ಅಂಚೆ ಮತದಾನದ ವ್ಯವಸ್ಥೆ ಬದಲಾವಣೆಗೆ ಶಿಫಾರಸು
Team Udayavani, Sep 22, 2022, 6:30 AM IST
ನವದೆಹಲಿ: ದುರುಪಯೋಗ ತಡೆಯುವ ನಿಟ್ಟಿನಲ್ಲಿ ಚುನಾವಣೆ ಕರ್ತವ್ಯದಲ್ಲಿರುವವರಿಗಾಗಿ ಪ್ರಸ್ತುತ ಇರುವ ಅಂಚೆ ಮತದಾನದ ವ್ಯವಸ್ಥೆಯಲ್ಲಿ ಬದಲಾವಣೆ ತರುವಂತೆ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿದೆ.
ಚುನಾವಣೆ ಕರ್ತವ್ಯದಲ್ಲಿರುವವರು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿಗದಿಪಡಿಸಿದ ದಿನದಂದು ಸ್ವಯಂ ಮತದಾನ ಮಾಡಬೇಕು. ದೀರ್ಘ ಅವಧಿಯವರೆಗೆ ಬ್ಯಾಲೆಟ್ ಪೇಪರ್(ಮತಪತ್ರ)ಗಳನ್ನು ಅವರ ಬಳಿ ಇಟ್ಟುಕೊಳ್ಳಬಾರದು ಎಂಬ ನಿಯಮ ಜಾರಿಗೆ ತರುವಂತೆ ಆಯೋಗ ಕೋರಿದೆ.
ಚುನಾವಣಾ ಕರ್ತವ್ಯದಲ್ಲಿರುವವರು ತಮ್ಮ ಬಳಿ ದೀರ್ಘಕಾಲದವರೆಗೆ ಮತಪತ್ರಗಳನ್ನು ಇಟ್ಟುಕೊಳ್ಳುವುದರಿಂದ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳ ಅನಗತ್ಯ ಪ್ರಭಾವ, ಬೆದರಿಕೆ, ಲಂಚ ಮತ್ತು ಇತರೆ ಅಕ್ರಮಕ್ಕೆ ಒಳಗಾಗುವ ಸಂಭವವಿರುತ್ತದೆ. ಈ ರೀತಿಯ ಸಂಭಾವ್ಯ ದುರುಪಯೋಗ ತಪ್ಪಿಸಲು ನೂತನ ನಿಯಮದ ಜಾರಿಗೆ ಪ್ರಸ್ತಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆ.16ರಂದು ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ “ವೋಟರ್ ಫೆಸಿಲಿಟೇಶನ್ ಸೆಂಟರ್’ನಲ್ಲಿ ಮಾತ್ರ ಚುನಾವಣಾ ಕರ್ತವ್ಯದಲ್ಲಿರುವವರು ಮತದಾನ ಮಾಡುವಂತೆ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’