ಅಕ್ರಮ ಮರಳುಗಾರಿಕೆ: ಲೋಕಾಯುಕ್ತ ಬಲೆಗೆ ಪೊಲೀಸರು
Team Udayavani, Sep 23, 2022, 3:01 PM IST
ಕಲಬುರಗಿ: ಅಕ್ರಮ ಮರಳುಗಾರಿಕೆಗೆ ಸಾಥ್ ನೀಡುವ ನಿಟ್ಟಿನಲ್ಲಿ ಲಂಚ ಪಡೆಯುತ್ತಿದ್ದಾಗ ಜೇವರ್ಗಿ ಸಿಪಿಐ ಮತ್ತು ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.
ಲೋಕಾಯುಕ್ತ ಎಸ್ಪಿ ಕರ್ನೂಲ್, ಡಿವೈಎಸ್ಪಿ ಸಿದ್ದಣ್ಣಗೌಡ ಪಾಟೀಲ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ದೃವತಾರಾ, ಸಿಬ್ಬಂದಿ ಪ್ರದೀಪ್, ಸಿದ್ದಲಿಂಗ ದಾಳಿ ನಡೆಸಿದ್ದಾರೆ. 30 ಸಾವಿರ ಲಂಚ ಪಡೆಯುತ್ತಿದ್ದ ಜೇವರ್ಗಿ ಸಿಪಿಐ ಶಿವಪ್ರಸಾದ ಮಠದ್ ಮತ್ತುಎಸ್ಪಿ ಕರ್ತವ್ಯ ಮಾಡುವ ಪೊಲೀಸ್ ಪೇದೆ ಶಿವರಾಯ, ಸಿಪಿಐ ವಾಹನ ಚಾಲಕ ಅವ್ವಣ್ಣ ಎಸಿಬಿ ಬಲೆಗೆ ಬಿದ್ದವರು. ಮರಳು ಸಾಗಿಸಲು ಅನುಮತಿ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಅಖೀಲ್ ಎಂಬುವವರು ಹಣ ಕೊಡಲು ನಂದಿಕೂರ ಬಳಿ ಬಂದಾಗ ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದು, ಜೇವರ್ಗಿ ಸರ್ಕ್ಯೂಟ್ ಹೌಸ್ನಲ್ಲಿ ವಿಚಾರಣೆ ನಡೆಸಿದ್ದಾರೆ. ಜೇವರ್ಗಿ ಠಾಣೆಯ ಎಸ್ಬಿ ಸಿಬ್ಬಂದಿ ಶಿವರಾಯ ಮರುಳು ಮಾಫಿಯಾದಿಂದ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದು, ಈ ಹಣ ಸಿಪಿಐಗೆ ಕೊಡಲು ಪಡೆದಿದ್ದಾಗಿ ತಿಳಿದಿದೆ.
ನಂತರ ಲೋಕಾಯುಕ್ತ ಅಧಿಕಾರಿಗಳು, ಶಿವರಾಯನಿಂದ ಸಿಪಿಐ ಶಿವಪ್ರಸಾದ ಮಠದ ಅವರಿಗೆ ಫೋನ್ ಮೂಲಕ ಮಾತನಾಡಿಸಿದ್ದಾರೆ. ಈ ವೇಳೆ ಹಣ ತೆಗೆದುಕೊಳ್ಳಲು ಬರುವಂತೆ ಸೂಚಿಸಲಾಗಿದೆ. ಕಲಬುರಗಿಯಿಂದ ಜೇವರ್ಗಿಗೆ ಸಿಪಿಐ ಹಾಗೂ ವಾಹನ ಚಾಲಕ ಅವಣ್ಣ ತೆರಳುತ್ತಿದ್ದಾಗ ನಂದಿಕೂರ ಬಳಿ ಅವರನ್ನು ಲೋಕಾಯುಕ್ತ ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ