ಸವಿತಾ ಪೀಠದಿಂದ ದೇಸಿ ಹಸು ಹಾಲೋತ್ಪನ್ನ ಕೇಂದ್ರ


Team Udayavani, Sep 22, 2022, 2:27 PM IST

5-cow

ವಾಡಿ: ಅವಸಾನದ ಅಂಚಿನೆಡೆಗೆ ಸಾಗುತ್ತಿರುವ ದೇಸಿ ತಳಿ ಹಸುಗಳ ಅಭಿವೃದ್ಧಿ ದೃಷ್ಟಿಕೋನದಿಂದ ಮಹರ್ಷಿ ಸವಿತಾ ಪೀಠದಿಂದ ಜಿಲ್ಲೆಯಲ್ಲಿ ಹಾಲು ಖರೀದಿ ಕೇಂದ್ರಗಳು ಸೇರಿದಂತೆ ಕೊಂಚೂರಿನಲ್ಲಿ ಹಾಲಿನ ಉತ್ಪನ್ನ ಘಟಕ ಸ್ಥಾಪಿಸಲಾಗುತ್ತಿದೆ ಎಂದು ಕೊಂಚೂರು ಮಹರ್ಷಿ ಸವಿತಾ ಪೀಠದ ಪೀಠಾಧ್ಯಕ್ಷ ಶ್ರೀ ಸವಿತಾನಂದ ಸ್ವಾಮೀಜಿ ಪ್ರಕಟಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಸವಿತಾ ಪೀಠದಿಂದ ಪಕ್ಕಾ ದೇಸಿ ಹಸುಗಳ ಹಾಲು, ಮೊಸರು, ತುಪ್ಪ ತಯಾರಿಸಿ ಪ್ಯಾಕೇಟ್‌ ರೂಪದಲ್ಲಿ ಗ್ರಾಹಕರಿಗೆ ತಲುಪಿಸುವ ಹಾಗೂ ರೈತರಿಗೆ ಉದ್ಯೋಗ ಒದಗಿಸಿ ಸ್ವಾವಲಂಬಿಗಳನ್ನಾಗಿಸುವ ತಮ್ಮ ಕನಸಿನ ಯೋಜನೆಯನ್ನು ತೆರೆದಿಟ್ಟರು. ಕಲಬುರಗಿ ಡಿಸಿಸಿ ಬ್ಯಾಂಕ್‌ ಕಾಮಧೇನು ಎನ್ನುವ ಯೋಜನೆ ಜಾರಿಗೆ ತಂದಿದೆ. ಆಸಕ್ತ ಪ್ರತಿಯೊಬ್ಬ ರೈತನಿಗೆ ಎರಡು ಹಸುಗಳನ್ನು ಖರೀದಿಸಲು 2ಲಕ್ಷ ರೂ. ಸಾಲ ಸೌಲಭ್ಯ ನೀಡುತ್ತಿದೆ. ಇದನ್ನು ಬಳಸಿಕೊಂಡು ಸವಿತಾ ಪೀಠ ರಾಜಸ್ಥಾನದಿಂದ ರಾಟಿ ಹಸು ತಳಿಗಳನ್ನು ತಂದು ರೈತರಿಗೆ ನೀಡಲು ಮುಂದಾಗಿದೆ. ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಾಜಕುಮಾರ ಪಾಟೀಲ ಹಾಗೂ ಅಧಿಕಾರಿಗಳು ಸವಿತಾ ಪೀಠಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದರು.

ಆರಂಭದಲ್ಲಿ ಈ ಯೋಜನೆಯನ್ನು ಚಿತ್ತಾಪುರ ತಾಲೂಕಿನಿಂದ ಶುರು ಮಾಡಲಾಗುತ್ತಿದೆ. ಈಗಾಗಲೇ 200 ರೈತರಿಂದ ಅರ್ಜಿಗಳು ಬಂದಿವೆ. ಸದ್ಯ ಹಳಕರ್ಟಿ, ಕಮರವಾಡಿ, ಕರದಾಳ ಗ್ರಾಪಂ ವ್ಯಾಪ್ತಿಯ ರೈತರಿಗೆ ಒಂದು ವಾರದೊಳಗಾಗಿ ಹಸುಗಳನ್ನು ವಿತರಿಸಲಾಗುತ್ತಿದೆ. ಪ್ರತಿ ಐವತ್ತು ರೈತರಿರುವ ಹಳ್ಳಿಗಳಲ್ಲಿ ಹಾಲು ಸಂಗ್ರಹ ಕೇಂದ್ರ ತೆರೆಯಲು ಸವಿತಾ ಪೀಠ ಈಗಾಗಲೇ ಯೋಜನೆ ರೂಪಿಸಿದೆ. ತಿಂಗಳಲ್ಲಿ ಕೇಂದ್ರಗಳು ಹಾಲು ಖರೀದಿಗೆ ಸಿದ್ಧವಿರಲಿವೆ. ಎಮ್ಮೆ ಮತ್ತು ವಿದೇಶಿ ಜರ್ಸಿ ಹಸುಗಳನ್ನು ಹೊರತುಪಡಿಸಿ ದೇಸಿ ಹಸುಗಳನ್ನು ಸಾಕುವ ರೈತರಿಂದ ಮಾತ್ರ ಲೀಟರ್‌ ಹಾಲಿಗೆ 50ರೂ., ಕೆಜಿ ಸೆಗಣಿಗೆ 2ರೂ., ಲೀಟರ್‌ ಗೋಮೂತ್ರಕ್ಕೆ 10ರೂ. ದರ ನೀಡಿ ಖರೀದಿಸುತ್ತೇವೆ. ಹಾಲಿನಿಂದ ವಿವಿಧ ಉತ್ಪನ್ನಗಳನ್ನು ತಯಾರಿಸಿದರೆ, ಗೋಮಯ ಮತ್ತು ಗೋಮೂತ್ರದಿಂದ ಪಂಚಗವ್ಯ ಗಥ ತಯಾರಿಸಿ ಕೃಷಿ ಬಳಕೆಗಾಗಿ ಮರಳಿ ರೈತರಿಗೆ ನೀಡಲಾಗುತ್ತದೆ ಎಂದು ವಿವರಿಸಿದರು.

ಪ್ರತಿಯೊಬ್ಬ ರೈತನ ಮನೆ ಎದುರು ದೇಸಿ ತಳಿ ಗೋವುಗಳು ಕಾಣಬೇಕು. ರಾಜಸ್ಥಾನದಲ್ಲಿ ಕಂಡು ಬರುವ ರಾಟಿ ತಳಿ ಹಸುಗಳು ದಿನಕ್ಕೆ 14ರಿಂದ 20 ಲೀಟರ್‌ ಹಾಲು ಕೊಡುತ್ತವೆ. ಅಲ್ಲದೇ ಕಲಬುರಗಿಯ ಬಿಸಿಲ ತಾಪದಲ್ಲೂ ಆರೋಗ್ಯವಾಗಿ ಇರುತ್ತವೆ. ಹೀಗಾಗಿ ರಾಟಿ ತಳಿ ಹಸುವನ್ನು ರೈತರಿಗೆ ನೀಡಲು ಆಯ್ಕೆ ಮಾಡಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಕೃಷಿ ಚೇತರಿಕೆ, ಆರೋಗ್ಯ ದೃಷ್ಟಿಯಿಂದ ಹಸುವಿನ ಗೋಮೂತ್ರ, ಗೋವಿನ ಸೆಗಣಿಗೆ ಭಾರಿ ಬೇಡಿಕೆ ಬರುವಂತೆ ಸವಿತಾ ಪೀಠ ಮಾಡಲಿದೆ. ಶ್ರೀ ಸವಿತಾನಂದ ಸ್ವಾಮೀಜಿ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.