ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಯಾಗಲಿ


Team Udayavani, Sep 24, 2022, 6:00 AM IST

ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಯಾಗಲಿ

ರಾಜ್ಯದಲ್ಲಿ ಕನ್ನಡ ಸರಿಯಾಗಿ ಬಳಕೆಯಾಗುತ್ತಿಲ್ಲ, ಸರಕಾರಿ ಕಾರ್ಯಕ್ರಮಗಳಲ್ಲೂ ಕನ್ನಡವನ್ನು ಮರೆತು, ಆಂಗ್ಲ ಭಾಷೆ ಮತ್ತು ಹಿಂದಿಯನ್ನು ಎಗ್ಗಿಲ್ಲದೇ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಲೇ ಇದೆ. ಈ ರೀತಿಯಾದಾಗ ಕನ್ನಡ ಸಂಘಟನೆಗಳು ಈ ಬಗ್ಗೆ ಧ್ವನಿ ಎತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಂದು ದೂರು ಕೊಟ್ಟು, ಅದು ಕೂಡ ಕನ್ನಡ ನಿರ್ಲಕ್ಷ್ಯ ಮಾಡಿದವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳುತ್ತದೆ. ಆದರೆ ಇಲ್ಲಿವರೆಗೂ ಕಠಿನ ಕ್ರಮ ಕೈಗೊಳ್ಳುವ ಯಾವ ಅಧಿಕಾರವೂ ಇರಲಿಲ್ಲ. ಈಗ ಕನ್ನಡ ಭಾಷಾ ರಕ್ಷಣೆಗೆ ಮಸೂದೆಯನ್ನು ಮಂಡಿಸುವ ಮೂಲಕ ರಾಜ್ಯ ಸರಕಾರ ಅತ್ಯಂತ ಮಹತ್ವವಾದ ಹಾಗೂ ದಿಟ್ಟ ಹೆಜ್ಜೆಯನ್ನು ಇಟ್ಟಿದೆ.

ಈ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಕಲಾಪದಲ್ಲೇ ಅನುಮೋದನೆ ನೀಡಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಶಾಸಕರು ಈ ಮಸೂದೆಯನ್ನು ತುರ್ತು ಎಂಬಂತೆ ಪರಿಗಣಿಸಬಹುದು ಎಂಬ ನಿರೀಕ್ಷೆಯೂ ಸಹ ಹುಸಿಯಾಗಿದೆ. ಕರ್ನಾಟಕ ಮತ್ತು ಕನ್ನಡಕ್ಕೆ ಅತ್ಯಂತ ಅಗತ್ಯ ಎನಿಸಿರುವ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಕುರಿತು ಮುಂದಿನ ಅಧಿವೇಶನದಲ್ಲಿ ದೀರ್ಘ‌ ಚರ್ಚೆ ನಡೆದು ಅನುಮೋದನೆ ಸಿಗುವುದು ಖಚಿತ.

ಕನ್ನಡದ ಸಾರ್ವಭೌಮತ್ವ ಕಾಪಾಡಲು ಈ ಮಸೂದೆಯಲ್ಲಿ ಹಲವು ಪ್ರಮುಖ ಅಂಶಗಳನ್ನು ಸೇರಿಸಿಕೊಳ್ಳಲಾಗಿದೆ. ಕನ್ನಡ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ತೋರಿದರೆ ಮೊದಲ ಬಾರಿ ತಪ್ಪಿಗೆ 5 ಸಾವಿರ, ಎರಡನೇ ಬಾರಿಗೆ 10 ಸಾವಿರ ಮತ್ತು ಮೂರನೇ ಬಾರಿಗೆ 20 ಸಾವಿರ ರೂ. ದಂಡ ವಿಧಿಸುವ ಬಗ್ಗೆ ರಾಜ್ಯ ಸರಕಾರದ ಪ್ರಸ್ತಾವಿತ ಮಸೂದೆಯಲ್ಲಿ ಉಲ್ಲೇಖೀಸಲಾಗಿದೆ. ಕನ್ನಡ ಅನುಷ್ಠಾನದಲ್ಲಿ ತಪ್ಪೆಸಗುವ ಸರಕಾರಿ ಅಧಿಕಾರಿಗಳಿಗೂ ಈ ದಂಡದ ರುಚಿ ತೋರಿಸುವ ಅನಿವಾರ್ಯತೆ ಪ್ರಸ್ತುತದಲ್ಲಿ ಇದೆ.

ಇದರ ಜತೆಗೆ ಕನ್ನಡ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ನೀಡುವುದು, ನ್ಯಾಯಾಲಯದಲ್ಲಿ ಕನ್ನಡ ಬಳಕೆ, ಪ್ರಸಾರಕ್ಕೆ ಪ್ರತ್ಯೇಕ ನೀತಿ ತರುವಂಥ ಕ್ರಮಗಳನ್ನೂ ಪ್ರಸ್ತಾವಿತ ಮಸೂದೆಯಲ್ಲಿ ಸೇರಿಸಲಾಗಿದೆ. ಸದ್ಯದ ಮಟ್ಟಿಗೆ ಈ ಎಲ್ಲ ಸಂಗತಿಗಳು ಕನ್ನಡ ನಾಡು-ನುಡಿಯ ಬೆಳವಣಿಗೆಗೆ ಪೂರಕವಾಗಿರಲಿ.

ಈ ಮಸೂದೆ ಅನುಮೋದನೆಗೊಂಡು ನಾಳೆ ಕಾಯ್ದೆಯಾಗಲಿದೆ. ಆದರೆ ಅದರ ಅನುಷ್ಠಾನ ಸಮರ್ಪಕವಾದಲ್ಲಿ ಮಾತ್ರ ಅದಕ್ಕೊಂದು ಅರ್ಥ ಬರುತ್ತದೆ. ವಿಚಿತ್ರವೆಂದರೆ ರಾಜ್ಯದ ಅನ್ನ ನೀಡುವ ಭಾಷೆಯಾಗಿರುವ ಕನ್ನಡವನ್ನು ಎಲ್ಲೆಡೆ ಬಳಕೆ ಮಾಡಿ ಎಂದು ಹೇಳುವ ಸ್ಥಿತಿ ಬಂದಿರುವುದೇ ನಾಚಿಕೆಗೇಡಿನ ವಿಚಾರ.

ಇತ್ತೀಚೆಗೆ ಆಂಗ್ಲ ಭಾಷೆಯ ವ್ಯಾಮೋಹ ಕಡಿಮೆಯಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಮಸ್ಯೆಯಾಗುತ್ತಿರುವುದು ಹಿಂದಿ ಬಳಕೆಯಿಂದ. ಕೇಂದ್ರ ಸರಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಈಗಾಗಲೇ ಹಲವಾರು ಬಾರಿ ಕನ್ನಡವನ್ನು ಸಂಪೂರ್ಣವಾಗಿ ಅವಗಣಿಸಲಾಗಿದೆ. ಈ ಸಂಬಂಧ ಸಂಬಂಧಪಟ್ಟವರ ಬಳಿ ಸ್ಪಷ್ಟನೆ ಕೇಳಿದ್ದಾಗ್ಯೂ ಅವರಿಂದ ಸರಿ ಉತ್ತರ ಬಂದಿಲ್ಲ. ಆದರೆ ಈ ನೆಲದಲ್ಲಿ ಕಾರ್ಯಕ್ರಮ ಮಾಡುವುದು ಕನ್ನಡ ಮರೆಯುವುದೇ ದೊಡ್ಡ ಅಪರಾಧವೆನ್ನಲೇಬೇಕಾಗುತ್ತದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.