ಗಂಗಾವತಿ: ಐತಿಹಾಸಿಕ ಸ್ಮಾರಕ ಸ್ಥಳದಲ್ಲಿ ಸ್ವಚ್ಛತೆಯ ಜಾಗೃತಿಗೆ ಚಾಲನೆ
Team Udayavani, Sep 23, 2022, 2:41 PM IST
ಗಂಗಾವತಿ: ಐತಿಹಾಸಿಕ ಹಿನ್ನೆಲೆಯುಳ್ಳ ಸ್ಮಾರಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಜಿ. ಪಂ. ಸಿಇಓ ಬಿ.ಫೌಜಿಯಾ ತರನ್ನುಮ್ ಹೇಳಿದರು.
ತಾಲೂಕಿನ ಆನೆಗುಂದಿ ಗ್ರಾಮದ ತಳವಾರ ಘಟ್ಟದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಆಂದೋಲನ ಹಾಗೂ ಸ್ವಚ್ಛತಾ ಶುಕ್ರವಾರ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಚ್ಛತಾ ಹೀ ಸೇವಾ ಆಂದೋಲನದಡಿ ಆನೆಗುಂದಿಯ ಐತಿಹಾಸಿಕ ತಳವಾರಘಟ್ಟ ಸ್ವಚ್ಛತೆ ಶ್ರಮದಾನ ಹಮ್ಮಿಕೊಂಡು ಸ್ವಚ್ಛ ಮಾಡುವುದರಿಂದ ನಾವು ಇತಿಹಾಸ ಪ್ರಸಿದ್ಧ ಸ್ಮಾರಕಗಳನ್ನು ಉಳಿಸಿದಂತೆ, ಪ್ರತಿನಿತ್ಯ ಸಾಕಷ್ಟು ದೇಶ ವಿದೇಶಗಳಿಂದ ಪ್ರವಾಸಿಗರು ಬಂದು ಹೋಗುತ್ತಾರೆ. ಅಂತಹ ಸ್ಥಳವನ್ನು ಸ್ವಚ್ಛತೆಯಾಗಿಡುವುದರಿಂದ ಅಲ್ಲಿನ ಸ್ಥಳವು ಇನ್ನಷ್ಟು ದಿನಗಳ ಕಾಲ ನೋಡುಗರಿಗೆ ತೋರಿಸಲು ಒಂದು ಅದ್ಭುತ ಅವಕಾಶಗಳನ್ನು ನೀಡಿದಂತೆಯಾಗುತ್ತದೆ. ಅದ್ದರಿಂದ ಸ್ವಚ್ಛತೆಯ ಬಗ್ಗೆ ಗ್ರಾಮ ಪಂಚಾಯತಿಯವರು ಗ್ರಾಮದಲ್ಲಿ ಅರಿವು ಮೂಡಿಸಬೇಕು. ಸರ್ಕಾರದ ಆದೇಶದಂತೆ ಸ್ವಚ್ಛಯೇ ಸೇವಾ ಮಹಾ ಅಭಿಯಾನ ಯಶಸ್ವಿಯಾಗಲು ಎಲ್ಲಾ ಸಹಕರಿಸಬೇಕು ಎಂದರು.
ಜಿ. ಪಂ. ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಟಿ. ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಲ್ಲಿ ಈ ಗ್ರಾಮದ ಸಾರ್ವಜನಿಕರ ಸಹಕಾರ ತುಂಬಾ ಮುಖ್ಯ, ಗ್ರಾಮ ಪಂಚಾಯತಿಯಿಂದ ವಿತರಿಸಿದ ಕಸ ಸಂಗ್ರಹಣ ಬುಟ್ಟಿಗಳಲ್ಲಿ ಒಣ ಕಸ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ಹಾಕಲು ನೀವು ಮೊದಲಿನಿಂದಲೆ ಪ್ರಾರಂಭಿಸಿ ಹಾಗೂ ಗ್ರಾಮವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಮಾದರಿಯಾಗಲು ನೀವೆಲ್ಲರೂ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದರು.
ಇ.ಓ. ಮಹಾಂತಗೌಡ ಪಾಟೀಲ್ ಮಾತನಾಡಿ, ಜಿ.ಪಂ. ವತಿಯಿಂದ ಅ.2 ರವರೆಗೆ ಸ್ವಚ್ಛತಾ ಹೀ ಸೇವಾ ಆಂದಲೋನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿರುವ ಗ್ರಾಮಗಳಲ್ಲಿ ಸ್ವಚ್ಛತೆಯ ಕಾಪಾಡುವಲ್ಲಿ ಗ್ರಾಮಸ್ಥರ ಸಹಕಾರದಿಂದ ಮಾತ್ರ ಸಾಧ್ಯ ಎಂದರು.
ಕಾಮಗಾರಿಗಳ ಪರಿಶೀಲನೆ: ತಳವಾರಘಟ್ಟದ ಪಕ್ಕದಲ್ಲಿ ನರೇಗಾದಡಿ ಅನುಷ್ಠಾನವಾದ ಗ್ರಾಮೀಣಾ ಉದ್ಯಾನವನ್ನು ವೀಕ್ಷಿಸಿ, ಎನ್ ಆರ್ ಎಲ್ ಎಮ್ ಸಂಜೀವಿನಿ ಸ್ವ-ಸಹಾಯ ಸಂಘದ ಕಟ್ಟಡ ಆವರಣ ಸಸಿಯನ್ನಿಟ್ಟು ಆವರಣದಲ್ಲಿ ಮೈದಾನ ಅಭಿವೃದ್ಧಿ ಸಂಬಂಧಿಸಿದಂತೆ ತಾ.ಪಂ ಇಒ ಮಹಾಂತಗೌಡ ಪಾಟೀಲ್ ಅವರೊಂದಿಗೆ ಚರ್ಚಿಸಿದರು.
ತಾ ಪಂ. ಯೋಜನಾಧಿಕಾರಿ ಗುರುಪ್ರಸಾದ್ ಎಸ್, ಗ್ರಾ. ಪಂ. ಅಧ್ಯಕ್ಷ ಕೆ.ಬಾಳೆಕಾಯಿ ತಿಮ್ಮಪ್ಪ, ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಕೆ., ಸ್ವಚ್ಛ ಭಾರತ ಮಿಷನ್ ಜಿಲ್ಲಾ ಸಂಯೋಜಕರಾದ ಮಾರುತಿ ಎನ್., ಬಸಮ್ಮ ಹುಡೇದ್, ಎನ್.ಆರ್.ಎಲ್.ಎಮ್. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಅಂಬಣ್ಣ, ಕಿಷ್ಕಿಂದಾ ಟ್ರಸ್ಟ್ ಸಂಸ್ಥಾಪಕ ಶಮಾ ಪವಾರ್, ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ನವೀನ್, ಗ್ರಾಮ ಪಂಚಾಯತಿ ಸದಸ್ಯರು, ಎಸ್ ಬಿಎಮ್ ವಿಷಯ ನಿರ್ವಾಹಕರು, ಎನ್ ಆರ್ ಎಲ್ ಎಮ್ ತಾಲೂಕು ವ್ಯವಸ್ಥಾಪಕರು, ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮತ್ತು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಗ್ರಾ.ಪಂ ಸಿಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ