ಚಾಮರಾಜನಗರದ ಉಮ್ಮತ್ತೂರಿನಲ್ಲಿ ಭಾರಿ ಶಬ್ದ: ಆತಂಕಕ್ಕೊಳಗಾದ ಜನರು

ಭೂಕಂಪನ ದಾಖಲಾಗಿಲ್ಲ. ಇದು ಭೂಕಂಪನವಲ್ಲ

Team Udayavani, Sep 16, 2022, 9:17 PM IST

eart

ಚಾಮರಾಜನಗರ: ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3.40 ರ ಸಮಯದಲ್ಲಿ ಭಾರಿ ಶಬ್ದ ಕೇಳಿ ಬಂದ ಅನುಭವ ಜನರಿಗಾಗಿದ್ದು ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ರೀತಿಯ ಭಾರಿ ಶಬ್ದವನ್ನು ನಾವು ಹಿಂದೆ ಕೇಳಿರಲಿಲ್ಲ. ಈ ಶಬ್ದ ಕೇಳಿಬಂದ ಅನೇಕ ಸೆಕೆಂಡ್‌ಗಳವರೆಗೂ ಶಬ್ದದ ತರಂಗ ಕೇಳಿಬರುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದರು.

ಈ ನಿಗೂಢ ಶಬ್ದಕ್ಕೆ ಕಾರಣವೇನು? ಎಂದು ಜನರು ಆತಂಕಗೊಂಡಿದ್ದರು. ಇದೇ ರೀತಿಯ ಶಬ್ದ ತಾಲೂಕಿನ ದಡದಹಳ್ಳಿ, ಬಸಪ್ಪನಪಾಳ್ಯ ಗ್ರಾಮಗಳಲ್ಲಿ ಮೂರು ದಿನಗಳ ಹಿಂದೆ ಕೇಳಿಬಂದಿತ್ತು.

ಈ ಬಗ್ಗೆ ಉದಯವಾಣಿ ಹಿರಿಯ ಭೂವಿಜ್ಞಾನಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ಅವರನ್ನು ಸಂಪರ್ಕಿಸಿದಾಗ, ಅವರು ಪ್ರತಿಕ್ರಿಯಿಸಿ, ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ಅಪರೂಪಕ್ಕೆ ಹೆಚ್ಚಿನ ಮಳೆ ಬಿದ್ದಾಗ, ಅಂತರ್ಜಲ ಮಟ್ಟ ಹೆಚ್ಚಾಗಿ ಭೂಮಿಯಲ್ಲಿ ನೀರಿನ ಒತ್ತಡ ಜಾಸ್ತಿಯಾಗುತ್ತದೆ. ಭೂಮಿಯೊಳಗೆ ಅನೇಕ ಟೊಳ್ಳು ಜಾಗಗಳಿರುತ್ತವೆ. ಅತೀವ ಮಳೆಯಿಂದಾಗಿ ಭೂಮಿಯೊಳಗಿನ ಬಂಡೆಗಳು ಸರಿದಾಡಿದಾಗ ಈ ರೀತಿಯ ಶಬ್ದಗಳು ಕೇಳಿ ಬರುವ ಸಾಧ್ಯತೆಗಳಿವೆ ಎಂದರು.

ರಾಜ್ಯದ ಯಾವುದೇ ಭಾಗದಲ್ಲಿ ಇಂದು ಭೂಕಂಪನ ದಾಖಲಾಗಿಲ್ಲ. ಹಾಗಾಗಿ ಇದು ಭೂಕಂಪನವಲ್ಲ. ಜನರು ಆತಂಕಕ್ಕೊಳಗಾಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಯಳಂದೂರು ವರದಿ
ಪಟ್ಟಣವೂ ಸೇರಿದಂತೆ ತಾಲೂಕಿನ ಯರಿಯೂರು, ಕಂದಹಳ್ಳಿ, ಮೆಳ್ಳಹಳ್ಳಿ, ದುಗ್ಗಹಟ್ಟಿ, ಸಮೀಪದ ಸಂತೆಮರಹಳ್ಳಿ ಗ್ರಾಮಗಳಲ್ಲಿ ಶುಕ್ರವಾರ ಸಂಜೆ 3.40 ರ ಸಮಯದಲ್ಲಿ ಗಂಟೆ ವೇಳೆ ಭಾರಿ ಶಬ್ಧವಾಗಿದ್ದು ಸಾರ್ವಜನಿಕರು ಬೆಚ್ಚಿಬಿದ್ದಿರುವ ಘಟನೆ ಜರುಗಿದೆ.

ಇದ್ದಕ್ಕಿಂತೆಯೇ ಕಿವಿಗಪ್ಪಳಿಸಿದ ಭಾರಿ ಶಬ್ಧದಿಂದ ಸಾರ್ವಜನಿಕರು ಕ್ಷಣ ಕಾಲ ಬೆಚ್ಚಿದ್ದಾರೆ. ಅಲ್ಲದೆ ಕೆಲವು ಮನೆಗಳಲ್ಲಿ ಫ್ಯಾನ್, ಅಡುಗೆ ಪಾತ್ರೆಗಳು, ಟಿವಿಗಳು ಅಲುಗಾಡಿರುವುದಾಗಿ ಕೆಲವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಇದ್ದಕ್ಕಿದಂತೆಯೇ ಭೂಮಿ ಕಂಪಿಸಿದ ಅನುಭವವಾಗಿದ್ದು ಕೆಲ ನಾಗರೀಕರು ಮನೆಯಿಂದ ಹೊರಬಂದಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಶಬ್ಧ ಎಲ್ಲಿಂದ ಬಂತು ಎಂಬುದರ ಬಗ್ಗೆ ಯಾರಿಗೂ ಖಾತ್ರಿಯಾಗಿಲ್ಲ. ಈಚೆಗೆ ಚಾಮರಾಜನಗರ ತಾಲೂಕಿನ ಕೆಲ ಗ್ರಾಮಗಳಲ್ಲಿ ಇದೆ ತೆರನಾದ ಅನುಭವವಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಗಣಿ, ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಮಾಹಿತಿ ನೀಡಬೇಕಿದೆ.

ಕೆ.ಎಂ. ನಂಜುಂಡಸ್ವಾಮಿ, ಉಪ ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚಾಮರಾಜನಗರ : ಸತತ ಮಳೆಯಿಂದ ಭೂಗರ್ಭದೊಳಗೆ ಹೆಚ್ಚು ನೀರು ಸೇರುತ್ತದೆ. ಈ ಭಾಗವೆಲ್ಲಾ ಸುವರ್ಣಾವತಿ ನದಿ ದಡದಲ್ಲಿದ್ದು ಪ್ರವಾಹದಿಂದ ಬಂದಿರುವ ನೀರು ಭೂಮಿಯೊಳೆಗೆ ಸೇರಿದೆ. ಗಾಳಿಯ ಒತ್ತಡ ಹೆಚ್ಚಾಗಿ ಹೀಗಾಗುತ್ತದೆ. ಇದೊಂದು ಭೂಗರ್ಭದ ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಇದನ್ನು ಡೈನಾಮಿಕ್ ಪ್ರೆಷರ್ ಎಂದು ಕರೆಯಲಾಗುವುದರಿಂದ ಇಂತಹ ಶಬ್ಧ ಬಂದಿರಬಹುದು ಇದು ಭೂಕಂಪವಲ್ಲ. ಸಾರ್ವಜನಿಕರು ಹೆದರುವ ಅಗತ್ಯವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.