ಎನ್‌ಸಿಇಆರ್‌ಟಿಗೆ ನಿಯೋಜಿತ ವಿಶ್ವವಿದ್ಯಾನಿಲಯ ಸ್ಥಾನಮಾನ


Team Udayavani, Sep 18, 2022, 6:15 AM IST

ಎನ್‌ಸಿಇಆರ್‌ಟಿಗೆ ನಿಯೋಜಿತ ವಿಶ್ವವಿದ್ಯಾನಿಲಯ ಸ್ಥಾನಮಾನ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ)ಯು ಸದ್ಯವೇ “ನಿಯೋಜಿತ ವಿಶ್ವವಿದ್ಯಾನಿಲಯ (ಡೀಮ್ಡ್ ಟು ಬಿ ಯುನಿವರ್ಸಿಟಿ) ಸ್ಥಾನಮಾನವನ್ನು ಪಡೆಯಲಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಎನ್‌ಸಿಇಆರ್‌ಟಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಪ್ರಸ್ತಾವನೆಗೆ ಅಂಗೀಕಾರ ಲಭಿಸಿದೆ. ಇದರಿಂದ ದೇಶದ ಶಿಕ್ಷಣ ಕ್ಷೇತ್ರಕ್ಕೆ ಏನು ಲಾಭವಾಗಲಿದೆ, ಹೊಸ ಸ್ಥಾನಮಾನ ಪಡೆದ ಬಳಿಕ ಏನೇನು ಬದಲಾವಣೆಗಳು ಆಗಲಿವೆ, ಎನ್‌ಸಿಇಆರ್‌ಟಿಗೆ ಏನು ಸಾಧ್ಯವಾಗಲಿದೆ ಎಂಬ ವಿವರಗಳು ಇಲ್ಲಿವೆ.

ಮಣಿಪಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ, ಸಂಶೋಧನೆ, ಆವಿಷ್ಕಾರ, ನೀತಿ ರೂಪಣೆಯಂಥ ಚಟುವಟಿಕೆಗಳಲ್ಲಿ ತೊಡಗಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ)ಯು “ಡಿ -ನೊವೊ’ ವಿಭಾಗದಲ್ಲಿ ನಿಯೋಜಿತ ವಿಶ್ವವಿದ್ಯಾನಿಲಯ ಸ್ಥಾನಮಾನವನ್ನು ಪಡೆಯಲಿದೆ.

“ಡಿ-ನೊವೊ ನಿಯೋಜಿತ ವಿ.ವಿ.’ ಎಂದರೇನು?
ಅಸ್ತಿತ್ವದಲ್ಲಿ ಇರುವ ಇತರ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲದ, ನವೀನ ಮತ್ತು ಉದಯಿಸುತ್ತಿರುವ ಜ್ಞಾನ ಕ್ಷೇತ್ರಗಳಲ್ಲಿ ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗುವ ಉದ್ದೇಶದಿಂದ ಹೊಸ ಸಂಸ್ಥೆಯನ್ನು ಹುಟ್ಟುಹಾಕಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ)ಕ್ಕೆ ಕೋರಿಕೆ ಸಲ್ಲಿಸಬಹುದಾದ ಶಿಕ್ಷಣ ಸಂಸ್ಥೆಯನ್ನು ಡಿ-ನೊವೊ ನಿಯೋಜಿತ ವಿಶ್ವವಿದ್ಯಾನಿಲಯ ಎನ್ನಲಾಗುತ್ತದೆ.

ಏನಿದು ಎನ್‌ಸಿಇಆರ್‌ಟಿ?
ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ರಾಷ್ಟ್ರಮಟ್ಟದ ಅತ್ಯುಚ್ಚ ಸಂಸ್ಥೆ ಇದು. ಶೈಕ್ಷಣಿಕ ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳು, ಶಾಲಾ ಶೈಕ್ಷಣಿಕ ಪಠ್ಯಕ್ರಮ ಅಭಿವೃದ್ಧಿ, ಬೋಧನೆ ಮತ್ತು ಕಲಿಕೆಯ ಸಾಮಗ್ರಿಗಳ ಅಭಿವೃದ್ಧಿಗಳ ಸಹಿತ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಎನ್‌ಸಿಇ
ಆರ್‌ಟಿ ಕೈಗೊಳ್ಳುತ್ತದೆ.

ಪ್ರಸ್ತುತ ಸ್ಥಿತಿಗತಿ ಏನು?
ಪ್ರಸ್ತುತ ಎನ್‌ಸಿಇಆರ್‌ಟಿಯ ಪ್ರಾಂತೀಯ ಶಿಕ್ಷಣ ಸಂಸ್ಥೆಗಳು (ಆರ್‌ಇಐಗಳು) ಒದಗಿಸುವ ಸ್ನಾತಕ ಮತ್ತು ಸ್ನಾತಕೋತ್ತರ ಕಲಿಕೆಗಳಿಗೆ ಪದವಿಗಳನ್ನು ನೀಡುವ ಸಂಸ್ಥೆಗಳು ವಿವಿಧ ರಾಜ್ಯಗಳ ವಿಶ್ವವಿದ್ಯಾನಿಲಯಗಳು ಮತ್ತು ಒಂದು ರಾಷ್ಟ್ರೀಯ ವಿಶ್ವವಿದ್ಯಾನಿಲಯ (ಎನ್‌ಇಎಚ್‌ಯು)ಕ್ಕೆ ಸಂಯೋಜನೆಗೊಂಡಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಇರುವ ಪ್ರಾಂತೀಯ ಶೈಕ್ಷಣಿಕ ಸಂಶೋಧನ ಸಂಸ್ಥೆಯಲ್ಲಿ ಇರುವ ಕಲಿಕೆಗಳಿಗೆ ಮೈಸೂರು ವಿ.ವಿ. ಪದವಿ ನೀಡುತ್ತದೆ.

ಐಎನ್‌ಐ ಸ್ಥಾನಮಾನ ಇನ್ನೂ ಸಿಕ್ಕಿಲ್ಲ
-ಎನ್‌ಸಿಇಆರ್‌ಟಿಯು ರಾಷ್ಟ್ರೀಯ ಮಹತ್ವದ ಸಂಸ್ಥೆ (ಐಎನ್‌ಐ) ಸ್ಥಾನಮಾನ ಪಡೆಯಲು ಪ್ರಯತ್ನಿಸುತ್ತಿದೆಯಾದರೂ ಅದು ಸಾಧ್ಯವಾಗಿಲ್ಲ.
– ಮಾನವ ಸಂಪದಭಿವೃದ್ಧಿ ಸಚಿವಾಲಯವು ಪ್ರೊ| ಗೋವರ್ಧನ ಮೆಹತಾ ಅವರ ನೇತೃತ್ವದಲ್ಲಿ ರಚಿಸಿದ್ದ ಸಮಿತಿಯು 2010ರಲ್ಲಿ ಎನ್‌ಸಿಇಆರ್‌ಟಿಗೆ ಐಎನ್‌ಐ ಸ್ಥಾನಮಾನ ನೀಡಬೇಕೆಂದು ಶಿಫಾರಸು ಮಾಡಿತ್ತು. ಆದರೆ ಅದು ಸಾಧ್ಯವಾಗಿಲ್ಲ.

ಡೀಮ್ಡ್ ವಿ.ವಿ. ಸ್ಥಾನಮಾನದಿಂದ
ಏನಾಗುತ್ತದೆ?
01. ಶೈಕ್ಷಣಿಕ ಸಂಶೋಧನೆ, ನಾವೀನ್ಯ ಗಳನ್ನು ಪ್ರವರ್ಧಿಸುವ ಎನ್‌ಸಿಇಆರ್‌ಟಿಯ ಪ್ರಯತ್ನಗಳಿಗೆ ಇಂಬು ಸಿಗಲಿದೆ.
02. ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶೈಕ್ಷಣಿಕ, ಸಂಶೋಧನ ಸಂಸ್ಥೆಗಳ ಜತೆಗೆ ಸಹಭಾಗಿತ್ವ ಸಾಧ್ಯವಾಗಲಿದೆ.
03. ಎನ್‌ಸಿಇಆರ್‌ಟಿಯ ರಾಷ್ಟ್ರೀಯ ಶೈಕ್ಷಣಿಕ ಚಿಂತನ ಚಿಲುಮೆ(ಥಿಂಕ್‌ ಟ್ಯಾಂಕ್‌)ಯ ಪಾತ್ರಕ್ಕೆ ಒತ್ತು ದೊರೆಯುತ್ತದೆ.
04. ಶಾಲಾ ಶಿಕ್ಷಣ, ವೃತ್ತಿಪರ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ಶೈಕ್ಷಣಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರಕಾರ ಗಳಿಗೆ ತಾಂತ್ರಿಕ ಸಹಕಾರವನ್ನು ಒದಗಿಸುವ ರಾಷ್ಟ್ರೀಯ ಸಂಪನ್ಮೂಲ ಸಂಸ್ಥೆಯಾಗಿ ಎನ್‌ಸಿಇಆರ್‌ಟಿಯ ಹೊಣೆಗಾರಿಕೆ ಹೆಚ್ಚಲಿದೆ.
05. 1961ರಲ್ಲಿ ಎನ್‌ಸಿಇಆರ್‌ಟಿ ಸ್ಥಾಪನೆ ಯಾಯಿತು. ಸರಕಾರಗಳಿಗೆ ಶಾಲಾ ಶಿಕ್ಷಣ ವಿಚಾರದಲ್ಲಿ ನೆರವು ಮತ್ತು ಸಲಹೆ ನೀಡುವುದಕ್ಕಾಗಿ ಸೊಸೈಟಿಗಳ ಕಾಯ್ದೆಯಡಿ ಇದನ್ನು ಸ್ಥಾಪಿಸಲಾಗಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.