ಅ.18ರಂದು ಬಿಸಿಸಿಐ ವಾರ್ಷಿಕ ಮಹಾಸಭೆ
Team Udayavani, Sep 23, 2022, 10:52 PM IST
ಮುಂಬಯಿ: ಬಿಸಿಸಿಐ ಸರ್ವಸದಸ್ಯರ ವಾರ್ಷಿಕ ಸಭೆ ಅ. 18ರಂದು ಮುಂಬಯಿಲ್ಲಿ ನಡೆಯಲಿದೆ.
ಕಾರ್ಯದರ್ಶಿ ಜಯ್ ಶಾ ಈ ಕುರಿತು ಸಂಬಂಧಪಟ್ಟ ಎಲ್ಲರಿಗೂ ನೊಟೀಸ್ ಕಳುಹಿಸಿದ್ದಾರೆ. ಹೀಗಾಗಿ ಮಹತ್ವದ ಚುನಾವಣೆಯೂ ನಡೆಯಲಿದೆ.
ಇದರಿಂದ ಸೌರವ್ ಗಂಗೂಲಿ ಅಧ್ಯಕ್ಷರಾಗಿ, ಜಯ್ ಶಾ ಕಾರ್ಯದರ್ಶಿಯಾಗಿ ಪುನರಾಯ್ಕೆಯಾಗುವುದಕ್ಕೆ ಮುಹೂರ್ತವೂ ನಿಗದಿಯಾಗಿದೆ.
ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಲಿವೆ. ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಅದಕ್ಕೆ ತೆರಿಗೆ ವಿನಾಯಿತಿ ಪಡೆದುಕೊಳ್ಳಿ ಎಂದು ಐಸಿಸಿ, ಬಿಸಿಸಿಐಗೆ ಮನವಿ ಮಾಡಿದೆ.
ಇದನ್ನೂ ಚರ್ಚಿಸಲಾಗುತ್ತದೆ. 2016ರ ಟಿ20 ವಿಶ್ವಕಪ್ಗೆ ತೆರಿಗೆ ವಿನಾಯಿತಿ ಸಿಕ್ಕಿರಲಿಲ್ಲ. ಆಗ ಐಸಿಸಿ ಬಿಸಿಸಿಐಗೆ ಅಂದಾಜು 200 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ನೀಡಿರಲಿಲ್ಲ.
2021ರ ಟಿ20 ವಿಶ್ವಕಪ್ ತೆರಿಗೆ ಪಡೆಯಿರಿ ಎಂದು ಐಸಿಸಿ ಸೂಚಿಸಿತ್ತು. ಕೊರೊನಾ ಕಾರಣದಿಂದ ಕೂಟವನ್ನೇ ಬಿಸಿಸಿಐ ಯುಎಇಗೆ ಸ್ಥಳಾಂತರಿಸಿತ್ತು. ಈ ಕಾರಣದಿಂದ ತೆರಿಗೆ ತಲೆಬಿಸಿ ತಪ್ಪಿತ್ತು. ಮುಂದಿನ ಬಾರಿ ಹಾಗಾಗಲಿಕ್ಕಿಲ್ಲ. ಒಂದು ವೇಳೆ ತೆರಿಗೆ ವಿನಾಯಿತಿ ಸಿಗದಿದ್ದರೆ, ಐಸಿಸಿ ಕಠಿನ ಕ್ರಮ ತೆಗೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್