಅವರ ಧ್ವನಿ ಇದೆ.

ಇದನ್ನೂ ಓದಿ:“ಟ್ರೋಜನ್‌’ ವೈರಸ್‌: ಎಚ್ಚರ!‌ ; ಆಂಡ್ರಾಯ್ಡ್ ಮೊಬೈಲ್‌ ಬಳಕೆದಾರರೇ ಜಾಗೃತಿ ವಹಿಸಿ! 

ಇನ್ನು, “ರಾಗ ಸುಧಾ’ ಹಾಡಿನಲ್ಲಿ ಯಶಾ ಶಿವಕುಮಾರ್‌ ಹೆಜ್ಜೆ ಹಾಕಿದ್ದು, ದಕ್ಷಿಣ್‌ ಕುಮಾರ್‌ ನೃತ್ಯ ಸಂಯೋಜನೆ ಮಾಡಿದ್ದಾರೆ. ಇದು ಯಶಾ ಇಂಟ್ರೊಡಕ್ಷನ್‌ ಗಾಗಿಯೇ ಮಾಡಿದ ಹಾಡು ಎಂಬುದು ವಿಶೇಷವಾದರೆ, ಇದನ್ನು ಸಾಹಿತಿ ಜಯಂತ್‌ ಕಾಯ್ಕಿಣಿ ಓದಿದ ಕುಮಟಾ ಬಳಿಯ ಶಾಲೆಯೊಂದರಲ್ಲಿ ಚಿತ್ರೀಕರಣ ನಡೆಸಿರುವುದು ಮತ್ತೂಂದು ವಿಶೇಷ. ಮಳೆಯ ಭೋರ್ಗರೆತದ ನಡುವೆ ಕುಣಿವ ಯಶಾ, ರೆಟ್ರೋ ಸ್ಟೈಲ್‌ನಲ್ಲಿ ಕಂಗೊಳಿಸಿದ್ದಾರೆ.

“ಮಾನ್ಸೂನ್‌ ರಾಗ’ ಚಿತ್ರದಲ್ಲಿ ನಟ ಧನಂಜಯ್‌ ಎರಡು ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರೆ. ಒಂದರಲ್ಲಿ ಪಕ್ಕಾ ಆ್ಯಕ್ಷನ್‌ ಗೆಟಪ್‌ನಲ್ಲಿ ರಗಡ್‌ ಆಗಿ ಕಾಣಿಸಿಕೊಂಡರೆ, ಇನ್ನೊಂದೆಡೆ ಸಖತ್‌ ಸಾಫ್ಟ್ ಪ್ರೇಮಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಟ್ರೋ ಲುಕ್‌ನಲ್ಲಿ ಮೂಡಿಬಂದಿರುವ “ಮಾನ್ಸೂನ್‌ ರಾಗ’ ಟೀಸರ್‌ ಸೋಶಿಯಲ್‌ ಮೀಡಿಯಾದಲ್ಲಿ ಸಿನಿ ಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದೆ. ರಚಿತಾ ರಾಮ್‌ ಈ ಚಿತ್ರದಲ್ಲಿ ಸಖತ್‌ ಬೋಲ್ಡ್‌ ಲುಕ್‌ನಲ್ಲಿ ಕಾಣಿಸಕೊಂಡಿದ್ದು, ಅವರ ಕೆರಿಯರ್‌ನಲ್ಲೇ ವಿಭಿನ್ನ ಪಾತ್ರವಾಗಿದೆ.

“ವಿಖ್ಯಾತ್‌ ಚಿತ್ರಾ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ಎ. ಆರ್‌ ವಿಖ್ಯಾತ್‌ ನಿರ್ಮಿಸಿರುವ, ಔಟ್‌ ಆ್ಯಂಡ್‌ ಔಟ್‌ ರೊಮ್ಯಾಂಟಿಕ್‌ ಕಂ ಆ್ಯಕ್ಷನ್‌ ಕಥಾಹಂದರ ಹೊಂದಿರುವ “ಮಾನ್ಸೂನ್‌ ರಾಗ’ ಚಿತ್ರಕ್ಕೆ ಎಸ್‌. ರವೀಂದ್ರನಾಥ್‌ ನಿರ್ದೇಶನವಿದೆ.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.