ರಕ್ಷಿತಾ ಅಂತಿಮ ದರ್ಶನ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬಸವನಹಳ್ಳಿ ಸರಕಾರಿ ಪ.ಪೂ.ಕಾಲೇಜು
Team Udayavani, Sep 22, 2022, 7:41 PM IST
ಚಿಕ್ಕಮಗಳೂರು: ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಅವರ ಮೃತದೇಹವನ್ನು ಅಂತಿಮ ದರ್ಶನಕ್ಕೆ ನಗರದ ಬಸವನಹಳ್ಳಿ ಕಾಲೇಜಿನಲ್ಲಿ ಇಡಲಾಗಿತ್ತು. ಈ ವೇಳೆ ಕಾಲೇಜು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು.
ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ : ಮೆದುಳು ನಿಷ್ಕ್ರಿಯಗೊಂಡ ಯುವತಿಯ ಹೃದಯ ಬೆಂಗಳೂರಿಗೆ ರವಾನೆ
ವಿದ್ಯಾರ್ಥಿನಿ ರಕ್ಷಿತಾಳ ಅಂತಿಮ ದರ್ಶನದ ವೇಳೆ ಸಾವಿರಾರು ವಿದ್ಯಾರ್ಥಿನಿಯರು, ಶಿಕ್ಷಕರು, ಸಾರ್ವಜನಿಕರು ಕಣ್ಣೀರು ಹಾಕಿದರು.
ಪುನೀತ್ ರಾಜ್ ಕುಮಾರ್ ಹಾಡು ಹೇಳಿ ಕಣ್ಣಿರಿಟ್ಟ ವಿದ್ಯಾರ್ಥಿಗಳು..
ರಕ್ಷಿತಾ ಅಂತಿಮ ದರ್ಶನದ ವೇಳೆ ವಿದ್ಯಾರ್ಥಿಗಳು ಪುನೀತ್ ರಾಜ್ ಕುಮಾರ್ ಹಾಡು ಹೇಳಿ, ರಕ್ಷಿತಾ ಅಣ್ಣ ಅಭಿನಂಧನೆಗೆ ಹಾಡಿಗೆ ವಿಧ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ.
ಕಾಲೇಜಿನಲ್ಲಿ ಅಂತಿಮ ದರ್ಶನದ ಬಳಿಕ ಚಿಕ್ಕಮಗಳೂರು ನಗರದಿಂದ ಸ್ವಗ್ರಾಮಕ್ಕೆ ರಕ್ಷಿತಾ ಮೃತದೇಹ ತರಲಾಗಿದೆ.