ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ದ: ಅಂಬಾರಾಯ
Team Udayavani, Sep 16, 2022, 2:50 PM IST
ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಂಬಾರಾಯ ಅಷ್ಟಗಿ ಹೇಳಿದರು.
ನಗರದ ರೇಶ್ಮಿ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ನಡೆದ ವಿಮೋಚನಾ ಸಪ್ತಾಹ ಪ್ರಯುಕ್ತ ಚಿಂತನ-ಮಂಥನ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾನತಾಡಿದರು.
“ಹೈದ್ರಾಬಾದ್ ಕರ್ನಾಟಕ’ ಹೆಸರನ್ನು “ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿದ ಕರ್ನಾಟಕದ ಅಭಿವೃದ್ಧಿ ಹರಿಕಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಭಾಗದ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು. ಆದ್ದರಿಂದ ಹೊಸ ಹೆಸರು ನೀಡಿ ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ರೂಪರೇಷೆ ಹಾಕಿಕೊಂಡಿದ್ದರು. ಕೆಕೆಆರ್ಡಿಬಿ ಮಂಡಳಿಗೆ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಅನುದಾನ ನೀಡಲಾಗಿದೆ. ಅದರ ಮುಖೇನ ಈ ಭಾಗದಲ್ಲಿ ರಸ್ತೆ, ಕುಡಿಯುವ ನೀರು, ಕೃಷಿ ಮತ್ತು ಉದ್ಯೋಗ ಸೃಷ್ಟಿಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ಉಪನ್ಯಾಸ ನೀಡಿದ ಡಾ|ಸುಭಾಷಚಂದ್ರ ದೊಡ್ಡಮನಿ, ವಿಮೋಚನೆಗಾಗಿ ಈ ಭಾಗದ ಅನೇಕ ಹೋರಾಟಗಾರರು ಬಲಿದಾನ ಮಾಡಿದ್ದಾರೆ. ಆನಂತರ ಸರ್ದಾರ ಪಟೇಲ್ರ ನೇತೃತ್ವದಲ್ಲಿ ನಿಜಾಮರು ಅಖಂಡ ಭಾರತದಲ್ಲಿ ಹೈದ್ರಾಬಾದ್ ಕರ್ನಾಟಕವನ್ನು ವಿಲೀನಗೊಳಿಸಿದರು. ಈ ಇತಿಹಾಸವನ್ನು, ಚಳವಳಿಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಪಠ್ಯದಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು.
ರೇಶ್ಮಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಾರದ ರೇಶ್ಮಿ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಲವಾರಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿಮೋಚನಾ ಚಿಂತನ-ಮಂಥನ ಕಾರ್ಯಕ್ರಮಗಳನ್ನು ಶಾಲೆ-ಕಾಲೇಜುಗಳಲ್ಲಿ ಮಾಡಲು ಸಹಕಾರ ನೀಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಉಪನ್ಯಾಸಕರಿಗೆ ಅಭಿನಂದನೆ ಸಲ್ಲಿಸಿದರು. ಒಕ್ಕೂಟದ ಗೌರವಾಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಒಕ್ಕೂಟದ ಕಾರ್ಯಾಧ್ಯಕ್ಷ ಸಚಿನ್ ಫರಹತಾಬಾದ್, ಜಗನ್ನಾಥ ಪಟ್ಟಣಶೆಟ್ಟಿ, ಡಾ|ವೇದಮೂರ್ತಿ, ಮಲ್ಲಿಕಾರ್ಜುನ ಕಿಳ್ಳಿ, ಗೋಪಾಲ ನಾಟೀಕಾರ, ಆನಂದ ಕಪನೂರು, ಸಂತೋಷ ಚೌಧರಿ ಹಾಗೂ ಯುವಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ