ರಾಜಕಾಲುವೆ ಮಟ್ಟ ತಿಳಿಸಲಿದೆ “ವಾಟರ್‌ ಲೆವೆಲ್‌ ಸೆನ್ಸರ್‌’!

ಮಂಗಳೂರಿನ 20 ಕಡೆ ರಾಜಕಾಲುವೆಯ ಬಳಿ ಸಿಸಿಟಿವಿ ನಿಗಾ

Team Udayavani, Sep 16, 2022, 2:49 PM IST

12

ಮಹಾನಗರ: ಬೆಂಗಳೂರಿನಲ್ಲಿ ಭಾರೀ ಮಳೆ ಬಂದ ಬಳಿಕ ರಾಜಕಾಲುವೆ ಒತ್ತುವರಿ ತೆರವು ಆಗುತ್ತಿದ್ದರೆ, ಮಂಗಳೂರಿನಲ್ಲಿ ತುಂಬಿ ಹರಿಯುವ ರಾಜಕಾಲುವೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಲು 20 ಕಡೆ ಸಿಸಿ ಕೆಮರಾ ಸಹಿತ “ವಾಟರ್‌ ಲೆವೆಲ್‌ ಸೆನ್ಸರ್‌’ ಅಳವಡಿಸಲಾಗಿದೆ.

ಸ್ಮಾರ್ಟ್‌ಸಿಟಿ ಮಂಗಳೂರಿನಲ್ಲಿ ಮಳೆ ಪ್ರಮಾಣ ಅಧಿಕವಿರುವ ಕಾರಣದಿಂದ ಇಲ್ಲಿನ ಕೆಲವು ರಾಜಕಾಲುವೆಗಳಲ್ಲಿ ನೆರೆನೀರು ಉಕ್ಕಿ ಹಲವು ಪ್ರದೇಶಗಳು ಜಲಾವೃತವಾಗಿ ಸಮಸ್ಯೆ ಆಗುತ್ತಿವೆ. ಇಂತಹ ಅಪಾಯದ ಸನ್ನಿವೇಶವನ್ನು ಎದುರಿಸಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಸಿ ಕೆಮರಾ ಸಹಿತ “ವಾಟರ್‌ ಲೆವೆಲ್‌ ಸೆನ್ಸರ್‌’ ಅಳವಡಿಸಿದೆ. ಪೈಲೆಟ್‌ ಪ್ರಾಜೆಕ್ಟ್ ಆಗಿ ಇದು ಮಂಗಳೂರಿನಲ್ಲಿ ಜಾರಿಯಾಗಿದೆ. ಕೊಟ್ಟಾರ, ಪಂಪ್‌ವೆಲ್‌, ಜಪ್ಪಿನ ಮೊಗರು, ಸುಭಾಶ್‌ನಗರ, ಅತ್ತಾವರ, ಕೊಡಿಯಾಲಬೈಲು, ಬಿಜೈ, ಕುದ್ರೋಳಿ, ಪಚ್ಚನಾಡಿ, ಕೋಡಿಕಲ್‌, ಚಿತ್ರಾಪುರ, ಮಾಲೆಮಾರ್‌ ಸಹಿತ 20 ಕಡೆಯ ರಾಜಕಾಲುವೆಯ ಬದಿಯಲ್ಲಿ ಸೆನ್ಸರ್‌ ಅಳವಡಿಸಲಾಗಿದೆ. ಸಿಸಿ ಕೆಮರಾ, ಸೆನ್ಸರ್‌ ಇದರಲ್ಲಿದ್ದು, ಸೋಲಾರ್‌ ಮುಖೇನ ಇದು ನಿರ್ವಹಣೆಯಾಗುತ್ತಿದೆ.

ಯಾಕಾಗಿ?

ಮಳೆ ಬಂದ ಅನಂತರ ಬೃಹತ್‌ ಚರಂಡಿಗಳಲ್ಲಿ ಎಷ್ಟು ನೀರು ಒಳಹರಿವು ಇದೆ? ರಾಜಕಾಲುವೆಯ ಶೇ.50, ಶೇ.75ರಷ್ಟು ತುಂಬಿ ಹರಿಯುತ್ತಿದೆಯೇ? ಅಪಾಯದ ಮಟ್ಟದಲ್ಲಿ ಇದೆಯೇ? ಎಂಬಿತ್ಯಾದಿ ಮಾಹಿತಿ ಈ ಸೆನ್ಸರ್‌ ಮೂಲಕ ಲಭಿಸಲಿದೆ. ಜತೆಗೆ ಇಲ್ಲಿ ಅಳವಡಿಸಲಾದ ಸಿಸಿ ಕೆಮರಾ ಮೂಲಕ ಅಲ್ಲಿನ ಚಿತ್ರಣವನ್ನು ಲೈವ್‌ ಆಗಿಯೇ ವೀಕ್ಷಿಸಬಹುದಾಗಿದೆ.

ಮಾಹಿತಿ ರವಾನೆ ಹೇಗೆ

ಅಳವಡಿಕೆ ಮಾಡಲಾದ ಪರಿಕರದಿಂದ ಮಾಹಿತಿ/ಡೇಟಾ ನೇರವಾಗಿ ಪ್ರಸ್ತುತ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಗೆ ತಲುಪುತ್ತಿದೆ. ಈ ಯೋಜನೆ ಉದ್ಘಾಟನೆಯಾದ ಅನಂತರ ಹಾಗೂ ಪೂರ್ಣ ಮಟ್ಟದಲ್ಲಿ ಅನುಷ್ಠಾನವಾದ ಮೇಲೆ ಇದರ ಮಾಹಿತಿ ಆಯಾ ಜಿಲ್ಲಾಡಳಿತ-ಪಾಲಿಕೆಗೆ ದೊರೆಯಲಿದೆ. ಅನಂತರ ಆ್ಯಪ್‌/ ವೆಬ್‌ಸೈಟ್‌ ಮುಖೇನ ಸಾರ್ವಜನಿಕರ ವೀಕ್ಷಣೆಗೂ ಲಭ್ಯವಾಗುವ ಸಾಧ್ಯತೆಯಿದೆ.

ಮಂಗಳೂರು ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌ ಅವರು ಉದಯವಾಣಿ ಜತೆಗೆ ಮಾತನಾಡಿ, ʼರಾಜಕಾಲುವೆಗಳಲ್ಲಿ ಮಳೆ ನೀರು ಉಕ್ಕಿ ಹರಿಯುವ ಸಂದರ್ಭ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ವಾಟರ್‌ ಲೆವೆಲ್‌ ಸೆನ್ಸರ್‌ ಅಳವಡಿಸಲಾಗಿದೆ. ಈ ಮೂಲಕ ಭಾರೀ ಮಳೆಯ ಸಂದರ್ಭ ಸೂಕ್ತ ಎಚ್ಚರಿಕೆ ವಹಿಸಲು ಸ್ಥಳೀಯಾಡಳಿತಕ್ಕೆ ಸಾಧ್ಯವಾಗಲಿದೆ’ ಎಂದರು.

23 ಕಡೆ ಮಳೆ ಮಾಪನ, 9 ಹವಾಮಾನ ಮಾಪನ

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ, ಅಬಕಾರಿ ಭವನ, ಮುಕ್ಕ ಚೆಕ್‌ಪೋಸ್ಟ್‌, ಬಿಇಒ ಕಚೇರಿ ಬೋಳಾರ, ಸುರತ್ಕಲ್‌ ಪಶು ಆಸ್ಪತ್ರೆ ಸಹಿತ ನಗರದ 23 ಕಡೆಗಳಲ್ಲಿ ಮಳೆ ಮಾಪನ ಕೇಂದ್ರ ಟೆಲಿಮೆಟ್ರಿಕ್‌ ರೈನ್‌ ಗೇಜ್‌ (ಟಿಆರ್‌ಜಿ) ಅಳವಡಿಸಲಾಗಿದೆ. ನಿಗದಿತ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಎಂಬುದರ ಮಾಹಿತಿ ಇದರಿಂದ ಲಭಿಸಲಿದೆ.

ಸರ್ಕ್ನೂಟ್‌ಹೌಸ್‌, ಎಪಿಎಂಸಿ, ಬೈಕಂಪಾಡಿ, ಬಿಜೈ ಮೆಸ್ಕಾಂ ಭವನ ಸಹಿತ 9 ಕಡೆಗಳಲ್ಲಿ ಹವಾಮಾನ ಮಾಪನ ಕೇಂದ್ರ ಟೆಲಿಮೆಟ್ರಿಕ್‌ ವೆದರ್‌ ಸ್ಟೇಷನ್‌ (ಟಿಡಬ್ಲೂ$Âಎಸ್‌) ಅಳವಡಿಸಲಾಗಿದೆ. ಇಲ್ಲಿನ ನಿಗದಿತ ಪ್ರದೇಶದ ಹವಾಮಾನ, ಉಷ್ಣಾಂಶ, ಗಾಳಿಯ ವೇಗ ಸಹಿತ ವಿವಿಧ ಆಯಾಮದ ಮಾಹಿತಿ ದೊರೆಯಲಿದೆ. ಸದ್ಯ ಈ ಎರಡೂ ಕೇಂದ್ರಗಳ ಮಾಹಿತಿ ಬೆಂಗಳೂರಿಗೆ ರವಾನೆಯಾಗುತ್ತಿದೆ. ಮುಂದೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಶೀಘ್ರ ಪೂರ್ಣ ಮಟದಲ್ಟಿ ಜಾರಿ: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಪೈಲೆಟ್‌ ಪ್ರಾಜೆಕ್ಟ್ ಮೂಲಕ ರಾಜ್ಯದ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡದಲ್ಲಿ ನೆರೆ ನಿರ್ವಹಣೆಗಾಗಿ ವಿವಿಧ ಸಾಧನಗಳನ್ನು ಅಳವಡಿಸಲಾಗಿದೆ. ಪೂರ್ಣಮಟ್ಟದಲ್ಲಿ ಇದರ ಅನುಷ್ಠಾನ ಶೀಘ್ರದಲ್ಲಿ ನಡೆಯಲಿದೆ. ಇದರಿಂದ ಲಭ್ಯವಾಗುತ್ತಿರುವ ಡಾಟ ಇದೀಗ ಬೆಂಗಳೂರು ಕಚೇರಿಗೆ ದೊರೆಯುತ್ತಿದೆ. ಮುಂದೆ ಇದರ ಮಾಹಿತಿಯನ್ನು ಸಾರ್ವಜನಿಕರಿಗೂ ನೀಡಲಾಗುತ್ತದೆ. –ಸುನಿಲ್‌ ಗವಾಸ್ಕರ್‌, ವಿಜ್ಞಾನಿ, ಕೆಎಸ್‌ಎನ್‌ಡಿಎಂಸಿ

ದಿನೇಶ್‌ ಇರಾ

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.