ಮಡಿಕೇಶ್ವರ ಗ್ರಾಪಂ: ಉಪಾಧ್ಯಕ್ಷರ ವಿರುದ್ದ ಅವಿಶ್ವಾಸಕ್ಕೆ ಸೋಲು


Team Udayavani, Sep 17, 2022, 4:26 PM IST

11election

ಮುದ್ದೇಬಿಹಾಳ: ಮಡಿಕೇಶ್ವರ ಗ್ರಾಪಂ ಉಪಾಧ್ಯಕ್ಷ ಸಂಗನಗೌಡ ಮೇಟಿ ವಿರುದ್ಧ 14 ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ.

ಈ ಕುರಿತು ಶುಕ್ರವಾರ ಗ್ರಾಪಂ ಕಚೇರಿಯಲ್ಲಿ ಉಪ ವಿಭಾಗಾ ಧಿಕಾರಿ ಕ್ಯಾಪ್ಟನ್‌ ಮಹೇಶ ಮಾಲಗತ್ತಿ ಉಪಸ್ಥಿತಿಯಲ್ಲಿ ವಿಶೇಷ ಸಭೆ ಕರೆಯಲಾಗಿತ್ತು. ಆದರೆ ಈ ಸಭೆಗೆ ಅವಿಶ್ವಾಸ ಮಂಡಿಸಿದ್ದವರು ಸೇರಿದಂತೆ ಯಾವುದೇ ಸದಸ್ಯರು ಹಾಜರಾಗದೇ ಗೈರು ಉಳಿದು ಅಚ್ಚರಿಗೆ ಕಾರಣರಾದರು.

ಬಹು ಹೊತ್ತಿನವರೆಗೆ ಕಾಯ್ದರೂ ಅವಿಶ್ವಾಸ ನಿರ್ಣಯಕ್ಕೆ ಸಹಿ ಮಾಡಿದ್ದ ಸದಸ್ಯರು, ಇತರೆ ಸದಸ್ಯರು ಸಭೆಗೆ ಬರದ ಕಾರಣ ಮಾಲಗತ್ತಿ ಅವರು ಕೊರಂ ಭರ್ತಿ ಆಗದ ಕಾರಣ ನೀಡಿ ಸಭೆ ರದ್ದುಪಡಿಸಿ, ಅವಿಶ್ವಾಸವು 2/3ರಷ್ಟು ಅಂದರೆ ಒಟ್ಟು 20 ಸದಸ್ಯರ ಪೈಕಿ 14 ಸದಸ್ಯರು ವಿಶ್ವಾಸ ಗಳಿಸುವಲ್ಲಿ ವಿಫಲವಾಯಿತು ಎಂದು ಘೋಷಿಸಿ ಸ್ಥಳದಿಂದ ನಿರ್ಗಮಿಸಿದರು.

ಇದಕ್ಕೂ ಮೊದಲು ಎಲ್ಲ ಸದಸ್ಯರಿಗೆ ನಿಯಮಾನುಸಾರ ನೋಟಿಸ್‌ ಕೊಡಲಾಗಿತ್ತು. ಬೆಳಗ್ಗೆ 11ಕ್ಕೆ ಸಭೆ ನಿಗದಿಪಡಿಸಲಾಗಿತ್ತಾದರೂ ಯಾವುದೇ ಸದಸ್ಯರು ಬರದ ಕಾರಣ ಒಂದು ಗಂಟೆ ಹೊತ್ತು ಕಾಯ್ದು ಮಧ್ಯಾಹ್ನ 12ಕ್ಕೆ ಮತ್ತೆ ಸಭೆ ಪ್ರಾರಂಭಿಸಲಾಯಿತು. ಆಗಲೂ ಯಾವೊಬ್ಬ ಸದಸ್ಯರು ಬರಲಿಲ್ಲ. ಕೊಟ್ಟ ಸಮಯ ಮೀರಿದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮದನ್ವಯ ಕೋರಂ ಭರ್ತಿ ಆಗಲಾರದ ಕಾರಣ ಅವಿಶ್ವಾಸ ನಿರ್ಣಯ 2/3ರಷ್ಟು ಮತಗಳಿಂದ ಅಂಗೀಕಾರಗೊಳ್ಳಲಿಲ್ಲ ಎಂದು ಉಪ ವಿಭಾಗಾಧಿಕಾರಿ ಘೋಷಿಸಿದರು.

ಪಿಡಿಒ ಆನಂದ ಹಿರೇಮಠ, ಕಾರ್ಯದರ್ಶಿ ಯಮನೂರಿ ಲಮಾಣಿ, ಎಸಿ ಕಚೇರಿ ಸಿಬ್ಬಂದಿ ರಮೇಶ ಹೊನ್ನಾಳಿ ಪ್ರಕ್ರಿಯೆಗೆ ಸಹಕರಿಸಿದರು. ತಾಳಿಕೋಟೆ ಠಾಣೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

ಅಧ್ಯಕ್ಷೆ ರಾಜೀನಾಮೆ: ಅಧ್ಯಕ್ಷೆ ಪೂಜಾ ಬಿರಾದಾರ, ಉಪಾಧ್ಯಕ್ಷ ಸಂಗನಗೌಡ ಮೇಟಿ ವಿರುದ್ಧ 14 ಸದಸ್ಯರು ಆ.19ರಂದು ಅವಿಶ್ವಾಸ ನಿರ್ಣಯ ಕುರಿತ ಪತ್ರವನ್ನು ಉಪ ವಿಭಾಗಾಧಿಕಾರಿಗೆ ನೀಡಿದ್ದರು. ಅವಿಶ್ವಾಸ ಕುರಿತು ಸೆ.16ರಂದು ವಿಶೇಷ ಸಭೆ ಕರೆದಿರುವ ಕುರಿತು ಎಲ್ಲ 20 ಸದಸ್ಯರಿಗೂ ನೋಟಿಸ್‌ ಜಾರಿ ಮಾಡಲಾಗಿತ್ತು. ಏತನ್ಮಧ್ಯೆ ಆ.29ರಂದು ಅಧ್ಯಕ್ಷೆ ಪೂಜಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದು ಸೆ.9ರಂದು ಅಂಗೀಕಾರಗೊಂಡಿತ್ತು. ಹೀಗಾಗಿ ಉಪಾಧ್ಯಕ್ಷರ ವಿರುದ್ಧ ಮಾತ್ರ ಅವಿಶ್ವಾಸಕ್ಕೆ ಸಭೆ ನಡೆಸಲಾಗಿತ್ತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.