ಪಾದಯಾತ್ರೆಗೆ ಆಗಮಿಸಿ “ಕೈ’ ಬಲಪಡಿಸಿ


Team Udayavani, Sep 25, 2022, 3:00 PM IST

ಪಾದಯಾತ್ರೆಗೆ ಆಗಮಿಸಿ “ಕೈ’ ಬಲಪಡಿಸಿ

ಕೆ.ಆರ್‌.ಪೇಟೆ: ಅ.3 ರಿಂದ 06ರವರೆಗೆ ಮಂಡ್ಯ ಜಿಲ್ಲೆಯಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ ನಡೆಸಲಿದ್ದು ಭಾರತ್‌ ಜೋಡೋ ಯಾತ್ರೆಗೆ ಜನರನ್ನು ಸಂಘಟಿಸಿ ಕರೆತರುವ ಸಂಬಂಧ ಕೆ.ಆರ್‌.ಪೇಟೆ ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಸಮಿತಿ ಅಧ್ಯಕ್ಷ ಎನ್‌.ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳಲ್ಲಿ ಗೊಂದಲ ಸಹಜ. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಆಗುವ ಗೊಂದಲಗಳಿಗೆ ಕಾರ್ಯಕರ್ತರು ಹೊಣೆಯಲ್ಲ. ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳಾಗಬೇಕು. ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ತಿಳಿಸಿದರು.

ಲಿಖಿತವಾಗಿ ನೀಡಿ: ಪಕ್ಷದ ತಾಲೂಕು ಘಟಕಗಳ ಅಧ್ಯಕ್ಷರಿಗೆ ಕಠಿಣ ಸಂದೇಶ ನೀಡಿದ ಎನ್‌.ಚಲುವರಾಯಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಮನಸ್ಸಿಗೆ ಬಂದಂತೆ ಸಭೆಯಲ್ಲಿ ಮಾತನಾಡಬಾರದು. ಪಕ್ಷವಿದ್ದರೆ ಶಾಸಕರು ಹುಟ್ಟಿಕೊಳ್ಳುತ್ತಾರೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಯಾರಿಗೆ ಟಿಕೆಟ್‌ ನೀಡಬೇಕೆಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ರ ನಾಯಕತ್ವದಲ್ಲಿ ಕುಳಿತು ಒಮ್ಮತದ ಅಭ್ಯರ್ಥಿಯ ಹೆಸರನ್ನು ನಿರ್ಣಯಿಸಿ ಲಿಖೀತವಾಗಿ ನೀಡಿ. ಅವರಿಗೇ ಪಕ್ಷ ಟಿಕೆಟ್‌ ನೀಡುತ್ತದೆ. ಇಲ್ಲದಿದ್ದರೆ ಪಕ್ಷದ ಹೈಕಮಾಂಡ್‌ ನಿರ್ಣಯಕ್ಕೆ ಎಲ್ಲರೂ ತಲೆಬಾಗಲೇಬೇಕು ಎಂದು ತಿಳಿಸಿದರು.

ಭಿನ್ನಮತ ಬೇಡ: ನಾನು ಯಾರನ್ನೂ ಲಘುವಾಗಿ ನೋಡುವುದಿಲ್ಲ. ಜನ ಬೆಂಬಲವಿದ್ದವರನ್ನು ಬೆಂಬಲಿಸುತ್ತೇನೆ. ಕಾರ್ಯಕರ್ತರ ನಡುವೆ ಮುಖಂಡರು ಭಿನ್ನಮತ ಸೃಷ್ಟಿಸಬಾರದು ಎಂದು ಸಲಹೆ ನೀಡಿದರು.

ಜವಾಬ್ದಾರಿ ಇರಲಿ: ರಾಹುಲ್‌ ಗಾಂಧಿ ಅವರ ಪಾದಯಾತ್ರೆಗೆ ತಾಲೂಕಿನಿಂದ ಕನಿಷ್ಠ 5 ಸಾವಿರ ಜನ ಭಾಗವಹಿಸಬೇಕು. ಇದೊಂದು ಐತಿಹಾಸಿಕ ಪಾದಯಾತ್ರೆಯಾಗಿದ್ದು ಜಿಲ್ಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಹೆಚ್ಚಿಸಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಉತ್ಸಾಹದಿಂದ ಬೆರೆತು ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಹೊತ್ತುಕೊಳ್ಳುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಎಚ್‌.ಎನ್‌.ರವೀಂದ್ರ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್‌, ಬಿ.ಪ್ರಕಾಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್‌, ಕಿಕ್ಕೇರಿ ಸುರೇಶ್‌, ಕರ್ನಾಟಕ ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಕಾಂಗ್ರೆಸ್‌ ಮುಖಂಡರು, ಸಮಾಜ ಸೇವಕರಾದ ಬೂಕನಕೆರೆ ವಿಜಯ್‌ ರಾಮೇಗೌಡ, ತಾಲೂಕು ಕಾಂಗ್ರೆಸ್‌ ಉಸ್ತುವಾರಿ ಚಿನಕುರಳಿ ರಮೇಶ್‌, ಜಿಪಂ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು, ಕೊಡಗಹಳ್ಳಿ ಮಂಜೇಗೌಡ, ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷರಾದ ಅಗಸರಹಳ್ಳಿ ಗೋವಿಂದರಾಜು, ಹರಳಹಳ್ಳಿ ವಿಶ್ವನಾಥ್‌, ಮನ್‌ಮುಲ್‌ ನಿರ್ದೇಶಕ ಡಾಲು ರವಿ, ಪುರಸಭಾ ಸದಸ್ಯರಾದ ಕೆ.ಸಿ.ಮಂಜುನಾಥ್‌, ಡಿ.ಪ್ರೇಮಕುಮಾರ್‌, ಕೆ.ಆರ್‌. ರವೀಂದ್ರಬಾಬು, ರಾಜಯ್ಯ, ಶಿವಣ್ಣ, ಬಸ್ತಿರಂಗಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.