ಬಿಜೆಪಿ: ಮನೆಯೊಂದು ಮೂರು ಬಾಗಿಲು


Team Udayavani, Sep 19, 2022, 4:22 PM IST

TDY-14

ಸಕಲೇಶಪುರ: ಬಿಜೆಪಿ ಕೋರ್‌ ಸಮಿತಿ ಸಭೆಯಲ್ಲಿ ಉಂಟಾದ ಗೊಂದಲ ಜಾತಿ ರಾಜಕೀಯಕ್ಕೆ ಕೆಲವರು ತಿರುಗಿಸಿದ್ದರಿಂದ ತಾಲೂಕು ಬಿಜೆಪಿಯಲ್ಲಿ ಎಲ್ಲವು ಸರಿಯಿಲ್ಲ ಎಂಬುದು ಜಗಜಾಹೀರಾಗಿದೆ.

ಶನಿವಾರ ತಾಲೂಕಿನ ಗಡಿಗ್ರಾಮ ವಾಟೆಹಳ್ಳಿ ಸಮೀಪದ ಖಾಸಗಿ ರೆಸಾರ್ಟ್‌ವೊಂದರಲ್ಲಿ ನಡೆದ ಪಕ್ಷದ ಕೋರ್‌ ಸಮಿತಿ ಸಭೆಯಲ್ಲಿ ಮಾಜಿ ಶಾ ಸಕ ಎಚ್‌.ಎಂ ವಿಶ್ವನಾಥ್‌ ಚುನಾವಣೆ ಎದುರಿಸಲು ಕಾರ್ಯಕರ್ತರಲ್ಲಿ ಗೊಂದಲವಾಗುತ್ತಿದೆ. ಇಬ್ಬರು ಪ್ರಬಲ ಅಕಾಂಕ್ಷಿಗಳು ಸರಿಯಾದ ದಿಕ್ಕಿನಲ್ಲಿ ಹೋ ಗುತ್ತಿಲ್ಲ, ಸಿಮೆಂಟ್‌ ಮಂಜುನಾಥ್‌ ಅರಕಲಗೂಡಿ ನವರಾಗಿದ್ದಾರೆ. ನಾರ್ವೆ ಸೋಮಶೇಖರ್‌ ಬೆಂಗಳೂರಿನವರಾಗಿದ್ದಾರೆ, ಸ್ಥಳೀಯವಾಗಿ ಪ್ರಬಲ ಅಭ್ಯರ್ಥಿಗಳಿಲ್ಲದ ಕಾರಣ ಈ ರೀತಿ ಆಗುತ್ತಿದೆ ಎಂದಿದ್ದಾರೆ.

ಮಂಜು ವಿರುದ್ಧ ಒಂದಾದ ಒಕ್ಕಲಿಗರು: ವಿಶ್ವನಾಥ್‌ರವರ ಮಾತಿಗೆ ಬೇಸತ್ತ ಸಿಮೆಂಟ್‌ ಮಂಜುನಾಥ್‌ ನಾನು ಅರಕಲಗೂಡಿನವನಲ್ಲ ಇದೇ ವಿಧಾನಸಭಾ ವ್ಯಾಪ್ತಿಯ ಕಟ್ಟಾಯ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ಹುಟ್ಟಿದ್ದು ಸಕಲೇಶ ಪುರದಲ್ಲೆ ಬೆಳೆದು ಬಂದಿದ್ದೇನೆ ಎಂದು ತಿರುಗುತ್ತರ ನೀಡಿದ್ದಾರೆ. ಸಿಮೆಂಟ್‌ ಮಂಜುರವರ ತಿರುಗುತ್ತರಕ್ಕೆ ಬೇಸರಗೊಂಡ ವಿಶ್ವನಾಥ್‌ ಪಕ್ಷದ ಆಪ್ತರ ಬಳಿ ನೋವನ್ನು ಹಂಚಿಕೊಂಡಿದ್ದಾರೆ. ಇದು ಒಬ್ಬರಿಂದ ಒಬ್ಬರಿಗೆ ಹರಡಿ ಸಿಮೆಂಟ್‌ ಮಂಜು ಅವರು ವಿಶ್ವ ನಾಥ್‌ ಅವರನ್ನು ನಿಂದಿಸಿದ್ದಾರೆಂದು ಬಿಂಬಿತವಾಗಿದೆ. ಈ ಸಂಬಂಧ ಭಾನುವಾರ ಒಕ್ಕಲಿಗ ಸಮುದಾಯದ ಮುಖಂಡರುಗಳು ಪಕ್ಷಾ ತೀತಾವಾಗಿ ಒಂದಾಗಿ ಸಭೆ ಸೇರಿ ಸಿಮೆಂಟ್‌ ಮಂಜು ವಿರುದ್ಧ ಮುಂದಿನ ಹೋರಾಟಕ್ಕೆ ತೀರ್ಮಾನ ಮಾಡುವ ಕ್ರಮ ಕೈಗೊಂಡರು.

ಬಿಜೆಪಿಗೆ ಹಿನ್ನಡೆ: ಒಟ್ಟಾರೆ ಬಿಜೆಪಿ ಕೋರ್‌ ಸಮಿತಿ ಸಭೆಯಲ್ಲಿ ಮುಕ್ತಾಯಗೊಳ್ಳಬೇಕಾಗಿದ್ದ ಸಣ್ಣ ಗೊಂದಲ ಜಾತಿ ರಾಜಕೀಯಕ್ಕೆ ತಿರುಗಿರುವುದು, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಈಗಾಗಲೆ ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುನಾವ ಣೆಯ ಪರಾಜಿತ ಅಭ್ಯರ್ಥಿ ನಾರ್ವೆ ಸೋಮಶೇಖರ್‌ ಬಣ, ಮತ್ತೋರ್ವ ಟಿಕೆಟ್‌ ಅಕಾಂಕ್ಷಿ ಸಿಮೆಂಟ್‌ ಮಂಜುನಾಥ್‌ ಬಣ, ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ ಬಣ ಸೇರಿ ದಂತೆ ಇನ್ನು ಹಲವು ಬಣಗಳು ಹುಟ್ಟಿಕೊಂಡಿದ್ದು, ಪಕ್ಷದ ಸಂಘಟನೆಗೆ ತೀವ್ರ ಹಿನ್ನಡೆಯಾಗಲಿದೆ ಎನ್ನ ಲಾಗಿದೆ.

ಸಿಮೆಂಟ್‌ ಮಂಜು ಪ್ರಬಲ ಟಿಕೆಟ್‌ ಆಕಾಂಕ್ಷಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀ ಯರೆ ಕೈ ಕೊಟ್ಟಿದ್ದರಿಂದ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್‌, ಕೆಲವೇ ಸಾವಿರ ಮತಗಳಿಂದ ಪರಾಜಿತಗೊಂಡಿದ್ದರು. ನಂತರ ನಾರ್ವೆ ಸೋಮಶೇಖರ ಕ್ಷೇತ್ರದಿಂದ ದೂರವಿದ್ದಿದ್ದನ್ನೆ ಬಳಸಿಕೊಂಡ ಮತೋರ್ವ ಅಕಾಂಕ್ಷಿ ಸಿಮೆಂಟ್‌ ಮಂಜುನಾಥ್‌ ಹಾಸನ ವಿಧಾನಸಭಾ ಕ್ಷೇತ್ರದ ಡೈನಾಮಿಕ್‌ ಶಾಸಕ ಪ್ರೀತಂ ಗೌಡ ಮಾರ್ಗದರ್ಶನದಲ್ಲಿ ಪ್ರಬಲ ಟಿಕೆಟ್‌ ಅಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ. ಇದರಿಂದಾಗಿ ಪಕ್ಷದ ಹೈಕಮಾಂಡ್‌ಗೆ ನಾರ್ವೆ ಸೋಮಶೇಖರ್‌ ಅವರಿಗೆ ಟಿಕೆಟ್‌ ನೀಡುವುದೋ ಅಥವಾ ಸಿಮೆಂಟ್‌ ಮಂಜುನಾಥ್‌ರವರಿಗೆ ಟಿಕೇಟ್‌ ನೀಡುವುದೋ ಎಂಬ ಗೊಂದಲವಿದೆ.

ಸ್ವಪಕ್ಷದಲ್ಲೇ ಮಂಜು ವೇಗಕ್ಕೆ ಕಡಿವಾಣ: ಈ ನಡುವೆ ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ರವರ ಹಿಂಬಾಲಕರ ಸಿಮೆಂಟ್‌ ಮಂಜು ವಿರುದ್ಧದ ನಡೆ ಬಿಜೆಪಿಯಲ್ಲಿ ಮತ್ತಷ್ಟು ಗೊಂದಲ ಹುಟ್ಟು ಹಾಕಿದೆ. ಕ್ಷೇತ್ರದಲ್ಲಿ ಬಿರುಸಾಗಿ ತಳಮಟ್ಟದಲ್ಲಿ ಪಕ್ಷ ಸಂಘಟಿಸುತ್ತಿದ್ದ ಸಿಮೆಂಟ್‌ ಮಂಜು ಅವರ ವೇಗಕ್ಕೆ ಸ್ವಪಕ್ಷೀಯ ಮುಖಂಡರೆ ಬ್ರೇಕ್‌ ಹಾಕುತ್ತಿದ್ದಾರೆ ಎನ್ನಲಾಗಿದೆ. ಪಕ್ಷವನ್ನು ಹಿಡಿತದಲ್ಲಿಟ್ಟುಕೊಂಡು ಪಕ್ಷವನ್ನು ಸಂಘಟಿಸಬೇಕಾಗಿದ್ದ ತಾಲೂಕು ಅಧ್ಯಕ್ಷರು ಸಹ ಗುಂಪುಗಾರಿಕೆ ಮಾಡುತ್ತಿದ್ದು, ತಮ್ಮ ಹಿಂಬಾಲಕರಿಗೆ ಪಕ್ಷದಲ್ಲಿ ಎರಡೆರಡು ಹುದ್ದೆಗಳನ್ನು ನೀಡಿದ್ದಾರೆ ಎಂದು ಪಕ್ಷದ ಕೆಲವು ಕಾರ್ಯಕರ್ತರು ಆರೋಪ ಮಾಡುತ್ತಿದ್ದಾರೆ.

ವಿಪಕ್ಷಗಳಿಗೆ ಲಾಭ ತರಲಿದೆ ಒಳ ಜಗಳ: ಮುಂದಿನ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಸಂಘಟಿಸಬೇಕಾಗಿದ್ದ ತಾಲೂಕು ಅಧ್ಯಕ್ಷರು ಕಾರ್ಯಕರ್ತರಿಗೆ ಹುಮ್ಮಸ್ಸು ತರುವಲ್ಲಿ ವಿಫ‌ಲರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಸಕಲೇಶಪುರವು ಒಂದಾಗಿದೆ. ಆದರೆ ಪಕ್ಷದ ಮುಖಂಡರ ನಿರ್ಲಕ್ಷ್ಯ ದಿಂದಲೆ ಕ್ಷೇತ್ರ ಮತ್ತೂಮ್ಮೆ ಕಳೆದಕೊಳ್ಳುವುದರಲ್ಲಿ ಅನುಮಾನವಿಲ್ಲದಾಗಿದೆ. ಪಕ್ಷದ ಒಳಜಗಳಗಳನ್ನು ಸರಿ ಪಡಿಸಿ, ಮುಖಂಡರ ನಡುವೆ ಒಮ್ಮತ ಮೂಡಿಸಬೇಕಾಗಿರುವ ಪಕ್ಷದ ವರಿಷ್ಠರು ಇತ್ತ ತಲೆ ಹಾಕುತ್ತಿಲ್ಲ. ಮೂರು ಬಾರಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿರುವ ಹಾಲಿ ಶಾಸಕ ಎಚ್‌.ಕೆ ಕುಮಾರಸ್ವಾಮಿ ಅವರ ಕಾರ್ಯವೈಖರಿ ಕುರಿತು ಕ್ಷೇತ್ರದ ಜನರಿಗೆ ಒಳ್ಳೆಯ ಅಭಿಪ್ರಾಯವಿಲ್ಲದಿದ್ದರು ಸಹ ಬಿಜೆಪಿ ಮತ್ತು ಕಾಂಗ್ರೆಸ್‌ ಒಳ ಜಗಳ ಜೆಡಿಎಸ್‌ಗೆ ಎಲ್ಲ ರೀತಿಯಲ್ಲಿ ಅನುಕೂಲವಾಗುತ್ತಿದೆ ಎಂಬ ಮಾತು ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿದೆ.

ಒಕ್ಕಲಿಗರ ಆಕ್ರೋಶಕ್ಕೆ ವಿಚಲಿತರಾದ್ರ ಸಿಮೆಂಟ್‌ ಮಂಜು?: ಒಕ್ಕಲಿಗ ಸಮುದಾಯ ಯಾವಾಗ ತಮ್ಮ ವಿರುದ್ಧ ತಿರುಗಿ ಬೀಳುತ್ತೆ ಅಂತ ತಿಳಿಯಿತೋ ಇದರಿಂದ ಆತಂಕಕ್ಕೆ ಸಿಲುಕಿದ ಸಿಮೆಂಟ್‌ ಮಂಜುನಾಥ್‌, ವಿಶ್ವನಾಥ್‌ ಅವರು ಪಕ್ಷದ ಹಿರಿಯರಾಗಿದ್ದು, ಒಕ್ಕಲಿಗ ಸಮಯದಾಯದ ಪ್ರಬಲ ಮುಖಂಡರಾಗಿದ್ದಾರೆ. ಅವರು ರಾಜಕೀಯದಲ್ಲಿ ನನ್ನ ಗುರುಗಳಾಗಿದ್ದು, ನಾನು ಅವರನ್ನು ಯಾವುದೆ ರೀತಿಯಲ್ಲಿ ನಿಂದಿಸಿಲ್ಲ. ಅವರು ನನಗೆ ಅರಕಲಗೂಡಿ ನವನೆಂದು ಹೇಳಿದಕ್ಕೆ, ನಾನು ಇದೇ ಕ್ಷೇತ್ರದ ವ್ಯಾಪ್ತಿಗೆ ಸೇರಿದ್ದೇನೆ ಎಂದು ಉತ್ತರ ನೀಡಿದ್ದೇನೆ. ಅದು ಬಿಟ್ಟರೆ ಬೇರೆ ಯಾವ ಘಟನೆಯು ನಡೆದಿಲ್ಲ, ಕೋರ್‌ ಸಮಿತಿ ಸಭೆಯಲ್ಲಿ ಒಟ್ಟು 12 ಮಂದಿ ಸೇರಿದ್ದು ಯಾರಿಗೆ ಬೇಕಾದರು ಈ ಕುರಿತು ಕೇಳಬಹುದು. ನಾನು ಇಲ್ಲಿಯವರೆಗೆ ಯಾವುದೆ ಜನಾಂಗಕ್ಕೆ ನೋವಾಗದಂತೆ ನಡೆದುಕೊಂಡು ಬಂದಿದ್ದೇನೆ. ವಿಶ್ವನಾಥ್‌ ಅವರಿಗೆ ನನ್ನ ನುಡಿಯಿಂದ ನೋವುಂಟಾಗಿದ್ದರೆ ಈ ಕುರಿತು ನಾನು ಅವರಿಗೆ ಕ್ಷಮೆ ಕೋರುತ್ತೇನೆ ಎಂದು ಬಹಿರಂಗವಾಗಿ ವಿಡಿಯೋ ಹೇಳಿಕೆ ಕೊಟ್ಟಿದ್ದಾರೆ.

 

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.