ಸೌಹಾರ್ದತ ನಡಿಗೆಗೆ ಬ್ರೇಕ್ ಹಾಕಿದ ಪೊಲೀಸರು: ಕಾರ್ಯಕರ್ತರು ವಶಕ್ಕೆ


Team Udayavani, Sep 19, 2022, 7:07 PM IST

ಸೌಹಾರ್ದತಾ ನಡಿಗೆಗೆ ಬ್ರೇಕ್ ಹಾಕಿದ ಪೊಲೀಸರು: ಕಾರ್ಯಕರ್ತರು ವಶಕ್ಕೆ

ಕುಳಗೇರಿ ಕ್ರಾಸ್ : (ಬಾಗಲಕೋಟೆ) ಹಿಂದೂ ಜಾಗರಣಾ ವೇದಿಕೆಯವರು ಕೆರೂರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ‘ಕೆರೂರ ಚಲೋ, ಕಾರ್ಯಕ್ರಮ ವಿರೋಧೀಸಿ ಭಾರತೀಯ ಶರಣ ಸೇನಾ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸೌಹಾರ್ದತ ನಡಿಗೆ ಕೆರೂರ ಕಡೆಗೆ ಪಾದಯಾತ್ರೆಗೆ ಪೊಲೀಸರು ಬ್ರೇಕ್ ಹಾಕಿದರು.

ಹೆದ್ದಾರಿಯ ಕೆಲವು ಕಡೆ ಪೊಲೀಸ್ ಕಾವಲು ಹಾಕಿ ಪಾದಯಾತ್ರೆಗೆ ಆಗಮಿಸುತ್ತಿದ್ದ ಜನರನ್ನ ತಡೆದು ಬಂಧಿಸಿದ್ದರಿಂದ ಪಾದಯಾತ್ರೆಯಲ್ಲಿ 12 ರಿಂದ 15 ಜನ ಮಾತ್ರ ಭಾಗವಹಿಸಿದ್ದರು. ಕಾರ್ಯಕರ್ತರಿಗಿಂತ ಪೊಲೀಸರೇ ಜಾಸ್ತಿ ಇದ್ದರು.

ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿ ಸೌಹಾರ್ದ ನಡಿಗೆ ಪ್ರಾರಂಭಿಸಿದ ಸಂಘಟನೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತ ಹೆಜ್ಜೆ ಹಾಕಿದರು.

ಬುದ್ಧ, ಬಸವ ಮತ್ತು ಅಂಬೇಡ್ಕರ್ ಭಾವಚಿತ್ರ ಹಿಡಿದು ಮೆರವಣಿಗೆ ಪ್ರಾರಂಭಿಸಿ ಪಾದಯಾತ್ರೆಗೆ ಮುಂದಾದ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ನಂತರ ಜಿಲ್ಲಾಡಳಿತ ಹಾಗೂ ಪೊಲೀಸ್ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದರು.

ನಂತರ ಸಾಮಾಜಿಕ ಕಾರ್ಯಕರ್ತ ಯಲ್ಲಪ್ಪ ಹೆಗಡೆ ಮಾತನಾಡಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡಿ ಕೋಮು ಸೌಹಾರ್ದತೆಯನ್ನು ಹದಗೆಡಿಸುತ್ತಿರುವ ದುಷ್ಕರ್ಮಿಗಳ ಮತ್ತು ಸಮಾಜಘಾತಕ ಶಕ್ತಿಗಳ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನೂ ಹಲವಾರು ಜನರು ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಸೌಹಾರ್ದತೆ ಕಾಪಾಡುವ ಕುರಿತು ಜಾಗೃತಿ ಮೂಡಿಸುತ್ತಿರುವ ಪಾದಯಾತ್ರೆಯನ್ನು ನಿಲ್ಲಿಸಿ ನಮ್ಮನ್ನು ಬಂಧನ ಮಾಡಿ ಕೋಮುವಾದಿ ಸಂಘಟನೆಗಳಿಗೆ ಸಹಕಾರ ನೀಡಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿದರು. ನಮ್ಮನ್ನು ಬಂಧನ ಮಾಡುವ ಮುನ್ನ ಬೇರೆ ಜಿಲ್ಲೆಗಳಿಂದ ಆಗಮಿಸಿ ನಮ್ಮ ಜಿಲ್ಲೆಯ ಗ್ರಾಮಗಳಲ್ಲಿ ಶಾಂತಿ ಭಂಗ ಮಾಡುವವರನ್ನು ಬಂಧಿಸಿ ಎಂದು ಆಗ್ರಹಿಸಿದರು.

ಬಸವರಾಜ ದ್ಯಾಮನ್ನವರ, ವಿಠಲ್ ಮಿರ್ಜಿ, ಮಲ್ಲು ಹಾದಿಮನಿ, ಡಿ ಡಿ ನಧಾಪ್, ಶಿವಾನಂದ ಲೆಂಕೆನ್ನವರ, ವಿರೇಶ ಕಾಟಾಪೂರ, ರಾಜು ಮೇಟಿ, ಮುತ್ತಪ್ಪ ಮದರಖಂಡಿ, ಸದಾಶಿವ ತಿಮ್ಮಾಪೂರ, ಮುತ್ತು ಬಿಲ್ಲಾರ ಸೇರಿದಂತೆ ಹಲವು ಸಂಘಟನೆ ಕಾರ್ಯಕರ್ತರು ಮುಖಂಡರು ಇದ್ದರು.

ಪಾದಯಾತ್ರೆ ಪ್ರಾರಂಭವಾಗುವ ಮುನ್ನವೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು: ಓರ್ವ ಡಿವೈಎಸ್‌ಪಿ, 4 ಜನ ಪಿಎಸ್‌ಐ, 60ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಗಲಭೆ ನಡೆಯಬಾರದೆಂಬ ಉದ್ಧೇಶದಿಂದ ಮುಂಜಾಗೃತ ಕ್ರಮವಾಗಿ ಪಾದಯಾತ್ರೆಯಲ್ಲಿ ಭಾಗಿಯಾದವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ ಎಂದು ಬಾದಾಮಿ ಪಿಎಸ್‌ಐ ನೇತ್ರಾವತಿ ಪಾಟೀಲ ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.