ಹಗರಣಗಳ ತನಿಖೆಗೆ ಬಿಜೆಪಿ ಸರ್ಕಾರ ಹೆದರುತ್ತಿದೆ: ಸಂತೋಷ ಲಾಡ್
Team Udayavani, Sep 24, 2022, 5:49 PM IST
ಕೊಪ್ಪಳ: ಬಿಜೆಪಿ ಭ್ರಷ್ಟಾಚಾರವು ಮಾಧ್ಯಮಗಳ ಮೂಲಕವೇ ಬಹಿರಂಗವಾಗಿದೆ. ಸರ್ಕಾರ ಇದನ್ನು ತನಿಖೆಗೆ ಕೊಡಲು ಹೆದರುತ್ತಿದೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ಭ್ರಷ್ಟಾಚಾರದ ದಾಖಲೆ ಕೊಡಿ ಎನ್ನುತ್ತಿದ್ದಾರೆ. ಆದರೆ ಮಾಧ್ಯಮಗಳ ಮೂಲಕವೇ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿದೆ. ಅಲ್ಲದೇ, ಕೆಂಪಯ್ಯ ಅವರೇ 40 ಪರ್ಸೆಂಟ್ ಸರ್ಕಾರ ಎಂದು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ತನಿಖೆಯಾಗಲಿ ಎನ್ನುತ್ತಿದ್ದಾರೆ. ಲೋಕಾಯುಕ್ತ, ಸಿಐಡಿ, ನ್ಯಾಯಾಂಗ ತನಿಖೆಯಾದರೂ ಆಗಲಿ. ಆದರೆ ಬಿಜೆಪಿ ಸರ್ಕಾರ ತನಿಖೆಗೆ ಕೊಡಲು ಹೆದರುತ್ತಿದೆ. ಆಡಳಿತ ಪಕ್ಷಕ್ಕೆ ಸಿಕ್ಕಿಹಾಕಿಕೊಳ್ಳುವ ಭಯವಿದೆ. ಹಾಗಾಗಿ ತಾಕತ್ತಿನ ಬಗ್ಗೆ ಅವರು ಮಾತನಾಡುತ್ತಿದ್ದಾರೆ ಎಂದರು.
ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಲಾಡ್, ಗುತ್ತಿಗೆ ಕೆಲಸದಲ್ಲಿ 40 ಪರ್ಸೆಂಟ್ ಕಮಿಷನ್ ನಡೆದಿರುವುದು ಬಹಿರಂಗವಾಗಿದೆ. ಬಿಜೆಪಿ ಸರ್ಕಾರ ಕಮಿಷನ್ ಸರ್ಕಾರ ಎನ್ನಲಾಗುತ್ತಿದೆ. ಇದನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಪ್ರಧಾನಿಗೂ ಪತ್ರ ಬರೆದಿದ್ದಾರೆ. ಪ್ರತಾಪ ಸಿಂಹ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.
ಇದನ್ನೂ ಓದಿ:ದೀರ್ಘಕಾಲದ ಕೋರ್ಟ್ ಎದುರಾಳಿ ವಿದಾಯ ಹೇಳುತ್ತಿದ್ದಂತೆ ಕಣ್ಣೀರಿಟ್ಟ ರಾಫೆಲ್ ನಡಾಲ್
ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರ ಮಾಡಲು ಏಜೆಂಟರಿದ್ದರು ಎನ್ನುವ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾರಜೋಳ ಅವರು ಹಿರಿಯರು. ಅಧಿಕಾರದಲ್ಲಿರುವ ಸರ್ಕಾರ ತಪ್ಪು ಮಾಡಿದೆ ಎನ್ನುವುದನ್ನು ಅವರು ಮೊದಲು ಒಪ್ಪಿಕೊಳ್ಳಲಿ. ಕಾಟಾಚಾರಕ್ಕೆ ಏನಾದರೂ ಹೇಳಬೇಕೆಂದು ಹೇಳುತ್ತಿದ್ದಾರೆ ಎಂದರು.
ಮಾಜಿ ಸಿಎಂ ಪೋಸ್ಟರ್ ಅಂಟುವ ವಿಚಾರದ ಬಗ್ಗೆ ಸಚಿವ ಸುಧಾಕರ್ ಅವರು ವಿಪಕ್ಷ ನಾಯಕರಿಗೆ ನಾಚಿಕೆಯಾಗಬೇಕು ಎನ್ನುವ ಪದಬಳಕೆ ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಹಕ್ಕಿದೆ. ಪೋಸ್ಟರ್ ಅಂಟಿಸಲು ಹಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ