ಕೋವಿಡ್ v/s ಕೋವಿಡ್: ಸರ್ಕಾರಿ ಶಾಲೆಗೆ ಆದ್ಯತೆ ಹೆಚ್ಚಳ


Team Udayavani, Sep 18, 2022, 5:50 PM IST

web exclusive dinesh govt school

ಸರ್ಕಾರಿ ಶಾಲೆಯಲ್ಲಿ ಕಲಿತ ನಮಗೆಲ್ಲ ಸಿಗೋ ಕೆಲಸದ ಬಗ್ಗೆ, ಬದುಕಿನ ಬಗ್ಗೆ ಹಲವು ಹೆದರಿಕೆ, ಅತೀಯಾದ ಕಲ್ಪನೆಗಳು ಇರುವುದು ಸಹಜವಾಗಿತ್ತು. ಖಾಸಗಿ ಶಾಲಾ ಮಕ್ಕಳಂತೆ ಇಂಗ್ಲಿಷ್‌ ಬರುವುದಿಲ್ಲ, ಅವರ ತರಹ ಬಣ್ಣ – ಬಣ್ಣದ ಬಟ್ಟೆಗಳಿಲ್ಲ, ಬರಲು ಕಾರು – ಬೈಕ್‌ಗಳು ಕನಸು ಮಾತ್ರ ಆಗಿತ್ತು. ಆದರೆ, ಸಿನಿಮಾಗಳಲ್ಲಿ ಹೀರೋ ಒಬ್ಬ ನಾನು ಪಕ್ಕ ಲೋಕಲ್‌ ಸರ್ಕಾರಿ ಶಾಲೆ ಅನ್ನುವಾಗ ನಾವು ಹೀರೋಗಳಾಗುತ್ತಿದ್ದೆವು,

ಬಾಲ್ಯವನ್ನು ನಿಯಮಗಳ ಕಟ್ಟು-ಕಟ್ಟಳೆಗಳ ಪರಿದಿಯೊಳಗೆ ತರದೆ ಆ ಬಾಲ್ಯವನ್ನು ಅದು ಬಂದಂತೆ ಆಸ್ವಾದಿಸಲು ಸಾಧ್ಯವಾಗುತ್ತಿದ್ದದ್ದು ಅದೇ ಸರ್ಕಾರಿ ಶಾಲೆಗಳಲ್ಲಿ ಅಂದರೆ ತಪ್ಪಿಲ್ಲ. ಸೋ ಕಾಲ್ಡ್‌ ಹೈಜೀನ್‌ ಗಳ ಎದುರು ಮನ ಬಂದಂತೆ ಮಣ್ಣಲ್ಲಿ ಹೊರಳಿ ಆಡಿ ನೀಲಿ-ಬಿಳಿ ಅಂಗಿ ಕೆಂಪಾಗುತ್ತಿದ್ದದ್ದು – ಅಮ್ಮ ಅದನ್ನು ನೋಡಿ ದಿನಾ ಬೈದು ಒಗೆಯುತ್ತಿದ್ದದ್ದು…, ಅಷ್ಟು ಸಣ್ಣವರಿದ್ದಾಗಲೇ ಲವ್‌ ಅನ್ನೋ ಶಬ್ದದ ಸ್ಪೆಲ್ಲಿಂಗ್‌ ತಿಳಿಯದಿದ್ರೂ ತಮಾಷೆ ಮಾಡ್ತಾ – ಮುಗ್ದ ಕನಸುಗಳಲ್ಲಿ ತೇಲುತ್ತಿದ್ದ ಕಾಲ ಅದು. ಕೇವಲ ನೆನಪಲ್ಲ ದೂರ ನಿಂತು ನೋಡಿದಾಗ ಅದೇ ಆಧುನಿಕ ಬಾಲ ಗೋಕುಲ ಏನಂತೀರಿ ?

ಆದರೆ, ದೇಶದಲ್ಲಿ ಸರ್ಕಾರಿ ಶಾಲೆಗಿಂತ ಹೆಚ್ಚು ಖಾಸಗಿ ಶಾಲೆಗಳು ಹೆಚ್ಚಿವೆ. ಕೋವೀಡ್‌ – 19 ಕಾರಣ ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ 10,000ಕ್ಕೂ ಹೆಚ್ಚು ಖಾಸಗಿ ಶಾಲೆಗಳನ್ನು ಮುಚ್ಚಲಾಗಿದೆ. ಆದರೆ ವಿಪರ್ಯಾಸವೆಂದರೆ ಆ ನಂತರ ಖಾಸಗಿ ಶಾಲೆಗಳನ್ನು  ತೆರೆಯಲು ಬಂದಿರುವ ಅರ್ಜಿಗಳು ಅದಕ್ಕಿಂತ 4 ಪಟ್ಟು ಹೆಚ್ಚಾಗಿದೆ.

ಇತರ ರಾಜ್ಯಗಳಿಗಿಂತ ಉತ್ತರ ಪ್ರದೇಶದಲ್ಲಿ ಹೊಸ ಖಾಸಗಿ ಶಾಲೆಗಳನ್ನು ತೆರೆಯಲು ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಹೊಂದಿದ್ದು, ಮಧ್ಯಪ್ರದೇಶ ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ 2018-19ಕ್ಕೆ ಹೋಲಿಸಿದರೆ 2020-21ರಲ್ಲಿ ದೇಶದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಕೇಂದ್ರ ಶಿಕ್ಷಣ ಸಚಿವಾಲಯದ ಇತ್ತೀಚಿನ ವರದಿಯ ಪ್ರಕಾರ, ಕೋವಿಡ್‌ ಸಾಂಕ್ರಾಮಿಕ ರೋಗದಿಂದಾಗಿ 2021ರಲ್ಲಿ 5,406 ಖಾಸಗಿ ಶಾಲೆಗಳನ್ನು ಮುಚ್ಚಲಾಗಿದೆ. ಹಾಗೂ 2020ರಲ್ಲಿ 5,052 ಶಾಲೆಗಳನ್ನು ಮುಚ್ಚಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಈಗ ಹೊಸ ಖಾಸಗಿ ಶಾಲೆಗಳನ್ನು ತೆರೆಯಲು ಅರ್ಜಿಗಳು 4.38 ಪಟ್ಟು ಹೆಚ್ಚಾಗಿದೆ. ಆದರೆ, ಸರ್ಕಾರಿ ಶಾಲೆಗಳೂ ಚೇತರಿಕೆಯನ್ನು ಕಾಣುತ್ತಿವೆ. ಅದಕ್ಕೆ ಉದಾಹರಣೆ ಎಂಬಂತೆ, ಕೇಂದ್ರ ಶಿಕ್ಷಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2021ರಲ್ಲಿ ದೇಶಾದ್ಯಂತ 1.85 ಕೋಟಿ ಹೊಸ ಪ್ರವೇಶಗಳು 1ನೇ ತರಗತಿಯಲ್ಲಿ ನಡೆದಿವೆ.

ದೇಶದಲ್ಲಿ 9ರಿಂದ 10ನೇ ತರಗತಿಯವರೆಗಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಡ್ರಾಪ್‌ಔಟ್ 2021ರಲ್ಲಿ 14.6 ಶೇಕಡಕ್ಕೆ ಇಳಿದಿದೆ, ಇದು 2020ರಲ್ಲಿ 16.1% ಆಗಿತ್ತು ಎಂದು ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ. ಈ ಅಂಕಿ-ಅಂಶಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ಸೈಟ್‌ ಮತ್ತು ಪತ್ರಿಕಾ ವರದಿಗಳಿಂದ ಪಡೆಯಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ ಶಾಲೆಗಳಿಗೆ ದಾಖಲಾಗದ ಮಕ್ಕಳನ್ನು ಗುರುತಿಸಲು ಅಧಿಕಾರಿಗಳು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿದವರಿಗೆ ಆರ್ಥಿಕ ಬಿಕ್ಕಟ್ಟು, ಅನಾರೋಗ್ಯ ಮತ್ತು ಕುಟುಂಬ ಸಮಸ್ಯೆಗಳು ಮಕ್ಕಳು ಶಾಲಾ ಶಿಕ್ಷಣದಿಂದ ಹೊರಗುಳಿಯಲು ಕಾರಣ  ಎಂದು ತಿಳಿಯಿತು.

ದೇಶದಲ್ಲಿ ಸರ್ಕಾರಿ ಶಾಲೆಗಳ ಸುಸ್ಥಿತಿಗೆ ಸರ್ಕಾರ ಪ್ರಯತ್ನ ಮಾಡುತ್ತದೆಯಾದರೂ ತಳಮಟ್ಟದ ಆಧಿಕಾರಿಗಳು ಮತ್ತು ಆಡಳಿತ ವ್ಯವಸ್ಥೆ ಭ್ರಷ್ಟಾಚಾರ ಮುಕ್ತವಾಗಿ  ಕ್ರಮ ಕೈಕೊಂಡು ಕಾರ್ಯೋನ್ಮುಕರಾದಾಗ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ಕೊಡುವುದು ಬಿಡಿ ಅವುಗಳಷ್ಟು ಉನ್ನತ ಸ್ಥಿತಿಗೆ ತಲುಪಲೂ ಕಷ್ಟವಾದೀತು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.