ಭೌತಶಾಸ್ತ್ರದಲ್ಲಿ 18 ಪುಸ್ತಕ ರಚಿಸಿದ ಪ್ರಾಧ್ಯಾಪಕ

ರಾಜಸ್ಥಾನದ ಓಪಿಜೆಎಸ್‌ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ

Team Udayavani, Sep 19, 2022, 6:21 PM IST

ಭೌತಶಾಸ್ತ್ರದಲ್ಲಿ 18 ಪುಸ್ತಕ ರಚಿಸಿದ ಪ್ರಾಧ್ಯಾಪಕ

ಬೀದರ: ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರೊಬ್ಬರು ಬೋಧನೆ ವೃತ್ತಿ ಜತೆಗೆ ಬರವಣಿಗೆಯ ಗೀಳು ಬೆಳೆಸಿಕೊಂಡು ಭೌತಶಾಸ್ತ್ರ (ಫಿಜಿಕ್ಸ್‌)ವಿಷಯಕ್ಕೆ ಸಂಬಂಧಪಟ್ಟಂತೆ 18 ಪುಸ್ತಕಗಳನ್ನು ರಚಿಸುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಿದ್ದಾರೆ.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಡಾ|ರಾಜಕುಮಾರ ಹೊಸದೊಡ್ಡೆ ಎಂಬುವರೇ ಸದ್ದಿಲ್ಲದೇ ಸಾಧನೆ ಮಾಡಿದ ಪ್ರಾಧ್ಯಾಪಕರು. ವಿದ್ಯಾರ್ಥಿಗಳ ಬೋಧನೆ ಜತೆ ಜತೆಗೆ ಸಾಹಿತ್ಯ ಕೃಷಿಯಲ್ಲೂ ಸೈ ಎನಿಸಿದ್ದು, ಈ ಪ್ರದೇಶದಲ್ಲಿ ಒಂದೇ ವಿಷಯದಲ್ಲಿ ಅತಿ ಹೆಚ್ಚು ಪುಸ್ತಕಗಳನ್ನು ರಚಿಸಿದ ಮೊದಲಿಗರು ಎನಿಸಿದ್ದಾರೆ. ಕಠಿಣ ಎನಿಸಿರುವ ಭೌತಶಾಸ್ತ್ರ ವಿಷಯವನ್ನು ಸರಳೀಕರಣವಾಗಿಸಿ ವಿದ್ಯಾರ್ಥಿಗಳಿಗೆ ಮುಟ್ಟಿಸುವ ಉದ್ದೇಶದಿಂದ ಈವರೆಗೆ 18
ಪುಸ್ತಕಗಳನ್ನು ಬರೆದಿದ್ದಾರೆ.

ಬಿಎಸ್‌ಸಿ ಪದವಿಯ ಒಟ್ಟು 6 ಸೆಮಿಸ್ಟರ್‌ ಗಳಿಗೆ 16 ಪುಸ್ತಕಗಳು, ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯ ಕ್ರಮದಂತೆ ಇನ್ನೆರಡು ಪುಸ್ತಕಗಳು ಸೇರಿ ಒಟ್ಟು 18 ಪುಸ್ತಕಗಳನ್ನು ಹೊರ ತಂದಿದ್ದು, ಬೀದರ ಒಳಗೊಂಡು ಬೇರೆ ಜಿಲ್ಲೆಗಳಲ್ಲಿನ ವಿವಿಧ ಕಾಲೇಜುಗಳಲ್ಲಿ ಈ ಪುಸ್ತಕಗಳನ್ನು ಪಠ್ಯವಾಗಿ ಬೋಧಿಸಲಾಗುತ್ತಿದೆ. ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಹ ಡಾ|ಹೊಸದೊಡ್ಡಿ ಅವರ ಪುಸ್ತಕಗಳನ್ನು ಮೆಚ್ಚಿದ್ದಾರೆ.

2015ರಲ್ಲಿ ಮೊದಲ ಪುಸ್ತಕ ಹೊರ ತಂದಿದ್ದು, ಕಲ್ಬುರ್ಗಿಯ ಸಿದ್ಧಲಿಂಗೇಶ್ವರ ಪ್ರಕಾಶನದವರು ಪುಸ್ತಕಗಳ ಮುದ್ರಣದ ಜವಾಬ್ದಾರಿ ಹೊತ್ತಿದ್ದಾರೆ. ಬಿಎಸ್‌ಸಿ ಸೆಮಿಸ್ಟರ್‌ಗಳಿಗೆ ಅನುಗುಣವಾಗಿ ಮೆಕ್ಯಾನಿಕ್ಸ್‌, ಸೌಂಡ್ಸ್‌, ಹರ್ಟ್ಸ್ ಥ್ರೋ ಡೈನಾಮಿಕ್ಸ್‌, ಎಲೆಕ್ಟ್ರಿಸಿಟಿ ಆಂಡ್‌ ಮೆಕ್ಯಾನಿಸಂ, ನ್ಯೂಕ್ಲಿಯರ್‌ ಫಿಜಿಕ್ಸ್‌, ಸ್ಟೆಟಿಕಲ್‌ ಮೆಕ್ಯಾನಿಕ್ಸ್‌, ಎಲೆಕ್ಟ್ರಾನಿಕ್ಸ್‌, ಸಾಲಿಡ್‌ ಸ್ಟೇಟ್‌ ಫಿಜಿಕ್ಸ್‌ ಹೀಗೆ ವಿವಿ ವಿಷಯಗಳ ಮೇಲೆ ಪುಸ್ತಕಗಳು ರಚನೆಯಾಗಿವೆ.

ಎಂಎಸ್ಸಿ, ಎಂಫಿಲ್‌ ಮತ್ತು ಪಿಎಚ್‌ಡಿ ಅಧ್ಯಯನ ಮಾಡಿರುವ ಡಾ|ಹೊಸದೊಡ್ಡೆ ಅವರು 2000 ವರ್ಷದಿಂದ 2009ರವರೆಗೆ ಭಾಲ್ಕಿ ಸಿಬಿ ಕಾಲೇಜಿನಲ್ಲಿ ಬೋಧಕರಾಗಿ ನಂತರ 2009ರಿಂದ 2021ರವರೆಗೆ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ಮಾಡಿದ್ದು, ಈಗ ಸದ್ಯ ಬೀದರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ|ಹೊಸದೊಡ್ಡೆ ಅವರು “ಆನ್‌ ಎನಲೈಟಿಕಲ್‌ ಸ್ಟಡಿ ಆನ್‌ ಎಕ್ಸಪರಿಮೆಂಟಲಿ ಆಬ್ಸರ್ಡ್‌ ಇಂಟ್ರಿನಸಿಕ್‌ ಎಫೆಕ್ಟ್ ಆಫ್‌ ಸೈಜ್‌ ಡಿಪೆಂಡ್ಸ್‌ ಇನ್‌ ಥರ್ಮೋ ಎಲಾಸ್ಟಿಕ್ಸ್‌ ಪ್ರಾಪರ್ಟಿಸ್‌ ಆಫ್‌ ದಿ ನ್ಯಾನೋ ಮಟೇರಿಯಲ್‌ ವಿಷಯದ ಮೇಲೆ ಮಂಡಿಸಿದ
ಪ್ರಬಂಧಕ್ಕೆ ರಾಜಸ್ಥಾನದ ಓಪಿಜೆಎಸ್‌ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.

ಪದವಿ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ ವಿಷಯ ಕಠಿಣ ಎನಿಸಿದೆ. ಹಾಗಾಗಿ ಸಹಾಯಕ ಪ್ರಾಧ್ಯಾಪಕರಾಗಿರುವ ತಮಗೆ ಮಕ್ಕಳಿಗೆ ಭೌತಶಾಸ್ತ್ರ ಸರಳೀಕರಣವಾಗಿ ಮುಟ್ಟಿಸಿ ಅವರ ಕಲಿಕೆಗೆ ನೆರವಾಗಬೇಕೆಂಬ ಆಶಯ ಹುಟ್ಟಿಕೊಂಡಿತು. 2015ರಲ್ಲಿ ಪ್ರಥಮ ಪುಸ್ತಕ ಹೊರ ಬಂದಿದ್ದು, ಈವರೆಗೆ ಬಿಎಸ್‌ಸಿ ಪದವಿಯ 6 ಸೆಮಿಸ್ಟರ್‌ ಗಳಿಗೆ 18 ಪುಸ್ತಕಗಳನ್ನು ರಚಿಸಿದ್ದೇನೆ. ವಿವಿಧ ಕಾಲೇಜುಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ರೆಫರ್‌ ಮಾಡುತ್ತಿರುವುದು ಖುಷಿ ತಂದಿದೆ.
ಡಾ|ರಾಜಕುಮಾರ
ಹೊಸದೊಡ್ಡೆ, ಸಹಾಯಕ
ಪ್ರಾಧ್ಯಾಪಕ, ಸರ್ಕಾರಿ ಪ್ರಥಮ ದರ್ಜೆ
ಕಾಲೇಜು, ಬೀದರ.

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.