ಕುಷ್ಟಗಿ: ಬೇಡಿಕೆ ಸ್ಪಂದಿಸದ ಅಧಿಕಾರಿಗಳು; ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ
Team Udayavani, Sep 20, 2022, 12:02 PM IST
ಕುಷ್ಟಗಿ: ನಿಡಶೇಸಿ ವಿದ್ಯಾರ್ಥಿಗಳ ಬಸ್ ಬೇಡಿಕೆಗೆ ಸ್ಪಂದಿಸದ ಕುಷ್ಟಗಿ ಘಟಕದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ನಡೆ ಖಂಡಿಸಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ಕಳೆದ ಸೆ.15 ರಂದು ಕುಷ್ಟಗಿ ಘಟಕಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಘಟಕ ವ್ಯವಸ್ಥಾಪಕ ಜಡೇಶ್, 2-3 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ ಸೆ.20 ವರೆಗೂ ಬಸ್ಸು ಬೇಡಿಕೆಗೆ ಸ್ಪಂದಿಸದೇ ಇದ್ದಾಗ ವಿದ್ಯಾರ್ಥಿಗಳು ನಿಡಶೇಸಿಯಲ್ಲಿ ಬಸ್ ತಡೆದಿದ್ದರಲ್ಲದೇ ಬಸ್ಸಿಗೆ ಅಡ್ಡ ಕುಳಿತು ಅಧಿಕಾರಿಗಳ ವಿರುದ್ದ ಧಿಕ್ಕಾರ ಕೂಗಿದರು.
ಈ ಹಿನ್ನೆಲೆಯಲ್ಲಿ ಕುಷ್ಟಗಿ ಸೇರಿದಂತೆ ವಿವಿಧ ಗ್ರಾಮಗಳಿಂದ ತಳವಗೇರಾದ ವಿದ್ಯಾ ಸಂಸ್ಥೆಗೆ ತೆರಳುವ ವಿದ್ಯಾರ್ಥಿಗಳಿಗೆ ಎರಡು ಘಂಟೆ ತಡವಾಯಿತು. ಬಸ್ ತಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ದೌಡಾಯಿಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿರೋಧಿಸಿದರು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಆಗಮಿಸಿ, ಕ.ಕ.ರ.ಸಾ. ಸಂಸ್ಥೆಯ ಜಿಲ್ಲಾ ಅಧಿಕಾರಿ, ವಿಭಾಗೀಯ ಅಧಿಕಾರಿಗಳನ್ನು ಸಂಪರ್ಕಿಸಿ ವಾಸ್ತವ ಸ್ಥಿತಿ ವಿವರಿಸಿದರು. ಬಳಿಕ ಅಧಿಕಾರಿಗಳು ಹೆಚ್ಚುವರಿ ಬಸ್ ಓಡಿಸುವ ಭರವಸೆ ನೀಡಿದರು.
ಈ ಕುರಿತು ಗ್ರಾಮದ ಮಂಜುನಾಥ ಗುಳಗುಳಿ ಪ್ರತಿಕ್ರಿಯಿಸಿ, ಕಳೆದ ಸೆ.15 ಕ್ಕೆ ವಿದ್ಯಾರ್ಥಿಗಳ ದಿಡೀರ್ ಪ್ರತಿಭಟನೆಗೆ ಘಟಕ ವ್ಯವಸ್ಥಾಪಕ ನಾಲ್ಕು ದಿನಗಳ ಗಡವು ಕೇಳಿದ್ದರು. ಆದರೂ ಸ್ಪಂದಿಸದೇ ಇದ್ದಾಗ ಕುಷ್ಟಗಿಯಿಂದ ನಿಡಶೇಸಿ, ತಳವಗೇರಾದ ಮೂಲಕ ಹನುಮಸಾಗರಕ್ಕೆ ಹೋಗುವ ಎರಡು ಬಸ್ಸು ತಡೆದಿದ್ದೇವೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!