ವಿಸಾಜಿಗೆ ಗಿರಡ್ಡಿ ವಿಮರ್ಶಾ ಪ್ರಶಸ್ತಿ ಪ್ರದಾನ


Team Udayavani, Sep 23, 2022, 3:23 PM IST

6-award

ಧಾರವಾಡ: ಗಿರಡ್ಡಿ ಗೋವಿಂದರಾಜ್‌ ಫೌಂಡೇಶನ್‌ ವತಿಯಿಂದ ಡಾ| ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿ ಪ್ರದಾನ ಸಮಾರಂಭ ರಂಗಾಯಣ ಆವರಣದ ಸುವರ್ಣ ಸಾಂಸ್ಕೃತಿಕ ಸಮುತ್ಛಯದಲ್ಲಿ ಗುರುವಾರ ಜರುಗಿತು. ಪ್ರಶಸ್ತಿ ಪುರಸ್ಕೃತ ಕೃತಿಯಾದ “ಪಠ್ಯದ ಭವಾವಳಿ’ ಲೇಖಕ ಕಲಬುರಗಿಯ ಡಾ|ವಿಕ್ರಮ ವಿಸಾಜಿ ಅವರಿಗೆ 25 ಸಾವಿರ ನಗದು ಒಳಗೊಂಡ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಡಾ|ವಿಕ್ರಮ ವಿಸಾಜಿ ಮಾತನಾಡಿ, ಇತ್ತೀಚಿನ ಕನ್ನಡದ ವಿಮರ್ಶಕರಲ್ಲಿ ವಿಮರ್ಶೆಯ ವಿಸ್ಮಯವಿಲ್ಲ. ಒಂದು ವಿಷಯದ ಬಗ್ಗೆ ಚಿಂತನೆ ಪಲ್ಲಟ ಮಾಡುವ ಹಾಗೂ ಸೈದ್ಧಾಂತಿಕ ದಕ್ಷತೆಯ ಕೊರತೆ ಎದ್ದು ಕಾಣುತ್ತಿದೆ ಎಂದರು.

ಕವಿತೆ, ಪ್ರಬಂಧ, ವಿಮರ್ಶೆ ಹಾಗೂ ಸಾಹಿತ್ಯದ ಯಾವುದೇ ಪ್ರಕಾರದಲ್ಲಿ ತೊಡಗಿಸಿಕೊಳ್ಳುವ ಪ್ರಮಾಣದ ಮೇಲೆ ಬರವಣಿಗೆ ಸೃಷ್ಟಿಯಾಗುತ್ತದೆ. ಆದರೆ, ನನ್ನ ಸಮಕಾಲೀನ ವಿಮರ್ಶೆ ದಣಿವಿಗೆ ಒಳಗಾಗಿದೆ ಎನ್ನುವ ಭಾವನೆ ಕಾಡುತ್ತಿದೆ. ಇದಕ್ಕೆ ಸಾಮಾಜಿಕ, ರಾಜಕೀಯ ತಿಳಿವಳಿಕೆ ಅತಿಯಾಗಿ ಪಠ್ಯದ ಮೇಲೆ ಹೇರುತ್ತಿರುವುದು ಒಂದು ಕಾರಣವಾಗಿರಬಹುದು ಎಂದು ಹೇಳಿದರು.

ಮನುಷ್ಯನಾಗಿ, ಕಲಾವಿದನಾಗಿ ಹಾಗೂ ಬುದ್ಧಿಜೀವಿಯಾಗಿ ವಿಮರ್ಶಕನಿರಬೇಕು. ಅಂದಾಗ ಮಾತ್ರ ವಿಮರ್ಶೆಯ ವಿಸ್ಮಯ ಹುಟ್ಟುತ್ತದೆ. ಜೀವನದ ಅನುಭವಗಳನ್ನು ಕಲೆಯ ಅನುಭವವಾಗಿ, ಸತ್ಯದ ಅನುಭವವನ್ನು ಕಲೆಯ ಅನುಭವವಾಗಿ ತೆಗೆದುಕೊಂಡಾಗ ಮಾತ್ರ ಉತ್ತಮ ವಿಮರ್ಶಕನಾಗುತ್ತಾನೆ. ಡಾ|ಗಿರಡ್ಡಿ ಗೋವಿಂದರಾಜ ಅವರ ಬರವಣಿಗೆಯಲ್ಲಿನ ಪ್ರಾಮಾಣಿಕತೆ, ಬದ್ಧತೆ, ಶಿಸ್ತು ಈಗಿನ ವಿಮರ್ಶಕರಿಗೆ ಮಾದರಿಯಾಗಿದೆ ಎಂದರು.

ಧಾರವಾಡದ ವಿಮರ್ಶಾಪರಂಪರೆ ಕುರಿತು ವಿಶೇಷ ಉಪನ್ಯಾಸ ನೀಡಿದ ಹಿರಿಯ ಚಿಂತಕ ಡಾ| ರಾಜೇಂದ್ರ ಚೆನ್ನಿ ಮಾತನಾಡಿ, ಧಾರವಾಡ ನವೋದಯ ಕಾಲದಿಂದ ಹಿಡಿದು ಇಲ್ಲಿಯವರೆಗೂ ವಿಮರ್ಶಾ ಪರಂಪರೆ ಹೊಂದಿದೆ. ಇಲ್ಲಿ ಬಹುಮುಖೀ ಸಾಂಸ್ಕೃತಿಕತೆ ಇರುವುದರಿಂದ ಧಾರವಾಡಕ್ಕೆ ಪ್ರತ್ಯೇಕ ವಿಮರ್ಶಾ ಪರಂಪರೆಯನ್ನು ಒಪ್ಪಬಹುದು. ವಿಮರ್ಶೆಯಲ್ಲಿ ಅತೀ ಸಂದೇಹ, ಸಂಶಯದ ಕಾಲವಿದು. ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ನಂಬಿಕೆಯನ್ನು ತೆಗೆದು ಹಾಕುವ ವಿದ್ಯಮಾನಗಳು ನಡೆಯುತ್ತಿವೆ. ಇದು ಬರೀ ರಾಜಕೀಯ ಮಾತ್ರವಲ್ಲದೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಉತ್ತಮ ವಿಮರ್ಶೆ ಗುರುತಿಸುವುದು ಕಷ್ಟವಾಗಿದೆ ಎಂದು ಹೇಳಿದರು.

ಡಾ| ಗಿರಡ್ಡಿ ಗೋವಿಂದರಾಜ ಫೌಂಡೇಶನ್‌ ಅಧ್ಯಕ್ಷ ಡಾ| ವೆಂಕಟೇಶ ಮಾಚಕನೂರ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಪುರಸ್ಕೃತ ಕೃತಿ “ಪಠ್ಯದ ಭವಾವಳಿ’ ಕುರಿತು ಪ್ರೊ|ರಾಘವೇಂದ್ರ ಪಾಟೀಲ ಮಾತನಾಡಿದರು. ಸಾಹಿತಿ ಬಾಳಣ್ಣ ಶೀಗಿಹಳ್ಳಿ, ಸರೋಜಾ ಗಿರಡ್ಡಿ ಇದ್ದರು. ಶಶಿಧರ ತೋಡ್ಕರ ಪರಿಚಯಿಸಿದರು. ರವಿ ಕುಲಕರ್ಣಿ ನಿರೂಪಿಸಿದರು. ಸುನೀಲ ಗಿರಡ್ಡಿ ವಂದಿಸಿದರು.

ಟಾಪ್ ನ್ಯೂಸ್

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.