ಮಲ್ಪೆ: ಹೋದೀತು ಜಲಚರಗಳ ಜೀವ

ಹರಿದ ಬಲೆಗಳು, ಪ್ಲಾಸ್ಟಿಕ್‌ ಬಾಟಲಿಗಳನ್ನು ಕಡಲಿಗೆ ಎಸೆಯದಿರಿ

Team Udayavani, Sep 23, 2022, 2:53 PM IST

18

ಮಲ್ಪೆ: ಸಮುದ್ರದಲ್ಲಿ ಅಂಗಾಂಗ ಘಾಸಿಗೊಂಡು ಈಜಲಾರದೆ ಅಸಹಾಯಕ ಪರಿಸ್ಥಿತಿಯಲ್ಲಿ ಕಡಲ ತಡಿಯಲ್ಲಿ ಕಡಲಾಮೆಗಳು, ತಿಮಿಂಗಿಲಗಳು ಪತ್ತೆಯಾದ ಘಟನೆಗಳು ಆಗಾಗ ಕಂಡು ಬರುತ್ತಿವೆ.

ನದಿಯಲ್ಲಿ ಎಸೆದ ಬಲೆಗಳು ಕಡಲ ಗರ್ಭವನ್ನು ಸೇರಿ ಇಂತಹ ಜಲಚರಗಳಿಗೆ ಮಾರಕವಾಗಿ ಪರಿಣಮಿಸುತ್ತಿದ್ದು, ಹರಿದ ಬಲೆಯಲ್ಲಿ ಸಿಲುಕಿದ ಕಡಲಾಮೆಗಳು ನರಳಾಟಿಕೆಯಿಂದ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.

ಅಬ್ಬರದ ಕಡಲ ಅಲೆಗಳನ್ನು ಎದುರಿಸಲಾಗದೆ ಕಡಲತಡಿಯ ಮರಳ ರಾಶಿಯಲ್ಲಿ ಆಶ್ರಯ ಪಡೆಯಲು ಬರುತ್ತವೆ. ಸಮುದ್ರಕ್ಕೆ ಹರಿದು ಬರುತ್ತಿರುವ ಪ್ಲಾಸ್ಟಿಕ್‌ ಬಲೆಗಳು, ಪ್ಲಾಸ್ಟಿಕ್‌ ಹಗ್ಗಗಳು ಇತರ ಆಹಾರ ವಸ್ತುಗಳೊಂದಿಗೆ ಆಮೆ, ತಿಮಿಂಗಿಲಗಳ ಹೊಟ್ಟೆಯನ್ನು ಸೇರುತ್ತದೆ ಎನ್ನಲಾಗಿದೆ.

ಕಳೆದ ವರ್ಷ ಮಲ್ಪೆ ಸೀವಾಕ್‌, ತೊಟ್ಟಂ ಹೂಡೆ ಪರಿಸರದಲ್ಲಿ ಸತ್ತು ಬಿದ್ದಿರುವ ತಿಮಿಂಗಿಲ ಕಾಣಸಿಕ್ಕಿವೆ ಎಂದು ಮೀನುಗಾರರು ತಿಳಿಸಿದ್ದಾರೆ.

ಜಾಗೃತಿ ಅಗತ್ಯ

ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾದ ಕಡಲಾಮೆಗಳ ಬಗ್ಗೆ ಸಾರ್ವ ಜನಿಕರಿಗೆ ಕಂಡು ಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವ ಪ್ರಯತ್ನ ಮಾಡಬೇಕಾಗಿದೆ. ಜತೆಗೆ ಅರಣ್ಯ ಇಲಾಖೆ, ಮೀನುಗಾರಿಕಾ ಇಲಾಖೆಗಳು ಸಾರ್ವಜನಿಕರಲ್ಲಿ ಕಡಲ ಜೀವ ವೈವಿಧ್ಯತೆಯ ರಕ್ಷಣೆಯ ಕುರಿತು ಅರಿವು ಮೂಡಿಸ ಬೇಕಾಗಿದೆ ಎಂಬುದು ತಜ್ಞರ ಅಭಿಪ್ರಾಯ.

ನದಿ, ಹೊಳೆಗಳಿಗೆ ಕಸ ಎಸೆಯದಂತೆ ಜಾಗೃತಿ ಅಗತ್ಯ: ನದಿಯಲ್ಲಿ ಎಸೆದ, ಪ್ಲಾಸ್ಟಿಕ್‌, ಬಾಟಲಿ, ಚಪ್ಪಲಿಗಳು, ಟೂತ್‌ಬ್ರೆಷ್‌ಗಳು ರಾಶಿ ರಾಶಿ ಕಡಲಗರ್ಭ ಸೇರುತಿದ್ದು, ಇವುಗಳು ಜಲಚರಗಳಿಗೆ ಮಾರಕವಾಗುತ್ತದೆ. ಜನರು ಸಮುದ್ರ ತೀರ ಸ್ವಚ್ಛತೆ ಮಾಡುವುದಕ್ಕಿಂತ ನದಿ, ಹೊಳೆಗೆ ಕಸ ಎಸೆಯುವುದನ್ನು ನಿಲ್ಲಿಸುವಂತೆ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಿದರೆ ಒಳಿತು. ಏಕೆಂದರೆ ನದಿಗಳ ಮೂಲಕ ಬಂದ ಕಸಗಳೇ ಸಮುದ್ರ ಗರ್ಭವನ್ನು ಸೇರಿ ಜಲಚರ ನಾಶಕ್ಕೆ ಕಾರಣವಾಗುತ್ತದೆ. -ಮಂಜು ಕೊಳ, ಸ್ಥಳೀಯ ಸಮಾಜಸೇವಕ

 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.