ಚುನಾವಣಾ ಕೇಂದ್ರಿತ ಲೆಕ್ಕಾಚಾರಗಳಿಂದ ಅಭಿವೃದ್ಧಿಗೆ ಹಿನ್ನಡೆ: ಪ್ರಧಾನಿ ಮೋದಿ


Team Udayavani, Sep 21, 2022, 6:45 AM IST

ಚುನಾವಣಾ ಕೇಂದ್ರಿತ ಲೆಕ್ಕಾಚಾರಗಳಿಂದ ಅಭಿವೃದ್ಧಿಗೆ ಹಿನ್ನಡೆ: ಪ್ರಧಾನಿ ಮೋದಿ

ಗಾಂಧಿನಗರ: ಕೇವಲ ಚುನಾವಣೆ ಗೆಲ್ಲುವುದನ್ನು ಆದ್ಯತೆಯಾಗಿಟ್ಟುಕೊಳ್ಳಬೇಡಿ, ಚುನಾವಣಾ ಕೇಂದ್ರಿತ ಲೆಕ್ಕಾಚಾರಗಳಿಂದ ಅಭಿವೃದ್ಧಿ ಕುಂಠಿತವಾಗುತ್ತದೆ…ಇದು ಪ್ರಧಾನಿ ನರೇಂದ್ರ ಮೋದಿ ಆಡಿರುವ ಮಾತುಗಳು.

ಬಿಜೆಪಿ ವತಿಯಿಂದ ಗುಜರಾತ್‌ನ ಗಾಂಧಿನಗರದಲ್ಲಿ ಸೆ. 20-21ರಂದು ಆಯೋಜಿಸಲಾದ ಬಿಜೆಪಿ ಆಡಳಿತದ ಮಹಾನಗರ ಪಾಲಿಕೆಯ ಮೇಯರ್‌, ಉಪ ಮೇಯರ್‌ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಇದರಲ್ಲಿ ಒಟ್ಟು 18 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 118 ಮೇಯರ್‌ಗಳು, ಉಪಮೇಯರ್‌ಗಳು ಪಾಲ್ಗೊಂಡಿದ್ದರು.

ಕೆಲವೊಂದು ನಿರ್ಧಾರದಿಂದ ನಗರಗಳನ್ನು ಚೆನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಆದರೂ ಚುನಾವಣೆಯಲ್ಲಿ ಸೋಲಬಹುದೆನ್ನುವ ಭೀತಿಯಿಂದ ಆ ನಿರ್ಧಾರ ಕೈಗೊಳ್ಳದೇ ಹಿಂದೆ ಸರಿಯಲಾಗುತ್ತದೆ. ಇಂತಹ ಲೆಕ್ಕಾಚಾರಗಳನ್ನು ನಾವು ಬಿಡಬೇಕು. ಕೇವಲ ಪತ್ರಿಕೆಗಳಲ್ಲಿ ಸುದ್ದಿಯಾದ ತಕ್ಷಣ ಯಾವುದೇ ಸಾಧನೆಯಾಗುವುದಿಲ್ಲ, ನೇರವಾಗಿ ಜನರೊಂದಿಗೆ ಕುಳಿತು ನಿಮಗೆ ಯೋಜನೆಗಳ ಫ‌ಲ ಸಿಕ್ಕಿದೆಯಾ ಎಂದು ಪರಿಶೀಲಿಸಬೇಕು ಎಂದು ಮೋದಿ ಹೇಳಿದರು.

ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ ನೀಡಿ ಪ್ರಧಾನಿ ಸ್ವನಿಧಿ ಯೋಜನೆಯಡಿ ಸಾಲ ಪಡೆಯಲು ನೆರವಾಗಬೇಕು. ಉಪಗ್ರಹ ಆಧಾರಿತ ನಗರಗಳು, 2, 3ನೇ ಹಂತದ ನಗರಗಳನ್ನು ಬೆಳೆಸಿ, ಬೃಹತ್‌ ನಗರಗಳ ಮೇಲಿನ ಒತ್ತಡ ಕಡಿಮೆ ಮಾಡಲು ಯತ್ನಿಸಿ ಎಂದೂ ಮೇಯರ್‌ಗಳಿಗೆ ಕಿವಿಮಾತು ಹೇಳಿದರು. ಪ್ರಸ್ತುತ ಕೇಂದ್ರ ಸರ್ಕಾರದ ನೆರವಿನಿಂದ 100 ಸ್ಮಾರ್ಟ್‌ ಸಿಟಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ 75,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ನಗರ ಭಾಗಗಳಲ್ಲಿ ಬಡವರಿಗಾಗಿ ಕೇಂದ್ರದಿಂದ 1.25 ಕೋಟಿ ಮನೆಗಳನ್ನು ನೀಡಲಾಗಿದೆ. ಗೃಹ ಯೋಜನೆಗಳಿಗೆ 2014ಕ್ಕೂ ಮೊದಲು 20 ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಈಗದು 2 ಲಕ್ಷ ಕೋಟಿ ರೂ.ಗೇರಿದೆ ಎಂದು ಮೋದಿ ಹೇಳಿದ್ದಾರೆ.

 

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.