ಬಿಜೆಪಿಗೆ ಕೀಚಕ, ದುಶ್ಯಾಸನರೇ ಆದರ್ಶ ಪುರುಷರು: ಕಾಂಗ್ರೆಸ್ ಟೀಕೆ
Team Udayavani, Sep 25, 2022, 2:57 PM IST
ಬೆಂಗಳೂರು: ಹೆಣ್ಣುಮಕ್ಕಳನ್ನು ಪೀಡಿಸುವ ಬಿಜೆಪಿ ಗೆ ಕೀಚಕ, ದುಶ್ಯಾಸನರು ಆದರ್ಶ ಪುರುಷರೇ ಹೊರತು ರಾಮನಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಟೀಕೆ ಮಾಡಿದೆ.
ಹಿಮಾಚಲ ಪ್ರದೇಶದ ಭೋಗ್ ಪುರದಲ್ಲಿರುವ ಬಿಜೆಪಿ ಮುಖಂಡರೊಬ್ಬರ ಪುತ್ರನ ರೆಸಾರ್ಟೊಂದರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಟೀಕೆ ಮಾಡಿದೆ.
ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರು ಸೇರಿಕೊಂಡಿರುವ ಕೂಟಕ್ಕೆ ಇರುವ ಹೆಸರೇ ಬಿಜೆಪಿ. ಬೇಟಿ ಬಚಾವ್ ಆಗಬೇಕಿರುವುದು ಬಿಜೆಪಿಗರಿಂದ ಎಂಬುದು ಕರ್ನಾಟಕದಿಂದ, ಉತ್ತರ ಪ್ರದೇಶ, ಉತ್ತರಖಾಂಡದವರೆಗೂ ಬಿಜೆಪಿಗರು ನಿರೂಪಿಸಿದ್ದಾರೆ. ಹೆಣ್ಣುಮಕ್ಕಳನ್ನು ಪೀಡಿಸುವ ಬಿಜೆಪಿ ಗೆ ಕೀಚಕ, ದುಶ್ಯಾಸನರು ಆದರ್ಶ ಪುರುಷರೇ ಹೊರತು ರಾಮನಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇದನ್ನೂ ಓದಿ:ಶಿವಾಜಿ ನಾಡಿನಲ್ಲಿ ಪಾಕಿಸ್ಥಾನ ಜಿಂದಾಬಾದ್ ಕೂಗುವ ಹಕ್ಕು ಯಾರಿಗೂ ಇಲ್ಲ: ಶಿಂಧೆ