ಧಾರ್ಮಿಕ ಬೋಧನೆ : ಅಸ್ಸಾಂ ನಲ್ಲಿ 17 ಬಾಂಗ್ಲಾ ಪ್ರಜೆಗಳ ಬಂಧನ
ಅಫ್ಘಾನಿಸ್ತಾನಕ್ಕೆ ಭಯೋತ್ಪಾದಕ ತರಬೇತಿಗಾಗಿ ಕಳುಹಿಸಲು ಸಂಚು...
Team Udayavani, Sep 17, 2022, 7:11 PM IST
ದಿಸ್ಪುರ್ : ಪ್ರವಾಸಿ ವೀಸಾದಲ್ಲಿ ಧಾರ್ಮಿಕ ಬೋಧನೆ ಮತ್ತು ಧಾರ್ಮಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ 17 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.
ವೀಸಾ ಷರತ್ತುಗಳ ಉಲ್ಲಂಘನೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ನವೀನ್ ಸಿಂಗ್ ಹೇಳಿದ್ದಾರೆ.
ಅಖ್ತರ್ ಹುಸೇನ್ ತನಿಖೆ ಚುರುಕು
ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಕರ್ನಾಟಕದಲ್ಲಿ ಜುಲೈನಲ್ಲಿ ಬಂಧಿಸಲಾದ ಭಯೋತ್ಪಾದಕ ಅಖ್ತರ್ ಹುಸೇನ್ ಲಷ್ಕರ್ನನ್ನು ಎನ್ಐಎ ತನಿಖೆ ನಡೆಸುತ್ತಿದೆ. ಎನ್ಐಎ ದಾಖಲಿಸಿರುವ ಎಫ್ಐಆರ್ನಲ್ಲಿ ದೊಡ್ಡ ಮಾಹಿತಿ ಹೊರಬಿದ್ದಿದೆ.
ಅಸ್ಸಾಂ ನಿವಾಸಿ ಅಖ್ತರ್ ಹುಸೇನ್ ಲಷ್ಕರ್ ಯುವಕರನ್ನು ಕಾಶ್ಮೀರ ಮತ್ತು ಅಫ್ಘಾನಿಸ್ತಾನದ ಖೊರಾಸನ್ ಪ್ರಾಂತ್ಯಕ್ಕೆ ಭಯೋತ್ಪಾದಕ ತರಬೇತಿಗಾಗಿ ಕಳುಹಿಸಲು ಸಂಚು ರೂಪಿಸುತ್ತಿದ್ದ ಎಂದು ಎಫ್ಐಆರ್ನಲ್ಲಿ ಹೇಳಲಾಗಿದೆ. ಇದರೊಂದಿಗೆ ಯುವಕರನ್ನು ಧರ್ಮದ ಹೆಸರಿನಲ್ಲಿ ಯುದ್ಧ ಮಾಡುವಂತೆ ಪ್ರೇರೇಪಿಸಿದ್ದ ಎಂದು ತಿಳಿದು ಬಂದಿದೆ.
ಎನ್ಐಎ ಎಫ್ಐಆರ್ನಲ್ಲಿ ಅಖ್ತರ್ ಹುಸೇನ್ ಎಲ್ಇಟಿ ಬೆಂಗಳೂರಿನಿಂದ ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ ಎಂದು ಉಲ್ಲೇಖಿಸಲಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆಗೂ ಸಂಪರ್ಕ ಹೊಂದಿದ್ದ ಎಂದು ಖಚಿತ ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ