ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
Team Udayavani, Sep 19, 2022, 10:47 PM IST
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸೋಮವಾರ ಅಧಿವೇಶನ ಮುಗಿದ ಬಳಿಕ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ಅವರು ಗೌಡರ ಜತೆ ಸ್ವಲ್ಪ ಹೊತ್ತು ಮಾತನಾಡಿದರು.
ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಜಮೀರ್ ಅಹಮದ್, ಶಾಸಕ ಬೈರತಿ ಸುರೇಶ್ ಅವರು ಜತೆಯಲ್ಲಿದ್ದರು.
ಮಾಜಿ ಪ್ರಧಾನಿ ದೇವೇಗೌಡರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.
ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಿರಿಯರಾದ ಮಾಜಿ ಪ್ರಧಾನಿ @H_D_Devegowda ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ.
ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು.ಮಾಜಿ ಸಚಿವರಾದ @RV_Deshpande , @BZZameerAhmedK , ಮಾಜಿ ಶಾಸಕರಾದ ಅಶೋಕ ಪಟ್ಟಣ ಸೇರಿದಂತೆ ಹಲವರು ಈ ವೇಳೆ ನನ್ನೊಂದಿಗಿದ್ದರು. pic.twitter.com/S1MDLIYcUD
— Siddaramaiah (@siddaramaiah) September 19, 2022