ಭಾರತ್‌ ಜೋಡೋ ಯಾತ್ರೆಗೆ ಹೆಚ್ಚಿನ ಸಹಕಾರ ನೀಡಿ

ಕಾಂಗ್ರೆಸ್‌ ಪಕ್ಷ ಬಡವರು, ಕಾರ್ಮಿಕರು, ಶ್ರಮಿಕ ವರ್ಗದ ಪರವಾಗಿ ಹತ್ತು ಹಲವು ಯೋಜನೆಗಳನ್ನು ನೀಡಿದೆ.

Team Udayavani, Sep 23, 2022, 6:27 PM IST

ಭಾರತ್‌ ಜೋಡೋ ಯಾತ್ರೆಗೆ ಹೆಚ್ಚಿನ ಸಹಕಾರ ನೀಡಿ

ಯಳಂದೂರು:ಕಾಂಗ್ರೆಸ್‌ ಪಕ್ಷದ ವತಿಯಿಂದ ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಭಾರತ್‌ ಜೋಡೋ ಯಾತ್ರೆ ಸೆ.30 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು ಇದಕ್ಕಾಗಿ ಪಕ್ಷದ ಕಾರ್ಯಕರ್ತರು, ಸಂಘಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಸೇರಿದಂತೆ ಎಲ್ಲಾ ಅಭಿಮಾನಿ ವರ್ಗ ತಪ್ಪದೆ ಹಾಜರಾಗಬೇಕು ಎಂದು ಮಾಜಿ ಶಾಸಕ ಎಸ್‌. ಬಾಲರಾಜು ಮನವಿ ಮಾಡಿದರು.

ಅವರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಗುಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ದೇಶದ ರಾಜಕೀಯ ಇತಿಹಾಸದಲ್ಲಿ ಸ್ವತಂತ್ರ ಭಾರತಕ್ಕೆ ಅನೇಕ ತ್ಯಾಗ ಬಲಿದಾನ ನೀಡಿದ ಪಕ್ಷವಾಗಿದೆ ಎಂದರು.

ನೆಹರು 9 ವರ್ಷ ಜೈಲಿನಲ್ಲಿದ್ದು ಸ್ವತಂತ್ರ ಸಂಗ್ರಾಮದಲ್ಲಿ ಭಾಗವಹಿಸಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಆಧುನಿಕ ಭಾರತದ ಕನಸಿಗೆ ರೆಕ್ಕೆ ಕಟ್ಟಿದ್ದರು. ನಂತರ ಇಂದಿರಾಗಾಂಧಿ, ರಾಜೀವ್‌ ಗಾಂಧಿ ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದರು. ನಂತರ ಸೋನಿಯಾಗಾಂಧಿ ಪ್ರಧಾನಿಯಾಗುವ ಅವಕಾಶವಿದ್ದರೂ ಇದನ್ನು ತಿರಸ್ಕರಿಸಿ ಮನಮೋಹನ್‌ಸಿಂಗ್‌ರನ್ನು ಪ್ರಧಾನಿ ಮಾಡಿ ದೇಶವನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಿದರು.

ಅಧಿಕಾರದ ಲಾಲಸೆ ಇಲ್ಲದೆ ಕಾಂಗ್ರೆಸ್‌ ಪಕ್ಷ ಬಡವರು, ಕಾರ್ಮಿಕರು, ಶ್ರಮಿಕ ವರ್ಗದ ಪರವಾಗಿ ಹತ್ತು ಹಲವು ಯೋಜನೆಗಳನ್ನು ನೀಡಿದೆ. ಆದರೆ ಕಳೆದ 8 ವರ್ಷದಿಂದ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದು ಹೊಸ ಕಾನೂನುಗಳನ್ನು ಜನರ ಮೇಲೆ ಏರುತ್ತಿದೆ ವಿನಹ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ.

ಸೆ.30ಕ್ಕೆ ಗುಂಡ್ಲುಪೇಟೆಗೆ ಪಾದಯಾತ್ರೆ: ಪ್ರತಿಯೊಂದು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಸಾರ್ವಜನಿಕರ ಬದುಕು ನಡೆಸಲು ದುಸ್ತರವಾಗುತ್ತಿದೆ. ಇದನ್ನು ಮನವರಿಕೆ ಮಾಡಿಕೊಡಲು ಕಾಂಗ್ರೆಸ್‌ ಪಕ್ಷದ ರಾಹುಲ್‌ಗಾಂಧಿ ಭಾರತ್‌ ಜೋಡೋ ಎಂಬ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡಿದ್ದರು ಸೆ.30 ರಂದು ಇದು ಗುಂಡ್ಲುಪೇಟೆಗೆ ಆಗಮಿಸಲಿದೆ. ಇಲ್ಲಿಗೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಭಾಗವಹಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದ್ದು ಗುಂಡ್ಲುಪೇಟೆಯಿಂದ ಬೇಗೂರಿನ ತನಕ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾದಯಾತ್ರೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಪಾದಯಾತ್ರೆ ಯಶಸ್ವಿಗೊಳಿಸಿ: ಮಾಜಿ ಶಾಸಕ ಎಸ್‌. ಜಯಣ್ಣ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಿಂದಲೂ ಬಸ್‌ ವ್ಯವಸ್ಥೆ ಮಾಡಲಾಗಿದ್ದು ಅಂದು ಬೆಳಿಗ್ಗೆ ಉಪಾಹಾರ, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿದ್ದು ಇಂತಹ ಒಂದು ಪಾದಯಾತ್ರೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ ಹಾಜರಾಗಿ ಇದನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ. ಚಂದ್ರು, ಕಾಂಗ್ರೆಸ್‌ ಪಕ್ಷದ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಕೃಷ್ಣಾಪುರ ಎಂ.ದೇವರಾಜು, ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಕಿನಕಹಳ್ಳಿ ಪ್ರಭುಪ್ರಸಾದ್‌, ಕಂದಹಳ್ಳಿ ನಂಜುಂಡಸ್ವಾಮಿ, ವೆಂಕಟೇಶ್‌ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.