ಪುತ್ತೂರು: ಹಲ್ಲೆ, ದರೋಡೆ: ನಾಲ್ವರ ಬಂಧನ


Team Udayavani, Sep 20, 2022, 12:53 AM IST

ಪುತ್ತೂರು: ಹಲ್ಲೆ, ದರೋಡೆ: ನಾಲ್ವರ ಬಂಧನ

ಪುತ್ತೂರು: ಸ್ನೇಹಿತನಿಗೆ ಫೋನ್‌ ಕರೆ ಮಾಡಿ ಬೆದರಿಕೆಯೊಡ್ಡಿರುವುದನ್ನು ವಿಚಾರಿಸಿದಾತನಿಗೆ ತಂಡವೊಂದು ಬಾರ್‌ನೊಳಗೆ ಹಲ್ಲೆ ನಡೆಸಿ, ದರೋಡೆ ಮಾಡಿರುವ ಘಟನೆ ಪುತ್ತೂರು ಮುಖ್ಯರಸ್ತೆಯಲ್ಲಿ ಸೆ. 17ರಂದು ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಸೆ. 19ರಂದು ಬಂಧಿಸಲಾಗಿದೆ.

ದರ್ಬೆಯಲ್ಲಿರುವ ಚೋಳಮಂಡಲ ಫೈನಾನ್ಸ್‌ನಲ್ಲಿ ಲೋನ್‌ ರಿಕವರಿ ಕರ್ತವ್ಯ ಮಾಡುತ್ತಿರುವ ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ಅವಿನಾಶ್‌ ಹಲ್ಲೆಗೊಳಗಾದವರು. ಅವರ ಕಿಸೆಯಲ್ಲಿದ್ದ ನಗದನ್ನು ಆರೋಪಿಗಳು ದೋಚಿದ್ದರು. ಘಟನೆಯಿಂದ ಅವಿನಾಶ್‌ ಅವರ ಕಣ್ಣಿಗೆ ತೀವ್ರ ಗಾಯವಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅವಿನಾಶ್‌ ಅವರ ಗೆಳೆಯ ಸಚಿನ್‌ ಅವರಿಗೆ ಪ್ರತಾಪ್‌ ಕರೆ ಮಾಡಿ ಬೆದರಿಕೆಯೊಡ್ಡಿದ್ದರು. ಈ ಕುರಿತು ಅವಿನಾಶ್‌ ಅವರು ಪ್ರತಾಪ್‌ ಅವರನ್ನು ವಿಚಾರಿಸಿದಾಗ ಪುತ್ತೂರು ಮಹಾಲಿಂಗೇಶ್ವರ ದೇಗುಲದ ಗದ್ದಗೆ ಬರುವಂತೆ ತಿಳಿಸಿದ್ದ. ಅದೇ ರೀತಿ ಅಲ್ಲಿ ಪ್ರತಾಪ್‌ ಮತ್ತು ಅಚ್ಚು ಯಾನೆ ಜಗದೀಶ್‌ ಅವರ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಸಂಜೆ ಅವಿನಾಶ್‌ ಅವರು ತನ್ನ ಸ್ನೇಹಿತ ಸಚಿನ್‌ ಜತೆಗೆ ಬಾರ್‌ಗೆ ಹೋಗಿದ್ದು, ಮೇಲಿನ ಅಂತಸ್ತಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದ ಪ್ರತಾಪ್‌, ಅಚ್ಚು ಯಾನೆ ಜಗದೀಶ್‌, ಶರತ್‌, ಅಭಿಜಿತ್‌ ಅವರು ಸಚಿನ್‌ ಮತ್ತು ಅವಿನಾಶ್‌ ಅವರಿಗೆ ಹಲ್ಲೆ ನಡೆಸಿದ್ದಾರೆ.

ಅವಿನಾಶ್‌ ಕಿಸೆಯಲ್ಲಿದ್ದ ಲೋನ್‌ ರಿಕವರಿ ಹಣ 3,720 ರೂ. ಮತ್ತು ಮೊಬೈಲ್‌ ಅನ್ನು ಹಲ್ಲೆ ನಡೆಸಿದ ಆರೋಪಿಗಳು ದೋಚಿಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಅವಿನಾಶ್‌ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಬನ್ನೂರು ನಿವಾಸಿ ಪ್ರತಾಪ್‌, ಅಚ್ಚು ಯಾನೆ ಜಗದೀಶ್‌, ಶರತ್‌ ಜೈನರಗುರಿ, ಅಭಿಜಿತ್‌ನನ್ನು ಸೆ. 19ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.