ವಿಮೋಚನಾ ದಿನದ “ಕಾವು’; ಕೇಂದ್ರ, ತೆಲಂಗಾಣ ಸರಕಾರದಿಂದ ಪ್ರತ್ಯೇಕ ಸಮಾರಂಭ


Team Udayavani, Sep 17, 2022, 6:50 AM IST

ಹೈದರಾಬಾದ್‌ ವಿಮೋಚನಾ ದಿನ; ಕೇಂದ್ರ ಸರ್ಕಾರ, ತೆಲಂಗಾಣ ಸರ್ಕಾರದಿಂದ ಪ್ರತ್ಯೇಕ ಸಮಾರಂಭ

ಹೈದರಾಬಾದ್‌: “ಹೈದರಾಬಾದ್‌ ವಿಮೋಚನಾ ದಿನ’ದ ನೇಪಥ್ಯದಲ್ಲಿ ತೆಲಂಗಾಣದಲ್ಲಿ ರಾಜಕೀಯ ಕಾವು ಜೋರಾಗಿದೆ.

ಬಿಜೆಪಿ, ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‌ಎಸ್‌) ಮತ್ತು ಎಐಎಂಐಎಂ ತಮ್ಮ ಪಕ್ಷಗಳ ಬಲವರ್ಧನೆಗೆ ಈ ಸಮಾರಂಭವನ್ನು ಬಳಸಿಕೊಳ್ಳಲು ಅಣಿಯಾಗಿವೆ.

ಸೆ.17ರಂದು ಹೈದರಾಬಾದ್‌ನಲ್ಲಿ ನಡೆಯುವ ಪ್ರತ್ಯೇಕ ಸಮಾರಂಭಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್‌ ರಾವ್‌ ರಾಷ್ಟ್ರ ಧ್ವಜ ಹಾರಿಸಲಿದ್ದಾರೆ.

ಭಾರತದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ದಿಟ್ಟ ಕ್ರಮದಿಂದ 1948ರ ಸೆ.17ರಂದು ಹೈದರಾಬಾದ್‌ ರಾಜ್ಯವು ನಿಜಾಮರ ಆಳ್ವಿಕೆಯಿಂದ ಮುಕ್ತಗೊಂಡು ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು. ಈ ದಿನವನ್ನು ಕೇಂದ್ರ ಸರ್ಕಾರ “ಹೈದರಾಬಾದ್‌ ವಿಮೋಚನಾ ದಿನ’ವನ್ನಾಗಿ ಇದೇ ಮೊದಲ ಬಾರಿಗೆ ಆಚರಿಸುತ್ತಿದೆ. ಇದರ ಅಂಗವಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿ:
ಸಿಕಿಂದರಾಬಾದ್‌ನ ಆರ್ಮಿ ಪೆರೇಡ್‌ ಮೈದಾನದಲ್ಲಿ ಶನಿವಾರ ನಡೆಯುವ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಭಾಗವಹಿಸುತ್ತಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಪ್ರದೇಶಗಳು ಹಿಂದಿನ ಹೈದರಾಬಾದ್‌ ರಾಜ್ಯದ ಭಾಗವಾಗಿತ್ತು.

“ತೆಲಂಗಾಣ ಏಕತಾ ದಿನ’ ಆಚರಣೆ:
ಇನ್ನೊಂದೆಡೆ, ತೆಲಂಗಾಣ ಸರ್ಕಾರ ಈ ದಿನವನ್ನು “ತೆಲಂಗಾಣ ಏಕತಾ ದಿನ’ವನ್ನಾಗಿ ಆಚರಿಸುತ್ತಿದೆ. ಹೈದರಾಬಾದ್‌ನ ಸಾರ್ವಜನಿಕ ಉದ್ಯಾನದಲ್ಲಿ ಶನಿವಾರ ನಡೆಯುವ ಸಮಾರಂಭದಲ್ಲಿ ರಾಷ್ಟ್ರಧ್ವಜ ಆರಿಸುವ ಮೂಲಕ ಮೂರು ದಿನಗಳ ಉತ್ಸವಕ್ಕೆ ತೆಲಂಗಾಣ ಸಿಎಂ ಕೆಸಿಆರ್‌ ಚಾಲನೆ ನೀಡಲಿದ್ದಾರೆ.

ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಟ್ಟುಗೂಡಿಸಲು ಶ್ರಮಿಸುತ್ತಿರುವ ಕೆಸಿಆರ್‌, ಬಿಜೆಪಿ ವೇಗಕ್ಕೆ ಬ್ರೇಕ್‌ ಹಾಕಲು ಹೊರಟಿದ್ದಾರೆ. ಮತ್ತೊಂದೆಡೆ, ಇತ್ತೀಚಿನ ಹೈದರಾಬಾದ್‌ ಉಪಚುನಾವಣೆಗಳು ಮತ್ತು ಪಾಲಿಕೆ ಚುನಾವಣೆಗಳಲ್ಲಿ ತನ್ನ ಅಭ್ಯರ್ಥಿಗಳ ಜಯದೊಂದಿಗೆ ಹಿಗ್ಗಿರುವ ಬಿಜೆಪಿ, 2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪಕ್ಷವನ್ನು ವಿಸ್ತರಿಸಲು ಯೋಜಿಸಿದೆ.

ಎಐಎಂಐಎಂ ವತಿಯಿಂದ “ತಿರಂಗಾ ಬೈಕ್‌ ರ್‍ಯಾಲಿ’:
ಇನ್ನೂ ಎಐಎಂಐಎಂ ಮುಖ್ಯಸ್ಥ ಅಸಾಸುದ್ದೀನ್‌ ಓವೈಸಿ ಈ ದಿನವನ್ನು “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಿಸುವಂತೆ ಒತ್ತಾಯಿಸಿ ಕೇಂದ್ರ ಮತ್ತು ತೆಲಂಗಾಣ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ದಿನದ ಪ್ರಯುಕ್ತ ಶುಕ್ರವಾರವೇ ಅವರು “ತಿರಂಗಾ ಬೈಕ್‌ ರ್‍ಯಾಲಿ’ಗೆ ಚಾಲನೆ ನೀಡಿದ್ದಾರೆ. ಈ ವೇಳೆ ಮುಸ್ಲಿಂ ಸಮುದಾಯದ ಅನೇಕರು ಶುಕ್ರವಾರದ ಪ್ರಾರ್ಥನೆ ಮುಗಿಸಿ, ರಾಷ್ಟ್ರ ಧ್ವಜದೊಂದಿಗೆ ರ್‍ಯಾಲಿಯಲ್ಲಿ ಭಾಗವಹಿಸಿದ್ದರು.

ತೆಲಂಗಾಣ ರಾಜ್ಯ ನಿರ್ಮಾಣವಾಗಿ 8 ವರ್ಷಗಳ ನಂತರ ಕೇಂದ್ರ ಸರ್ಕಾರಕ್ಕೆ “ಹೈದರಾಬಾದ್‌ ವಿಮೋಚನಾ ದಿನ’ದ ನೆನಪಾಗಿದೆ. ಅಮಿತ್‌ ಶಾ ಹೈದರಾಬಾದ್‌ಗೆ ಬರುವಾಗ 1,000 ಕೋಟಿ ರೂ.ಗಳ ಅನುದಾನ ತರಲಿದ್ದಾರೋ ಅಥವಾ ಕೇವಲ ಹಿಂದೂ-ಮುಸ್ಲಿಂ ದ್ವೇಷವೋ?.
– ಕೆ.ಟಿ.ರಾಮರಾವ್‌, ತೆಲಂಗಾಣ ಕೈಗಾರಿಕಾ ಸಚಿವ

ಟಾಪ್ ನ್ಯೂಸ್

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.