ಕ್ರೀಡಾ ಗ್ರಾಮ: ಜಾಗ ಹಸ್ತಾಂತರ ಬಳಿಕ ಮುಂದಿನ ಕ್ರಮ: ಸಚಿವ ನಾರಾಯಣ ಗೌಡ
Team Udayavani, Sep 21, 2022, 10:15 PM IST
ವಿಧಾನಸಭೆ: ಬೈಂದೂರು ತಾಲೂಕಿನಲ್ಲಿ ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಕಾಯ್ದಿರಿಸಿರುವ 25 ಎಕರೆ ಜಮೀನು ನಮ್ಮ ಇಲಾಖೆಗೆ ಹಸ್ತಾಂತರಗೊಂಡ ತಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರೀಡಾ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಸರ್ವೆ ನಂಬರ್ 219ರಲ್ಲಿನ 40 ಎಕರೆ ಜಮೀನಿನ ಪೈಕಿ 25 ಎಕರೆ ಜಾಗವನ್ನು ಕಾಯ್ದಿರಿಸುವ ಬಗ್ಗೆ ಕ್ರೀಡಾ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕರು 2021ರ ಆ.3ರಂದು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈ ಜಾಗ ಡೀಮ್ಸ್ ಫಾರೆಸ್ಟ್ ಪಟ್ಟಿಯಲ್ಲಿ ಇರುವುದರಿಂದ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ನಕ್ಷೆ ತಯಾರಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಈಗ ಜಾಗ ಕ್ರೀಡಾ ಇಲಾಖೆಗೆ ಹಸ್ತಾಂತರವಾಗಬೇಕಕಿದೆ. ಜಮೀನು ನಮ್ಮ ಇಲಾಖೆಗೆ ಹಸ್ತಾಂತರಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇದೇ ವೇಳೆ ಬೈಂದೂರು ತಾಲೂಕು ಕ್ರೀಡಾಂಗಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿಪಡಿಸುವ ಯೋಜನೆಗೆ ಸಂಬಂಧಿಸಿದಂತೆ ಸಲಹಾ ಸೇವೆ ಪಡೆಯಲು ವಹಿವಾಟು ಸಲಹೆಗಾರರಾಗಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಸಂಸ್ಥೆಯನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಸ್ಥಳ ಅಧ್ಯಯನ ಕೈಗೊಂಡು ಕಾರ್ಯಸಾಧ್ಯತೆ ವರದಿ ತಯಾರಿಕೆ ಹಂತದಲ್ಲಿದೆ.
ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿರುವುದರಿಂದ ಪ್ರತ್ಯೇಕವಾಗಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಸಚಿವರು ಮಾಹಿತಿ ನೀಡಿದರು.
ಆದರೆ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾಂಗಣ ಅಭಿವೃದ್ಧಿಯ ಸರ್ಕಾರದ ಯೋಜನೆಗೆ ಶಾಸಕ ಸುಕುಮಾರ್ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ