ನನ್ನ ರಾಜಕೀಯ ಗುರು ಅನಂತಕುಮಾರ್‌: ಜಗದೀಶ್‌ ಶೆಟ್ಟರ್‌

ಅನಂತಕುಮಾರ್‌ ಅವರು ಮಾತ್ರ ಎಲ್ಲಾ ಸಮುದಾಯದ ನಾಯಕರನ್ನು ಬೆಳೆಸಿದ್ದಾರೆ

Team Udayavani, Sep 23, 2022, 2:50 PM IST

ನನ್ನ ರಾಜಕೀಯ ಗುರು ಅನಂತಕುಮಾರ್‌: ಜಗದೀಶ್‌ ಶೆಟ್ಟರ್‌

ಬೆಂಗಳೂರು: ಅನಂತಕುಮಾರ್‌ ಅವರು ರಾಜಕೀಯದಲ್ಲಿ ತಾವು ಬೆಳೆಯುವ ಜತೆಗೆ ನೂರಾರು ನಾಯಕರನ್ನು ಹುಟ್ಟುಹಾಕಿದ್ದಾರೆ. ನಾನು ರಾಜಕೀಯ ಕ್ಷೇತ್ರಕ್ಕೆ ಬರಲು ಅವರೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸ್ಮರಿಸಿದರು.

ಅನಂತಕುಮಾರ್‌ ಅವರು 63ನೇ ಹುಟ್ಟುಹಬ್ಬದ ಆಚರಣೆ ಪ್ರಯುಕ್ತ ನಗರದ ಶಂಕರಪುರದಲ್ಲಿನ ಕರ್ನಾಟಕ ಜೈನ ಭವನದಲ್ಲಿ ಆಯೋಜಿಸಲಾಗಿದ್ದ ಅನಂತ ಪ್ರೇರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎ-ಚಾಟ್‌ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಮೂಲೆ ಮೂಲೆಯಲ್ಲಿಯೂ ಅನಂತ ಕುಮಾರ್‌ ಅವರು ತಮ್ಮ ಬಳಗವನ್ನು ಕಟ್ಟಿದ್ದು,ಯುವಕರಲ್ಲಿ ಪ್ರೇರಣಾ ಶಕ್ತಿಯನ್ನು ತುಂಬುತ್ತಿದ್ದರು. ಅವರೊಂದಿಗೆ ಎಬಿವಿಪಿಯಲ್ಲಿ ಕೆಲಸ ಮಾಡಿದ್ದೇನೆ. ತದ ನಂತರ ರಾಜಕೀಯ ಕ್ಷೇತ್ರಕ್ಕೆ ಬರಲು ಅವರೇ ಕಾರಣೀಭೂತರು ಎಂದು ಅವರೊಂದಿಗಿದ್ದ ಸಂಗತಿಗಳನ್ನು ನೆನಪಿಸಿಕೊಂಡರು.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು, ಅನಂತ ಕುಮಾರ್‌ ಅವರು ಬಡವರು, ದಲಿತರ ಬಗ್ಗೆ ಸೇರಿದಂತೆ ಸಾಮಾಜಿಕ ನ್ಯಾಯ, ಸಮಾಜದ ಕಳಕಳಿ ಬಗ್ಗೆ ಮಾತನಾಡುತ್ತಿದ್ದರು ಎಂದು ಸ್ಮರಿಸಿದರು.ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ರಾಜಕೀಯದಲ್ಲಿ ರಾಮಕೃಷ್ಣ ಹೆಗಡೆ ಮತ್ತು ಅನಂತಕುಮಾರ್‌ ಅವರು ಮಾತ್ರ ಎಲ್ಲಾ ಸಮುದಾಯದ ನಾಯಕರನ್ನು ಬೆಳೆಸಿದ್ದಾರೆ. ಇಂದು ರಾಜಕೀಯ ವಾಣಿಜ್ಯೀಕರವಾಗಿದ್ದು, ಎಂಎಲ್‌ಎ ಅಥವಾ ಎಂಪಿಗಳು ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡಲು ತಿಂಗಳುಗಳು ಕಳೆಯುತ್ತಿವೆ. ಆದರೆ ಅನಂತ ಕುಮಾರ್‌ ಅವರು ಕೂಡಲೇ ಮಂತ್ರಿಗಳನ್ನು ಭೇಟಿ
ಮಾಡಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುತ್ತಿದ್ದರು ಎಂದು ಅನಂತಕುಮಾರ್‌ ಅವರನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕದ ವಿಶಿಷ್ಟ 63 ದೇವಸ್ಥಾನಗಳ ಮಾಹಿತಿ ಪತ್ರ, 63 ಸಸ್ಯಗಳ ಮಾಹಿತಿ ಪತ್ರ, 6 ಜಿಲ್ಲೆಗಳ ಅಪರೂಪದ ದೇವಾಲಯಗಳ ಕೈಪಿಡಿ ಬಿಡುಗಡೆ, ಅನಂತಪಥ ಮಾಸ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಹಾಗೂ ಟಿ.ಎಸ್‌.ಗೋಪಾಲ್‌, ಸಂಧ್ಯಾ, ಕೆಂಗೇರಿ ಚಕ್ರಪಾಣಿ, ರಶ್ಮಿ ಕಿಲೇಗಾ, ಪೂರ್ಣಪ್ರಜ್ಞಾ, ಅಥರ್ವ ಸೇರಿದಂತೆ ಅನೇಕರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ಪಿ.ವಿ. ಕೃಷ್ಣ ಭಟ್‌, ತೇಜಸ್ವಿನಿ ಅನಂತಕುಮಾರ್‌, ನ್ಯಾ. ಎನ್‌.ಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.