ಎರಡ್ಮೂರು ದಿನದಲ್ಲಿ ಸರ್ವೇ ನಡೆಸಿ ಅಗತ್ಯ ಕ್ರಮ

ನಿವಾಸಗಳ ಇ-ಸ್ವತ್ತಿಗೆ ತಾಂತ್ರಿಕ ತೊಂದರೆ; ತಹಶೀಲ್ದಾರ್‌ ಬಳಿ ಅಳಲು ತೋಡಿಕೊಂಡ ರಟ್ಟಿಗೇರಿ ಗ್ರಾಮಸ್ಥರು

Team Udayavani, Sep 19, 2022, 1:26 PM IST

15

ಕುಂದಗೋಳ: ನಮ್ಮ ನಿವಾಸಗಳ ಇ-ಸ್ವತ್ತುಗಳು ಆಗುತ್ತಿಲ್ಲ. ಮಾಡಲು ಹೋದರೆ ತಾಂತ್ರಿಕ ತೊಂದರೆಗಳು ಉಂಟಾಗುತ್ತಿದೆ ಎಂದು ಪಿಡಿಒಗಳು ಹೇಳುತ್ತಿದ್ದಾರೆ ಎಂದು ಇಡೀ ಗ್ರಾಮದ ಜನತೆ ತಹಶೀಲ್ದಾರ್‌ ಎದುರು ತಮ್ಮ ಗೋಳು ತೋಡಿಕೊಂಡರು.

ರಟ್ಟಿಗೇರಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮಸ್ಥರು, ಸೂರು ನಿರ್ಮಿಸಿಕೊಳ್ಳಲು ಬ್ಯಾಂಕಿನಲ್ಲಿ ಸಾಲ ದೊರೆಯುತ್ತಿಲ್ಲ. ನಮ್ಮ ಮನೆಗಳ ಕಂಪ್ಯೂಟರ್‌ ಉತಾರ ನೀಡುವಂತೆ ಪಂಚಾಯತಿಗೆ ಅರ್ಜಿ ಸಲ್ಲಿಸಿದರೆ ನಮ್ಮ ಸ್ಥಳ ಸರಕಾರ ಎಂದು ಸೂಚಿಸುತ್ತಿದೆ ಎಂದು ಪಿಡಿಒಗಳು ಹೇಳುತ್ತಿದ್ದಾರೆ ಎಂದು ದೂರಿದರು.

ಆಗ ತಹಶೀಲ್ದಾರ್‌ ಅಶೋಕ ಶಿಗ್ಗಾಂವ ಮಾತನಾಡಿ, ನಿಮ್ಮ ಗ್ರಾಮವು ಈಗಾಗಲೇ ಭೂಸ್ವಾಧೀನಗೊಂಡಿದ್ದು, ಈ ತೊಂದರೆಯನ್ನು ತ್ವರಿತಗತಿಯಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

1960ರಲ್ಲಿ ಹಳೇ ರಟ್ಟಿಗೇರಿಯಲ್ಲಿ ಸಾಂಕ್ರಾಮಿಕ ರೋಗ ಬಂದಾಗ ಕೆರೆಯ ಬಲದಂಡೆಯಲ್ಲಿ ನಮ್ಮ ಹಿರಿಯರು ಬಂದು ನೆಲೆಸಿದ್ದಾರೆ. ಅಂದಿನ ಗಾಂವಠಾಣ ಜಾಗವನ್ನು ಅನೇಕರು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಎಲ್ಲ ಜಾಗವು ಉಳ್ಳವರ ಪಾಲಾಗುತ್ತಿದೆ. ಆ ಜಾಗವನ್ನು ತೆರವುಗೊಳಿಸಬೇಕೆಂದು ಒಕ್ಕೊರಲಿನಿಂದ ಗ್ರಾಮಸ್ಥರು ದೂರಿದರು.

ಎರಡ್ಮೂರು ದಿನದಲ್ಲಿ ಸರ್ವೇ ಇಲಾಖೆಯಿಂದ ಅಳತೆ ಮಾಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ತಹಶೀಲ್ದಾರ್‌ ಹೇಳಿದರು.

ಸಂಚಾರ ತಾಪತ್ರಯ: ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದೆ. ಸಂಚರಿಸುವ ಜಾಗದಲ್ಲಿ ಎಮ್‌ ಸ್ಯಾಂಡ್‌ ಹಾಗೂ ಕಡಿಯನ್ನು ಬಿಟ್ಟಿದ್ದಾರೆ. ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತದೆ ಎಂದು ಜನರು ದೂರಿದರು. ಇಲಾಖಾಧಿಕಾರಿ ಆರ್‌.ಪಿ. ಕಿತ್ತೂರ ಮಾತನಾಡಿ, ಮಳೆ ಕಾರಣದಿಂದ ಸ್ಥಗಿತವಾಗಿದೆ. ಇನ್ನು 2-3 ದಿನದಲ್ಲಿ ಕಾಮಗಾರಿ ಆರಂಭಿಸುವಂತೆ ಗುತ್ತಿಗೆದಾರನಿಗೆ ಸೂಚಿಸುವುದಾಗಿ ಹೇಳಿದರು.

ಎರಡ್ಮೂರು ದಿನದಲ್ಲಿ ಆರಂಭಿಸದಿದ್ದರೆ ಸಾಮಗ್ರಿಗಳನ್ನು ನಾವು ಮನೆಗೆ ಕೊಂಡೊಯ್ಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಯೋವೃದ್ಧರೊಬ್ಬರು ಮಾತನಾಡಿ, ಸಾಮಾಜಿಕ ಭದ್ರತೆಯಲ್ಲಿ ನೀಡುವ ಪಿಂಚಣಿ ಯನ್ನು ಬ್ಯಾಂಕಿನಲ್ಲಿ ನೀಡುತ್ತಿಲ್ಲ. ಕೇಳಿದರೆ ಬೆಳೆಸಾಲವನ್ನು ಮರುಪಾವತಿ ಮಾಡಿದ ಬಳಿಕ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ದೂರಿದರು.

ತಹಶೀಲ್ದಾರ್‌ ಮಾತನಾಡಿ, ಪಿಂಚಣಿ-ಬೆಳೆ ಪರಿಹಾರದ ಹಣವನ್ನು ಬ್ಯಾಂಕಿನಲ್ಲಿ ತಡೆಯುವಂತಿಲ್ಲ. ಕೂಡಲೇ ಸಂಬಂ ಧಿಸಿದ ಬ್ಯಾಂಕ್‌ಗಳಿಗೆ ಪತ್ರ ಬರೆಯುವುದಾಗಿ ಹೇಳಿದರು.

ಸಮಸ್ಯೆ ದರ್ಶನ: ಗ್ರಾಮದಲ್ಲಿ ಒಂದು ಓಣಿಯಲ್ಲಿಯೂ ಚರಂಡಿ ನಿರ್ಮಾಣಗೊಂಡಿಲ್ಲ. ಚರಂಡಿಯ ನೀರು ರಸ್ತೆ ಮಧ್ಯೆ ಹರಿಯುತ್ತಿದೆ ಎಂದು ಗ್ರಾಮಸ್ಥರು ದೂರಿ ತಹಶೀಲ್ದಾರ್‌ ಹಾಗೂ ತಾಪಂ ಇಒ ಡಾ| ಮಹೇಶ ಕುರಿಯವರನ್ನು ಊರನ್ನು ಒಮ್ಮೆ ನೋಡಬನ್ನಿ ಎಂದು ಕರೆದೊಯ್ದು ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿದರು.

ಇಒ ಡಾ| ಮಹೇಶ ಮಾತನಾಡಿ, ಪಿಡಿಒ ಸುನಿಲ ಕಾಂಬಳೆ ಅವರಿಗೆ ಕೂಡಲೆ ಸಭೆ ನಡೆಸಿ ಅಂದಾಜು ಪತ್ರಿಕೆ ಸಿದ್ಧಪಡಿಸಿ ನೀಡುವಂತೆ ಸೂಚಿಸಿದರು.ಗ್ರಾಪಂ ಅಧ್ಯಕ್ಷೆ ಪುಪ್ಪಾ ಮಂಜುನಾಥ ಕಂಬಳಿ ಅಧ್ಯಕ್ಷತೆ ವಹಿಸಿದ್ದರು.

ಸದಸ್ಯರಾದ ನೀಲಪ್ಪ ಆಡಿನ, ಶೋಭಾ ತಳ್ಳಳ್ಳಿ, ಮಂಜಪ್ಪ ಮಾದರ, ರಮೇಶ ಲಮಾಣಿ ಹಾಗೂ ಫಕ್ಕೀರಗೌಡ ಮಾಳಪ್ಪಗೌಡ್ರ, ಬೀರಪ್ಪ ಕಂಬಳಿ, ನೀಲಪ್ಪ ಗುಡೇನಕಟ್ಟಿ, ಮಂಜುನಾಥ ಸಂಶಿ, ರಮೇಶ ಸೂರಣಗಿ, ಮಾರುತಿ ಅಂಗಡಿ, ನಿಂಗನಗೌಡ ಪಾಟೀಲ, ಮುತ್ತು ಕಚೇರಿ, ಶಿವಪ್ಪ ಮುದಕಣ್ಣವರ, ಮುತ್ತು ಮುದಕಣ್ಣವರ ಇನ್ನಿತರರಿದ್ದರು.

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.