ಆನೆಗಳ ಭ್ರೂಣ ಹತ್ಯೆ ಪ್ರಸ್ತಾಪ ಸರಕಾರದ ಮುಂದೆ ಇಲ್ಲ: ಸಚಿವ ಹೆಬ್ಬಾರ್
ಪರಿಹಾರ ಧನವನ್ನು ದುಪ್ಪಟ್ಟುಗೊಳಿಸಲಾಗುವುದು...
Team Udayavani, Sep 22, 2022, 3:38 PM IST
ಬೆಂಗಳೂರು: ಆನೆಗಳ ಭ್ರೂಣ ಹತ್ಯೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಆದರೆ ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರ ಧನವನ್ನು ದುಪ್ಪಟ್ಟುಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ವಿಧಾನಸಭೆಗೆ ತಿಳಿಸಿದ್ದಾರೆ.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಸಕರ ಬೇಡಿಕೆ ಪ್ರಕಾರ ಆನೆ ಭ್ರೂಣ ಹತ್ಯೆ ಮಾಡುವ ಪ್ರಸ್ತಾಪ ಇಲ್ಲ. ಆದರೆ ಆನೆಗಳ ಕೊರಳಿಗೆ ರೇಡಿಯೋ ಕಾಲರ್ ಹಾಕಲಾಗುವುದು. ಆ ಮೂಲಕ ಅವುಗಳ ಚಲನ ವಲನ ಪರಿಶೀಲಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ದ:ವಿಧಾನಸಭೆಯಲ್ಲಿ ಡಾ.ಸುಧಾಕರ್
ಮೂಡಿಗೆರೆಯಲ್ಲಿ ಭಾರಿ ತೊಂದರೆ ನೀಡುತ್ತಿರುವ ಮೂಡಿಗೆರೆ ಭೈರಾ ಎಂಬ ಕಾಡಾನೆಯನ್ನು ಸೆರೆಹಿಡಿಯಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು. 2000ನೇ ಇಸ್ವಿಯಿಂದ ಇದುವರೆಗೆ 74 ಆನೆಗಳನ್ನು ಹಿಡಿಯಲಾಗಿದೆ. ಆನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ 7.5 ಲಕ್ಷ ಪರಿಹಾರ ಧನವನ್ನು 15 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ರೈಲ್ವೆ ಹಳಿ ಹಾಕುವುದಕ್ಕೆ 100 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ