ಶಿಕ್ಷಕರ ಅಕ್ರಮ ನೇಮಕಾತಿ: ಮತ್ತೊಬ್ಬ ಶಿಕ್ಷಕನ ಬಂಧನ
Team Udayavani, Sep 21, 2022, 8:45 PM IST
ವಿಜಯಪುರ: ಶಿಕ್ಷಕರ ಅಕ್ರಮ ನೇಮಕ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಸಿಒಡಿ ಪೊಲೀಸರು ಅಕ್ರಮ ನೇಮಕಾತಿಯಲ್ಲಿ ಕೈಚಳಕ ತೋರಿದ ವಿಜಯಪುರ ಜಿಲ್ಲೆಯ ಶಿಕ್ಷಕರನ್ನು ಒಬ್ಬೊಬ್ಬರಾಗಿ ಬಲೆಗೆ ಕೆಡವುತ್ತಿದ್ದಾರೆ.
ಇದೀಗ ಮತ್ತೂಬ್ಬ ಶಿಕ್ಷಕ ಅಶೋಕ ಚವ್ಹಾಣ ಎಂಬಾತನನ್ನು ಬಂಧಿ ಸಿ ವಿಚಾರಣೆ ನಡೆಸಿದ್ದಾರೆ. ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ನಂಟು ಗಾಢವಾಗಿರುವುದು ಶಿಕ್ಷಕರ ಸರಣಿ ಬಂಧನ ಇಂಬು ನೀಡುತ್ತಿದೆ.
ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ ಚವ್ಹಾಣ ಅಕ್ರಮ ನೇಮಕ ಆಗಿರುವ ಸೂಕ್ತ ದಾಖಲೆ, ಮಾಹಿತಿ ಸಂಗ್ರಹಿಸಿರುವ ಸಿಒಡಿ ತನಿಖಾ ತಂಡ, ಅಕ್ರಮ ನೇಮಕಾತಿ ಹೊಂದಿದ್ದನ್ನು ಖಚಿತಪಡಿಸಿಕೊಂಡಿದೆ.
ವಿಜಯಪುರ ಜಿಲ್ಲೆಗೆ ವರ್ಗವಾಗಿ ಬರುವ ಮುನ್ನ ಶಿಕ್ಷಕ ಅಶೋಕ ಚವ್ಹಾಣ ಚಿತ್ರದುರ್ಗ ಜಿಲ್ಲೆ ಜಗಳೂರಿನಲ್ಲಿ ಮೊದಲು ಸೇವೆ ಸಲ್ಲಿಸಿದ್ದ. ಶಿಕ್ಷಕರ ಅಕ್ರಮ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಮಹೇಶ ಸೂಸಲಾದಿ, ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿದ್ರಾಮಪ್ಪ ಬಿರಾದಾರನನ್ನು ಬಂಧಿಸಲಾಗಿದ್ದು, ಬಂಧಿತ ಶಿಕ್ಷಕರ ಸಂಖ್ಯೆ ಮೂರಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು