ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿ; ಬೀದಿದೀಪ ಅಳವಡಿಕೆಗೆ ಕಾಂಕ್ರೀಟ್‌ ಬೆಡ್‌


Team Udayavani, Sep 22, 2022, 11:33 AM IST

10

ಬಂಟ್ವಾಳ: ಬಿ.ಸಿ.ರೋಡ್‌-ಜಕ್ರಿಬೆಟ್ಟು ಚತುಷ್ಪಥ ಕಾಂಕ್ರೀಟ್‌ ಹೆದ್ದಾರಿಯ ಬಹುತೇಕ ಭಾಗಕ್ಕೆ ಬೀದಿ ದೀಪಗಳನ್ನು ಅಳವಡಿಸಿ ಉರಿಯುತ್ತಿದೆ. ಬಾಕಿ ಉಳಿದ ಭಾಗಕ್ಕೆ ಬೀದಿ ದೀಪ ಅಳವಡಿಸುವಂತೆ ಒತ್ತಾಯಗಳು ಕೇಳಿ ಬಂದಿದ್ದವು. ಇದೀಗ ಉಳಿದ ಕಡೆಗಳಲ್ಲೂ ಬೀದಿ ದೀಪ ಅಳವಡಿಕೆಗೆ ಕಾಂಕ್ರೀಟ್‌ ಬೆಡ್‌ ಆಳವಡಿಸುವ ಕಾಮಗಾರಿ ಪೂರ್ಣಗೊಂಡಿದೆ.

ಹೆದ್ದಾರಿಯು ಅಧಿಕೃತವಾಗಿ ಉದ್ಘಾಟನೆಗೊಂಡು 5 ತಿಂಗಳು ಕಳೆದರೂ ಬೀದಿ ದೀಪಗಳು ಉರಿಯದೇ ಇರುವ ಈ ಕುರಿತು “ಉದಯವಾಣಿ ಸುದಿನ’ದಲ್ಲಿ ಜು. 30ರಂದು “ಬಿ.ಸಿ.ರೋಡ್‌- ಜಕ್ರಿಬೆಟ್ಟು ಚತುಷ್ಪಥ ಹೆದ್ದಾರಿ-ಉದ್ಘಾಟನೆಯಾಗಿ 5 ತಿಂಗಳು ಕಳೆದರೂ ಉರಿಯದ ಬೀದಿ ದೀಪ’ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಪ್ರಕಟಿಸಿ ಸಂಬಂಧಪಟ್ಟ ಇಲಾಖೆಯನ್ನು ಎಚ್ಚರಿಸುವ ಪ್ರಯತ್ನವನ್ನೂ ಮಾಡಲಾಗಿತ್ತು. ಅದಕ್ಕೆ ಸ್ಪಂದನೆ ಎಂಬಂತೆ ಬೀದಿದೀಪಗಳು ಉರಿಯಲಾರಂಭಿಸಿದ್ದವು.

ಅದೇ ವರದಿಯಲ್ಲಿ ಉಳಿದ ಭಾಗಕ್ಕೂ ಬೀದಿ ದೀಪಗಳನ್ನು ಅಳವಡಿಸುವಂತೆ ಒತ್ತಾಯವನ್ನೂ ಮಾಡಲಾಗಿತ್ತು. ಇದೀಗ ಕಾಂಕ್ರೀಟ್‌ ಬೆಡ್‌ ಅಳವಡಿಕೆ ಪೂರ್ಣಗೊಂಡಿದ್ದು, ಮುಂದೆ ಬೀದಿದೀಪವೂ ಒಳಗೊಂಡಂತೆ ಅದರ ಕಂಬ ಅಳವಡಿಕೆಯ ಕಾಮಗಾರಿ ನಡೆಯಬೇಕಿದೆ. ಸುಮಾರು 3.85 ಕಿ.ಮೀ.ಉದ್ದದ ಹೆದ್ದಾರಿ ಮಧ್ಯೆ ಈ ಹಿಂದೆಯೇ ಸುಮಾರು 80ರಷ್ಟು ಬೀದಿದೀಪಗಳನ್ನು ಅಳವಡಿಸಿ ಅದೆಲ್ಲವೂ ಈಗಾಗಲೇ ಉರಿಯುತ್ತಿದೆ. ಆದರೆ ಬಂಟ್ವಾಳ ಬೈಪಾಸ್‌ ಜಂಕ್ಷನ್‌, ಭಂಡಾರಿಬೆಟ್ಟು, ಕಾಮಾಜೆ ಕ್ರಾಸ್‌, ಜಕ್ರಿಬೆಟ್ಟು ಬಳಿ ಬೀದಿದೀಪಗಳ ಅಳವಡಿಕೆಗೆ ಬಾಕಿ ಇತ್ತು.

ಹೆದ್ದಾರಿಯ ಕಾಮಗಾರಿ ನಿರ್ವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆಯೇ ಬೀದಿದೀಪಗಳನ್ನು ಅಳವಡಿಸಿದ್ದರೂ, ಅದರ ನಿರ್ವಹಣೆಗೆ ಇಲಾಖೆಯಲ್ಲಿ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಉದ್ಘಾಟನೆಗೊಂಡು 5 ತಿಂಗಳು ಕಳೆದರೂ ಉರಿದಿರಲಿಲ್ಲ. ಇದೀಗ ಅದರ ನಿರ್ವಹಣೆಯ ಜವಾಬ್ದಾರಿಯನ್ನು ಬಂಟ್ವಾಳ ಪುರಸಭೆ ವಹಿಸಿಕೊಂಡಿದ್ದು, ಬೀದಿದೀಪ ಉರಿಯುತ್ತಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.