ಚುನಾವಣೆಗಿದ್ದ ಅಡ್ಡಿಯಲ್ಲಿ ಅರ್ಧ ನಿವಾರಣೆ


Team Udayavani, Sep 17, 2022, 1:15 PM IST

ಚುನಾವಣೆಗಿದ್ದ ಅಡ್ಡಿಯಲ್ಲಿ ಅರ್ಧ ನಿವಾರಣೆ

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಅರ್ಜಿದಾರರಿಗೆ ಹಿನ್ನಡೆಯಾಗಿದ್ದು, ನಗರದ ಕೆಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ತಕರಾರು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಆ ಮೂಲಕ ಬಿಬಿಎಂಪಿ ಚುನಾವಣೆಗೆ ಇದ್ದ ಅಡ್ಡಿಯಲ್ಲಿ ಅರ್ಧ ನಿವಾರಣೆಯಾದಂತಾಗಿದೆ. ವಾರ್ಡ್‌ ಮರುವಿಂಗಡಣೆ ಅಧಿಸೂಚನೆ ರದ್ದು ಕೋರಿ ಶಾಸಕರಾದ ಸೌಮ್ಯಾರೆಡ್ಡಿ, ಜಮೀರ್‌ ಅಹಮದ್‌ ಮತ್ತಿತರರು ಸಲ್ಲಿಸಿದ್ದ 14 ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿ ಶುಕ್ರವಾರ ಆದೇಶಿಸಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ, ವಾರ್ಡ್‌ ಮರುವಿಂಗಡಣೆ ಮಾಡಿ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ತಿಳಿಸಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತು. ಅರ್ಜಿಗಳನ್ನು ಸೆ.13ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ವಾರ್ಡ್‌ ಮರು ವಿಂಗಡಣೆ ಸಂಕೀರ್ಣವಾದ ಕೆಲಸ. ವಿಸ್ತಾರವಾದ ಪ್ರದೇಶಗಳನ್ನು ಹಲವು ಅಂಶಗಳ ಆಧಾರದಲ್ಲಿ ವಿಂಗಡಿಸಬೇಕಾಗುತ್ತದೆ. ಅದಕ್ಕಾಗಿ ನಿರ್ದಿಷ್ಟ ಮಾರ್ಗಸೂಚಿ ಅನುಸರಿಸಲಾಗಿರುತ್ತದೆ. ಎಲ್ಲ ವಾರ್ಡ್‌ಗಳನ್ನೂ ಸಮಾನವಾಗಿ ವಿಂಗಡಿಸುವುದು ಸುಲಭವಲ್ಲ. ಇಂತಹ ಪರಿಸ್ಥಿತಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉದ್ಭವಿಸುವುದು ಸಹಜ.

ಆದ್ದರಿಂದ, ಸಣ್ಣಪುಟ್ಟ ಲೋಪಗಳಿದ್ದರೆ ನ್ಯಾಯಾಲಯ ಮಧ್ಯ ಪ್ರವೇ ಶಿಸುವುದಿಲ್ಲ. ಗಂಭೀರ ಲೋಪಗಳು ಕಂಡುಬಂದರೆ ಮಾತ್ರ ಮಧ್ಯಪ್ರವೇಶಿಸಲಾಗುವುದು ಎಂದು ಮೌಖೀಕವಾಗಿ ಹೇಳಿದ್ದು ಗಮನಾರ್ಹ.

ಆಯೋಗದ ಮನವಿ: 2011ರ ಜನಗಣತಿ ಆಧರಿಸಿಯೇ ವಾರ್ಡ್‌ ಮರು ರಚಿಸಲಾಗಿದೆ. ವಾರ್ಡ್‌ ವಿಂಗಡಣೆ ಮಾಡುವಾಗ ಕೇವಲ ಜನಸಂಖ್ಯೆಯಷ್ಟೇ ಅಲ್ಲ, ಭೌಗೋಳಿಕ ವಿಸ್ತೀರ್ಣ ಮತ್ತಿತರ ಅಂಶಗಳನ್ನೂ ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಆದ್ದರಿಂದ, ಅರ್ಜಿದಾರರ ವಾದ ಪರಿಗಣಿಸದೆ, ಚುನಾವಣೆಗೆ ಅವಕಾಶ ಮಾಡಿಕೊಡಬೇಕು. ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್‌ ಗಡುವು ನೀಡಿದೆ.

ಕಳೆದ ಎರಡು ವರ್ಷಗಳಿಂದ ಬಿಬಿಎಂಪಿ ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲ. ಸಮಯಬದ್ಧವಾಗಿ ಚುನಾವಣೆ ನಡೆಸುವ ಸಾಂವಿಧಾನಿಕ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ. ಈ ಅಂಶಗಳನ್ನು ನ್ಯಾಯಾಲಯ ಪರಿಗಣಿಸಬೇಕು ಎಂದು ಆಯೋಗ ಮನವಿ ಮಾಡಿತ್ತು.

ಸೆ. 21ಕ್ಕೆ ಮೀಸಲಾತಿ ನಿರ್ಧಾರ: ವಾರ್ಡ್‌ ಮೀಸಲಾತಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಈಗಾಗಲೇ ಪೂರ್ಣಗೊಳಿಸಿರುವ ಹೈಕೋರ್ಟ್‌ ಏಕಸದಸ್ಯ ಪೀಠ ಸೆ. 21ಕ್ಕೆ ಅಂತಿಮ ತೀರ್ಪು ನೀಡಲಿದೆ.

ಮೇಲ್ಮನವಿ ಸಲ್ಲಿಸಿದರೆ ಮತ್ತೆ ವಿಳಂಬ ಸಾಧ್ಯತೆ : ರಾಜ್ಯ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಈಗಾಗಲೇ ಬಹುತೇಕ ಅಂತಿಮಗೊಂಡಿದ್ದು, ಸೆ.22ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಅದಾದ ನಂತರ ಬಿಬಿಎಂಪಿ ಚುನಾವಣೆಗೆ ದಿನಾಂಕ ಘೋಷಿಸಲಿದೆ. ಅಷ್ಟರೊಳಗೆ ನ್ಯಾಯಾಲಯದಲ್ಲಿನ ಎಲ್ಲ ಅರ್ಜಿಗಳು ಇತ್ಯರ್ಥವಾಗಬೇಕಿದೆ. ಸದ್ಯ ವಾರ್ಡ್‌ ಮರುವಿಂಗಡಣೆಗೆ ಸಂಬಂಧಿಸಿದ ಅರ್ಜಿಗಳ ವಜಾ ಪ್ರಶ್ನಿಸಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದರೆ ಚುನಾವಣೆ ದಿನಾಂಕ ಘೋಷಣೆ ಮತ್ತೆ ಮುಂದಕ್ಕೆ ಹೋಗಲಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.